ಹದಗೆಟ್ಟಿದೆ ಕೊಂಡಳ್ಳಿ ಕ್ರೋಢಬೈಲೂರು ರಸ್ತೆ


Team Udayavani, Jun 22, 2018, 3:40 AM IST

krodhabailur-21-6.jpg

ವಿಶೇಷ ವರದಿ – ಕುಂದಾಪುರ: ಅಂಪಾರು ಸಮೀಪದ ಕೊಂಡಳ್ಳಿ ಕ್ರೋಢಬೈಲೂರು ರಸ್ತೆ ಹದಗೆಟ್ಟಿದ್ದು ಮಳೆಗಾಲದ ಈ ಸಂದರ್ಭ ಅಧ್ವಾನವಾಗಿದೆ. ಹೊಂಡಬಿದ್ದ ರಸ್ತೆಯಲ್ಲಿ ಓಡಾಟ ವಾಹನ ಸವಾರರು ಹಾಗೂ ಊರವರಿಗೆ ಸಂಕಷ್ಟ ತಂದಿದೆ.

ಡಾಮರಿಲ್ಲ
ಶಂಕರನಾರಾಯಣ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಈ ರಸ್ತೆ ಸುಮಾರು 3 ಕಿಮೀ. ಇದ್ದು ಎಂಟು ವರ್ಷಗಳ ಹಿಂದೆ ಮರು ಡಾಮರು ಭಾಗ್ಯ ಕಂಡಿದೆ. ಅದರ ನಂತರ ಈ ಕಡೆಗೆ ಡಾಮರೀಕರಣಕ್ಕೆ ಅನುದಾನ ಮಂಜೂರಾಗಿಲ್ಲ. ಹಾಕಿದ ಡಾಮರು ಅಲ್ಲಲ್ಲಿ ಕಿತ್ತು ಹೋಗಿದೆ. ರಸ್ತೆಯಲ್ಲಿ ಬಿದ್ದ ಹೊಂಡಗಳಿಗೆ ಮುಕ್ತಿ ಸಿಕ್ಕಿಲ್ಲ. ಈಗಾಗಲೇ ಮಳೆಗಾಲ ಆರಂಭಗೊಂಡಿದ್ದು, ನೀರು ತುಂಬಿದ ಹೊಂಡಗಳಿಂದಾಗಿ ವಾಹನ ಸವಾರರು ನರಕ ಯಾತನೆ ಅನುಭವಿಸುತ್ತಿದ್ದಾರೆ. ಕೊಂಡಳ್ಳಿಯಲ್ಲಿ ಬಸ್‌ ನಿಲ್ದಾಣವಿದ್ದು ಬೈಲೂರಿಗೆ ರಸ್ತೆ ಮುಗಿಯುತ್ತದೆ. ನಂತರ ಹೊಳೆಯಿದೆ.

ಕಾಲನಿಗಳಿವೆ
ಜನತಾ ಕಾಲನಿ, ಆಶ್ರಯ ಕಾಲನಿ, ನೂಜಿ, ನಾಯ್ಕರಬೆಟ್ಟು ಎಂದು ಈ ಭಾಗದಲ್ಲಿ ಪರಿಶಿಷ್ಟರ ಕಾಲನಿ ಮನೆಗಳಿವೆ. ಕಾಡುಪ್ರಾಣಿಗಳು ರಸ್ತೆ ದಾಟುವ ಕಾರಣ ಒಬ್ಬಿಬ್ಬರು ವಾಹನದಲ್ಲಿ ಓಡಾಡಲು ಭಯವಾಗುತ್ತದೆ. ಹಾಗಿರುವಾಗ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇದ್ದರೆ ಅನುಕೂಲ. ರಸ್ತೆ ಸಮಸ್ಯೆ ಸರಿ ಮಾಡದೇ ಇದ್ದರೆ ರಿಕ್ಷಾಗಳ ಚಾಲಕರು ಬಾಡಿಗೆಗೆ ಬರಲು ಒಪ್ಪುತ್ತಿಲ್ಲ. ಬಂದರೂ ಮರಳಿ ಹೋಗಲು ರಾತ್ರಿ ಸಂಚಾರ ಅವರಿಗೂ ಕಷ್ಟ. ಮಳೆಗಾಲ ಆರಂಭವಾದ ಹಿನ್ನೆಲೆ ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟಕರವಾಗಿದ್ದು, ರಿಕ್ಷಾ ಚಾಲಕರು ಇಲ್ಲಿಗೆ ಬರಲು ಒಪ್ಪುತ್ತಿಲ್ಲ. ಈ ಬಗ್ಗೆ ತುರ್ತು ಗಮನ ಹರಿಸುವ ಅಗತ್ಯವಿದೆ.

ಬಾಡಿಗೆ ವಾಹನಗಳೇ ಗತಿ
ಈ ರಸ್ತೆ ನೂರಾರು ಮನೆಗಳು, ಶಾಲೆಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಇಲ್ಲಿ ಕೇವಲ 1 ಸರಕಾರಿ ಬಸ್ಸಿದೆ. ಕ್ರೋಢಬೈಲೂರಿನಲ್ಲಿ 8ನೇ ತರಗತಿವರೆಗೆ ಸರಕಾರಿ ಶಾಲೆ ಇದೆ. ರಿಕ್ಷಾ ಬಾಡಿಗೆ ಮಾಡಿಕೊಂಡು ಹೋಗಬೇಕು. ಕೊಂಡಳ್ಳಿಯಿಂದ 40 ರೂ., ಅಂಪಾರಿನಿಂದ 80 ರೂ., ಶಂಕರನಾರಾಯಣದಿಂದ 150 ರೂ. ರಿಕ್ಷಾ ಬಾಡಿಗೆ ಆಗುತ್ತದೆ. ಜನಸಾಮಾನ್ಯರಿಗೆ ಇದು ಹೊರೆಯಾಗಿದೆ. ಆದ್ದರಿಂದ ಸರಕಾರಿ ಬಸ್ಸಿನ ಓಡಾಟ ಹೆಚ್ಚಿಸಬೇಕೆಂಬ ಮನವಿ ಇದೆ.

ಸಂಜೆ ಬಳಿಕ ಓಡಾಡುವಂತಿಲ್ಲ
ಸಂಜೆ ನಂತರ ಒಬ್ಬಿಬ್ಬರು ಓಡಾಡುವಂತಿಲ್ಲ. ರಿಕ್ಷಾಗಳು ಬಾಡಿಗೆ ತಂದರೆ ದೊಡ್ಡ ಮೊತ್ತದ ಬಾಡಿಗೆ ಪಾವತಿ ನಮಗೆ ಕಷ್ಟ . ಆದ್ದರಿಂದ ರಸ್ತೆ ದುರಸ್ತಿಗೊಳಿಸಿ ಸಾರ್ವಜನಿಕ ಬಸ್ಸಿನ ಸಂಖ್ಯೆ ಹೆಚ್ಚಿಸಬೇಕು ಎನ್ನುವುದೇ ನಮ್ಮ ಬೇಡಿಕೆ.
– ಮುತ್ತ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.