ಪಾಂಗಾಳ: ಸಂಪರ್ಕ ರಸ್ತೆಯ ಮರು ಡಾಮರೀಕರಣಕ್ಕೆ ಜನಾಗ್ರಹ


Team Udayavani, Jan 9, 2019, 8:45 PM IST

kaupu-road-9-1.jpg

ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಗೆ ಬಲಿಯಾದ ಪಾಂಗಾಳ-ಆಲಡೆ ರಸ್ತೆ ದುರಸ್ತಿ ಕಾಣದೆ ಗ್ರಾಮಸ್ಥರು ಸಂಚಾರಕ್ಕೆ ಸಂಕಟ ಪಡುವುದರೊಂದಿಗೆ ಇಲಾಖಾಧಿಕಾರಿಗಳಿಗೆ ಹಿಡಿಶಾಪ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿ ನಿರ್ಮಾಣಗೊಂಡು ಕಳೆದ 5-6 ವರ್ಷಗಳಿಂದಲೂ ಸ್ಥಳೀಯರು, ಗ್ರಾಮಸ್ಥರು, ವಾಹನ ಸಂಚಾರಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮನವಿಗಳನ್ನು ನೀಡುತ್ತಲೇ ಇದ್ದರು. ಕಾಪುವಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲೂ ಗಮನ ಸೆಳೆದಿದ್ದರು. ಆದರೆ ಈವರೆಗೆ ಸಮಸ್ಯೆ ಬಗೆಹರಿದಿಲ್ಲ.

ಜಾತ್ರೆ ವೇಳೆ ಹೆಚ್ಚಿನ ದಟ್ಟನೆ
ಈ ರಸ್ತೆಯು ಈ ಭಾಗದ ಪ್ರಮುಖ ಇತಿಹಾಸ, ಕಾರಣಿಕ ಪ್ರಸಿದ್ಧ ಎರಡು ಆಲಡೆಗಳ ಸಹಿತ ಸುಮಾರು 80ರಷ್ಟು ಮನೆಗಳಿಗೆ ಸಂಪರ್ಕವನ್ನು ಕಲ್ಪಿಸುತ್ತದೆ. ನಿತ್ಯ ನೂರಾರು ಜನರು ಈ ರಸ್ತೆಯನ್ನೇ ಸಂಪರ್ಕಕ್ಕೆ ಆಶ್ರಯಿಸಿದ್ದಾರೆ. ವರ್ಷಕ್ಕೆ ಎರಡು ದಿನ ನಡೆಯುವ ಆಲಡೆಗಳ ಜಾತ್ರಾ ಸಂದರ್ಭ (ಸಿರಿ ಜಾತ್ರೆ) ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಈ ವೇಳೆ ವಾಹನ ಸಂಚಾರಕ್ಕೆ, ಪಾರ್ಕಿಂಗ್‌ಗೆ ಅಡೆತಡೆ ಉಂಟಾಗುತ್ತಿದ್ದು, ಜನರು ಬವಣೆ ಪಡುವಂತಾಗಿದೆ.

ವಾಹನ ಸಂಚರಿಸಲು ಹಿಂದೇಟು 
ಮಳೆಗಾಲದಲ್ಲಂತೂ ಇಲ್ಲಿನ ಈ ಮಣ್ಣಿನ ರಸ್ತೆಯ ಕೆಸರು ನೀರಿನ ಅಭಿಷೇಕ ತಪ್ಪಿದ್ದಲ್ಲ. ವಾಹನ ಸಂಚಾರವೂ ಕಷ್ಟಕರವಾಗಿದ್ದು, ಶಾಲಾ ವಾಹನಗಳೂ ಮಕ್ಕಳನ್ನು ಕರೆತರಲು ಈ ರಸ್ತೆಯಲ್ಲಿ ಸಂಚರಿಸಲು ಒಪ್ಪುತ್ತಿಲ್ಲ. ಈ ಬಗ್ಗೆ ಸ್ಥಳೀಯ ಇನ್ನಂಜೆ ಗ್ರಾ.ಪಂ. ಗಮನವನ್ನು ಗ್ರಾಮಸ್ಥರು ಸೆಳೆದಿದ್ದು ಪಂಚಾಯತ್‌ ಸಭೆಯಲ್ಲಿ ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿ, ಹೆದ್ದಾರಿ ಇಲಾಖೆಗಳಿಗೆ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿ ಪತ್ರವನ್ನೂ ಬರೆಯಲಾಗಿದೆ. ಇಷ್ಟಾದರೂ ಹೆದ್ದಾರಿ ಗುತ್ತಿಗೆದಾರರ ದಿವ್ಯ ನಿರ್ಲಕ್ಷ್ಯ, ಇಲಾಖಾಧಿಕಾರಿಗಳ ಮೌನದ ಬಗ್ಗೆ ಜನರು ಸಹನೆ ಕಳೆದುಕೊಂಡಿದ್ದಾರೆ.

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಿ
ಪಾಂಗಾಳ-ಆಲಡೆ-ಮಂಡೇಡಿ ಸಂಪರ್ಕದ ಪ್ರಮುಖ ರಸ್ತೆ ಇದಾಗಿದೆ. ಹೆದ್ದಾರಿ ಕಾಮಗಾರಿಯಿಂದ ಇದ್ದ ಡಾಮರು ರಸ್ತೆಯನ್ನು ನಾವು ಕಳೆದುಕೊಳ್ಳುವಂತಾಗಿದೆ. ಮರು ಡಾಮರೀಕರಣ ಮಾಡಿಲ್ಲದಿರುವುದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಕೂಡಲೇ ಇಲಾಖೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು.
– ರಮಾನಂದ ಶೆಟ್ಟಿ, ಮುಕ್ಕಾಲಿ ಮನೆ

ಪ್ರತಿಫ‌ಲ ಶೂನ್ಯ 
ಈ ಸಮಸ್ಯೆಯನ್ನು ಜನಸ್ಪಂದನ ಸಭೆಯಲ್ಲಿ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದಿದ್ದು, ಇದುವರೆಗೂ ಪ್ರತಿಫಲ ಶೂನ್ಯವಾಗಿದೆ. ಪಂಚಾಯತ್‌ ಸಾಮಾನ್ಯ ಸಭೆಯಲ್ಲೂ ಈ ಬಗ್ಗೆ ನಿರ್ಣಯದ ಮೂಲಕ ಹೆದ್ದಾರಿ ಇಲಾಖೆಗೂ ನೊಟೀಸ್‌ ನೀಡಲಾಗಿದೆ. ಆದರೂ ಯಾವುದೇ ರೀತಿಯಾದ ಪ್ರತಿಕ್ರಿಯೆ ಇಲ್ಲ. 
– ನಾಗೇಶ್‌ ಭಂಡಾರಿ, ಇನ್ನಂಜೆ ಗ್ರಾ.ಪಂ. ಸದಸ್ಯ

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.