ತೆಕ್ಕಟ್ಟೆ: ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಈಚರ್ ವಾಹನ; ತಪ್ಪಿದ ಭಾರೀ ಅನಾಹುತ
Team Udayavani, Nov 28, 2022, 7:12 PM IST
ತೆಕ್ಕಟ್ಟೆ: ತೆಕ್ಕಟ್ಟೆ ರಾ.ಹೆ. 66ರ ಪ್ರಮುಖ ಜಂಕ್ಷನ್ನಲ್ಲಿ ಚಲಿಸುತ್ತಿದ್ದ ಈಚರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ನ. 28ರಂದು ಬೆಳಗ್ಗೆ ಗಂಟೆ 11 ಗಂಟೆಯ ಸುಮಾರಿಗೆ ಸಂಭವಿಸಿದೆ.
ಕುಂದಾಪುರದಿಂದ ಉಡುಪಿ ಕಡೆಗೆ ಮರಳು ಸಾಗಿಸುತ್ತಿದ್ದ ಈಚರ್ ವಾಹನ ಎದುರಿನಲ್ಲಿರುವ ಚಲಿಸುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಆಯತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಈ ಪ್ರಮುಖ ಜಂಕ್ಷನ್ನಲ್ಲಿ ಸದಾ ಜನದಟ್ಟಣೆಯಿಂದ ಕೂಡಿದ್ದು, ಅದೃಷ್ಟವಶಾತ್ ಸಂಭವನೀಯ ಭಾರೀ ಅವಘಡವೊಂದು ತಪ್ಪಿದಂತಾಗಿದೆ.
ಗೊಂದಲಮಯ ಜಂಕ್ಷನ್
ತೆಕ್ಕಟ್ಟೆಯಲ್ಲಿ ಗ್ರಾಮೀಣ ಸಂಪರ್ಕ ರಸ್ತೆಯಿಂದ ಬರುವ ವಾಹನಗಳು ಏಕಾಏಕಿ ರಾ.ಹೆ. 66 ಅನ್ನು ಪ್ರವೇಶಿಸುತ್ತಿದ್ದು, ರಸ್ತೆಯ ಎರಡು ಕಡೆಗಳಲ್ಲಿ ಸಮೀಪದಲ್ಲಿಯೇ ಬಸ್ ತಂಗುದಾಣದಲ್ಲಿ ಬಸ್ ರಸ್ತೆಯ ಮೇಲೆ ನಿಲ್ಲಿಸುವ ಪರಿಣಾಮ ವಾಹನ ಸವಾರರಿಗೆ ಗೊಂದಲವಾಗುತ್ತಿದೆ. ಇದೇ ಕಾರಣದಿಂದ ಇಲ್ಲಿ ಹಲವು ಅವಘಡಗಳು ಸಂಭವಿಸಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