ಕೊಂಕಣ ಸುತ್ತಿ ಮೈಲಾರಕ್ಕೆ  ಹೋಗುವ ಸ್ಥಿತಿ 


Team Udayavani, Aug 9, 2021, 4:00 AM IST

ಕೊಂಕಣ ಸುತ್ತಿ ಮೈಲಾರಕ್ಕೆ  ಹೋಗುವ ಸ್ಥಿತಿ 

ಆತ್ರಾಡಿ-ಹಿರೆಬೆಟ್ಟು ಗ್ರಾಮವನ್ನು ಕಾಡುವ ಪ್ರಮುಖ ಸಮಸ್ಯೆಗಳಲ್ಲಿ ರಸ್ತೆ ಸಮಸ್ಯೆಒಂದು. ಇದರ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಇಂದಿನ ಈ ಸರಣಿಯಲ್ಲಿದೆ.

ಉಡುಪಿ: ಮಣಿಪಾಲದ ಟ್ಯಾಪ್ಮಿ ಮುಂಭಾಗದಿಂದ ಹಾದು ಹೋಗುವ ಆತ್ರಾಡಿ- ಹಿರೇಬೆಟ್ಟು ಗ್ರಾ.ಪಂ.ನ್ನು ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ವಾಹನಗಳು ಸಂಚರಿಸಲು ಹಿಂದೇಟು ಹಾಕುತ್ತಿವೆ. ಕಳೆದೊಂದು ವರ್ಷದಿಂದ ಕಾಡುತ್ತಿರುವ ಸಮಸ್ಯೆ ಇದೀಗ ಮಳೆಗಾಲದಲ್ಲಿ ಇನ್ನಷ್ಟ ಭೀಕರ ಸ್ವರೂಪವನ್ನು ಪಡೆದುಕೊಂಡಿದೆ.

80 ಬಡಗಬೆಟ್ಟು ಮಾರ್ಗವಾಗಿ ಸಾಗಿ ಆತ್ರಾಡಿಯನ್ನು ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ವಾಹನ ಸವಾರರು ನಿರ್ದಿಷ್ಟ ದಿಕ್ಕಿನಿಂದ ಈ ಮಾರ್ಗವಾಗಿ ಓಡಾಡುವುದು ಕಷ್ಟಕರವಾಗಿದೆ. ಹೀಗಾಗಿ ವಾಹನಗಳು, ಆಟೋಗಳು ಹೊಂಡಗಳಿಲ್ಲದ ರಸ್ತೆಯಲ್ಲಿ ಸಂಚರಿಸಲು ಹೋಗಿ ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಸಾಗುವುದರಿಂದ ನಿತ್ಯ ಜಗಳ, ತಂಟೆ ತಕರಾರುಗಳು ನಡೆಯುತ್ತಿವೆ. ಅಲ್ಲದೇ ಅಪಘಾತಗಳು ಸಂಭವಿಸುತ್ತಿದೆ.

 ಬಸ್‌ ಸೇವೆ ಇಲ್ಲ:

ಸ್ಥಳೀಯರಿಗೆ ಟ್ಯಾಪ್ಮಿ ಮೂಲಕ ಮಣಿಪಾಲವನ್ನು ಕಡಿಮೆ ಸಮಯದಲ್ಲಿ ಯಾವುದೇ ಟ್ರಾಫಿಕ್‌ ಸಮಸ್ಯೆ ಇಲ್ಲದೇ ಸಂಪರ್ಕಿಸ ಬಹುದಾಗಿದೆ. ಲಾಕ್‌ಡೌನ್‌ ವೇಳೆ ಹಿರೇಬೆಟ್ಟು -ಮಣಿಪಾಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ ಸೇವೆ ಸ್ಥಗಿತಗೊಂಡಿದ್ದು, ಇದುವರೆಗೆ ಪ್ರಾರಂಭವಾಗಿಲ್ಲ. ಇದರಿಂದಾಗಿ ಸ್ಥಳೀಯರು ಮಣಿಪಾಲದಿಂದ ಹಿರೇಬೆಟ್ಟುವಿಗೆ ಬರಲು ಬಾಡಿಗೆ ಅಥವಾ ಸ್ವಂತ ವಾಹನದಲ್ಲಿ ಬರಬೇಕಾದ ಪರಿಸ್ಥಿತಿ ಇದೆ.

 2 ಕಿ.ಮೀ.ಗೆ 7 ಕಿ.ಮೀ. ಸಾಗಬೇಕು:

ಆತ್ರಾಡಿಯಲ್ಲಿ ಸುಮಾರು 579 ಮನೆಗಳಿವೆ. ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಉದ್ದಿಮೆಗಳು ಇಲ್ಲದೆ ಇರುವುದರಿಂದ ಉದ್ಯೋಗಕ್ಕಾಗಿ ಹಾಗೂ ನಿತ್ಯ ಅವಶ್ಯಕತೆಗಳಿಗಾಗಿ ಸ್ಥಳೀಯರು ಮಣಿಪಾಲಕ್ಕೆ ಹೋಗಬೇಕಾದ ಪರಿಸ್ಥಿತಿ. ಹಿಂದೆ ಮೂರು ಕಿ.ಮೀ. ಕ್ರಮಿಸಿದರೆ ಮಣಿಪಾಲ ತಲುಪುತ್ತಿದ್ದವರು ಇದೀಗ ಕೊಂಕಣ ಸುತ್ತಿ ಮೈಲಾರಕ್ಕೆ ಹೋಗುವಂತೆ ಸ್ಥಳೀಯರು ಆತ್ರಾಡಿ, ಪರ್ಕಳ ಮಾರ್ಗವಾಗಿ ಸುಮಾರು 7 ಕಿ.ಮೀ. ಕ್ರಮಿಸಿ ಮಣಿಪಾಲವನ್ನು ತಲುಪಬೇಕಾಗಿದೆ.

