ಹದಗೆಟ್ಟ ಗಾಂಧಿನಗರ-ನಡಾಯಿಪಲ್ಕೆ ಸಂಪರ್ಕ ರಸ್ತೆ

ರಸ್ತೆಯ ಹೊಂಡಗಳಲ್ಲಿ ನಿಲ್ಲುವ ಮಳೆ ನೀರು; ಡಾಮರು ಕಾಣದೆ 15 ವರ್ಷ

Team Udayavani, Sep 16, 2019, 5:18 AM IST

1509PALLI01

ರಸ್ತೆಯಲ್ಲಿ ಉಂಟಾದ ಹೊಂಡಗಳಲ್ಲಿ ನಿಂತಿರುವ ಮಳೆ ನೀರು.

ಬಜಗೋಳಿ (ಪಳ್ಳಿ ): ನಲ್ಲೂರು ಗ್ರಾ.ಪಂ. ವ್ಯಾಪ್ತಿಯ ಗಾಂಧಿನಗರ-ನಡಾಯಿಪಲ್ಕೆ ಸಂಪರ್ಕ ರಸ್ತೆಯು ಹೊಂಡ ಗುಂಡಿಗಳಿಂದ ಆವೃತವಾಗಿ ಸಂಚಾರಕ್ಕೆ ದುಸ್ತರವಾಗಿದೆ.

ಈ ರಸ್ತೆಯು ಸುಮಾರು 3.5 ಕಿ.ಮೀ. ಉದ್ದವಿದ್ದು, ಡಾಮರು ಕಾಣದೆ ಸುಮಾರು 15 ವರ್ಷಗಳೇ ಕಳೆದಿವೆ. ರಸ್ತೆಯ ಆರಂಭದ ಭಾಗದಲ್ಲಿ ಸುಮಾರು 100 ಮೀ. ಮತ್ತು ಮಧ್ಯ ಭಾಗದಲ್ಲಿ 100 ಮೀ. ಸೇರಿ ಒಟ್ಟು 200ಮೀ.ಗಳಷ್ಟು ರಸ್ತೆ ಕಾಂಕ್ರಿಟೀಕರಣಗೊಂಡಿದೆ. ಉಳಿದ ರಸ್ತೆ ಮಣ್ಣಿನ ರಸ್ತೆ ಯಂತಾಗಿ ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸಂಪರ್ಕ ರಸ್ತೆ
ಈ ಭಾಗದಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳಿದ್ದು, ಎಸ್‌. ಟಿ. ಕಾಲನಿಯೂ ಇದೆ. ನಡಾಯಿಪಲ್ಕೆ ಗ್ರಾಮಸ್ಥರು ಬಜಗೋಳಿ ಪೇಟೆ ಸಂಪರ್ಕಿಸಲು ಇದೇ ಮುಖ್ಯ ರಸ್ತೆ. ತುರ್ತು ಸಂದರ್ಭ ಬಜಗೋಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸಲೂ ಈ ರಸ್ತೆಯ ಮೂಲಕವೇ ಸಾಗಬೇಕು. ಬಜಗೋಳಿ, ಗುರ್ಗಲ್‌ಗ‌ುಡ್ಡೆ ಮೂಲಕ ಮಾಳಕ್ಕೆ ತೆರಳಲು ಗಾಂಧಿನಗರ, ನಡಾಯಿಪಲ್ಕೆಯ ಬಹುತೇಕ ಗ್ರಾಮಸ್ಥರು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ.

ರಸ್ತೆಯ ಅವ್ಯವಸ್ಥೆಯನ್ನು ಕಂಡು ಆಟೋ ಚಾಲಕರು ಸಂಚರಿಸಲು ಹಿಂದೇಟು ಹಾಕುತ್ತಿದ್ದು, ಸಾರ್ವಜನಿಕರು ಸಂಕಷ್ಟ ಪಡುವಂತಾಗಿದೆ. ಮಳೆಗಾಲದಲ್ಲಿ ಕೆಸರು, ಬೇಸಗೆಯಲ್ಲಿ ಧೂಳು ಆವರಿಸುವ ಕಾರಣ ಸಾರ್ವಜನಿಕರು ರಸ್ತೆ ಅವ್ಯವಸ್ಥೆ ಕುರಿತು ಹಿಡಿ ಶಾಪ ಹಾಕುವಂತಾಗಿದೆ.

ರಸ್ತೆ ದುರಸ್ತಿಪಡಿಸುವಂತೆ ಹಲವಾರು ಬಾರಿ ಸಂಬಂಧ ಪಟ್ಟ ಇಲಾಖೆಗಳ ಗಮನ ಸೆಳೆಯಲಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇನ್ನಾದರೂ ಎಚ್ಚೆತ್ತು ತತ್‌ಕ್ಷಣ ರಸ್ತೆಯ ಡಾಮರೀಕರಣಕ್ಕೆ ಮುಂದಾಗುವ ಮೂಲಕ ದಶಕಗಳ ಬೇಡಿಕೆ ಈಡೇರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಸ್ತಾವನೆ ಸಲ್ಲಿಕೆ
ರಸ್ತೆ ಕಾಮಗಾರಿ ಬಗ್ಗೆ 50 ಲಕ್ಷ ರೂ. ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಅನುದಾನ ಮಂಜೂರುಗೊಂಡ ಬಳಿಕ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು.
-ಲೋಕೇಶ್‌ ಶೆಟ್ಟಿ, ಅಧ್ಯಕ್ಷರು, ನಲ್ಲೂರು ಗ್ರಾ.ಪಂ.

ಶಾಶ್ವತ ಪರಿಹಾರ ಬೇಕು
ಬಹುಕಾಲದ ಬೇಡಿಕೆಯಾದ ಈ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಪ್ರಯತ್ನಿಸಬೇಕು.
-ಹರೀಶ್‌ ನಡಾಯಿಪಲ್ಕೆ, ಗ್ರಾಮಸ್ಥರು

ಶೀಘ್ರ ಡಾಮರೀಕರಣಗೊಳಿಸಿ
ದಶಕಗಳ ಬೇಡಿಕೆಯಾದ ಗಾಂಧಿನಗರ-ನಡಾಯಿಪಲ್ಕೆ ಸಂಪರ್ಕ ರಸ್ತೆಯನ್ನು ಶೀಘ್ರ ಡಾಮರೀಕರಣಗೊಳಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪ್ರಯತ್ನಿಸಬೇಕು.
– ಅಜಿತ್‌, ನಡಾಯಿಪಲ್ಕೆ

– ಸಂದೇಶ್‌ ಕುಮಾರ್‌ ನಿಟ್ಟೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.