ರಸ್ತೆ ಇಕ್ಕೆಲದಲ್ಲಿ ಭೂ ಕುಸಿತ :

ಈ ಮಾರ್ಗದ ಸುಮಾರು 2 ಕಿ.ಮೀ. ರಸ್ತೆಯಲ್ಲಿನ ಡಾಮರು ಕಿತ್ತು ಹೋಗಿ ಅಲ್ಲಲ್ಲಿ ಡಾಮರು ಕಿತ್ತು, ಜೆಲ್ಲಿ ಕಲ್ಲುಗಳು ರಸ್ತೆಯ ಮೇಲೆ ಹರಡಿಕೊಂಡಿದೆ. ಇನ್ನು ಎರಡು ಕಡೆಯಲ್ಲಿ ರಸ್ತೆ ನಿರ್ಮಿಸಲು ಅಗೆಯಲಾದ ಪ್ರದೇಶದಲ್ಲಿನ ಗುಂಡಿಗಳಲ್ಲಿ ನೀರು ನಿಂತು ಮಾರ್ಗವು ಕೆಸರು ಮಯಾವಾಗಿದೆ. ಇನ್ನು ಕೆಲವಡೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಇಕ್ಕೆಲದಲ್ಲಿ ಭೂಕುಸಿತ ಉಂಟಾಗಿದೆ.

ಇತರ ಸಮಸ್ಯೆಗಳೇನು? :

  • ಬಸ್‌ ಸೇವೆ ಸ್ಥಗಿತಗೊಂಡಿದ್ದು, ವಾಹನಗಳನ್ನು ಬಾಡಿಗೆ ಮಾಡಿಕೊಂಡು ಹೋಗಬೇಕು
  • ಅಗತ್ಯ ವಸ್ತುಗಳ ಖರೀದಿಗೆ ಬಹುದೂರ ಸಾಗಬೇಕಿದೆ.
  • ರಸ್ತೆಯ ಎರಡು ಬದಿಯಲ್ಲಿ ಪೊದೆಗಳು ಬೆಳೆದಿದ್ದರಿಂದ ರಾತ್ರಿ ಹಗಲು ವಿಷಪೂರಿತ ಹಾವು ಕಾಟ.
  • ನಿರ್ಜನ ಪ್ರದೇಶದಲ್ಲಿ ಕಳ್ಳರ ಕಾಟ
  • ತ್ಯಾಜ್ಯ ಸಮಸ್ಯೆ
  • ಬೀದಿ ದೀಪ ಕೊರತೆ

ಶೀಘ್ರದುರಸ್ತಿಗೊಳಿಸಿ:

ದ್ವಿಚಕ್ರ ವಾಹನ ಸವಾರರು ಹೊಂಡ ತಪ್ಪಿಸಲು ಹೋಗಿ ಮಾರ್ಗ ಪಕ್ಕದ ಪೊದೆಗಳಿಗೆ ಬಿದ್ದು ಗಾಯಗೊಂಡಿರುವ ಹಲವು ನಿದರ್ಶನಗಳಿವೆ. ಮೇ ತಿಂಗಳ ಅಂತ್ಯದಲ್ಲಿ ರಸ್ತೆ ನಿರ್ಮಿಸಲು ಅಲ್ಲಲ್ಲಿ ರಸ್ತೆಯನ್ನು ಅಗೆದು ಹಾಗೇ ಬಿಡಲಾಗಿದೆ. ಈ ಮಾರ್ಗ ದುರಸ್ತಿಗೊಂಡರೆ ಆತ್ರಾಡಿ ಜನರು ಕೇವಲ 3 ಕಿ.ಮೀ. ಕ್ರಮಿಸಿದರೆ ಮಣಿಪಾಲವನ್ನು ತಲುಪಬಹುದು.-ಕೃಷ್ಣ ಪ್ರಸಾದ್‌ಆತ್ರಾಡಿ,   ಹಿರೇಬೆಟ್ಟು ನಿವಾಸಿ.

ಕಾಮಗಾರಿಗೆ ಹಿನ್ನಡೆ :

ರಸ್ತೆ ನಿರ್ಮಾಣ ಮಾಡಲು ಟೆಂಡರ್‌ ಆಗಿದೆ. ಮಳೆಯಿಂದಾಗಿ ಕಾಮಗಾರಿಗೆ ಹಿನ್ನಡೆಯಾಗಿದೆ. ಜನರಿಗೆ ಸಮಸ್ಯೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರ ಪರಿಹಾರ ಕಲ್ಪಿಸುವತ್ತ ಗಮನ ಹರಿಸಲಾಗುತ್ತದೆ. – ರೂಪಾ ಶೆಟ್ಟಿ, ಆತ್ರಾಡಿ-ಹಿರೇಬೆಟ್ಟು ಗ್ರಾ.ಪಂ. ಅಧ್ಯಕ್ಷೆ

 

-ತೃಪ್ತಿ ಕುಮ್ರಗೋಡು

 

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.