ಸಂಚಾರಕ್ಕೆ ಅಯೋಗ್ಯವಾದ ಪಿಲಾರುಖಾನ-ಸೂಡ ರಸ್ತೆ


Team Udayavani, Jul 10, 2018, 6:00 AM IST

0607shirva3.jpg

ಶಿರ್ವ: ಕಟಪಾಡಿ- ಶಿರ್ವ-ಬೆಳ್ಮಣ್‌ ಮುಖ್ಯರಸ್ತೆಯ ಪಿಲಾರುಖಾನದಿಂದ ಸೂಡ-ಪಳ್ಳಿಯನ್ನು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸಂಚಾರ ದುಸ್ತರವಾಗಿದೆ. ರಸ್ತೆಯ ಡಾಂಬರು ಕಿತ್ತು ಹೋಗಿ ಹೊಂಡ ಗುಂಡಿಗಳು ಉಂಟಾಗಿ ಅಪಾಯದ ಸ್ಥಿತಿ ನಿರ್ಮಾಣಗೊಂಡಿದೆ.

ಸಂಚಾರಕ್ಕೆ ಅಯೋಗ್ಯ
ಪಿಲಾರುಖಾನದಿಂದ ಸೂಡ ಮಾರ್ಗವಾಗಿ ಪಳ್ಳಿ ನಿಂಜೂರು ಕಡೆಗೆ ಮತ್ತು ನಂದಳಿಕೆ ಮತ್ತು ಹಾಳೆಕಟ್ಟೆ-ಕಲ್ಯಾಕಡೆಗೆ ಸಾಗಲು ಹತ್ತಿರದ ರಸ್ತೆಯಾಗಿದೆ.ಸೂಡದಿಂದ ಶಿರ್ವ ಹಾಗೂ ಬೆಳ್ಮಣ್‌ ಕಡೆಗೆ ಹೋಗುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲದೆ ಪ್ರತಿನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತಿವೆ.
ಅಧಿಕ ಭಾರದ ಲಾರಿ,ಟಿಪ್ಪರ್‌ಗಳ ಓಡಾಟದಿಂದಾಗಿ ರಸ್ತೆ ಮಳೆಗಾಲದಲ್ಲಿ ಸಂಪೂರ್ಣ ಹಾಳಾಗಿದೆ. ಮಳೆಗಾಲದಲ್ಲಿ ಹೊಂಡ ಗುಂಡಿಗಳಲ್ಲಿ ನೀರು ನಿಂತು ದ್ವಿಚಕ್ರವಾಹನ ಸವಾರರು ಮತ್ತು ಪಾದಾಚಾರಿಗಳ ಮೇಲೆ ಕೆಸರಿನ ಸಿಂಚನವಾಗುತ್ತಿದೆ.

ವಾಹನ ಸಂಚಾರಕ್ಕೆ ಹಿಂದೇಟು
ಹಲವಾರು ವರ್ಷಗಳ ಹಿಂದೆ ಈ ರಸ್ತೆಗೆ ಡಾಂಬರು ಹಾಕಲಾಗಿತ್ತು. ಸೂಡ ಹಾಗೂ ಪಳ್ಳಿಯ ಸಮೀಪದ ಪ್ರದೇಶಗಳಲ್ಲಿ ಕಲ್ಲಿನ ಕೋರೆಗಳಿದ್ದು ಅಧಿಕ ಭಾರದ ಕಲ್ಲುಗಳನ್ನು ಹೊತ್ತ ಲಾರಿ,ಟಿಪ್ಪರ್‌ಗಳು ಹೆಚ್ಚಾಗಿ ಈ ರಸ್ತೆಯಲ್ಲೇ ಸಾಗುವುದರಿಂದ ರಸ್ತೆಯ ಡಾಂಬರು ಕಿತ್ತು ಹೋಗಿ ಹೊಂಡ ಗುಂಡಿ ನಿರ್ಮಾಣಗೊಂಡಿದೆ. ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಪಳ್ಳಿಕಡೆ ಹೋಗಲು ನಿಗದಿತ ಅವಧಿಯಲ್ಲಿ ಮಾತ್ರ ಬಸ್‌ಗಳಿದ್ದು ಬೇರೆ ಸಮಯದಲ್ಲಿ ನಾಗರಿಕರು ರಿಕ್ಷಾ ಅಥವಾ ಇತರೆ ಬಾಡಿಗೆ ವಾಹನಗಳನ್ನು ಅವಲಂಬಿಸಬೇಕಾಗಿದೆ. ರಸ್ತೆ ಹೊಂಡ ಗುಂಡಿಗಳಿಂದ ಕೂಡಿರುವುದರಿಂದ ಬಾಡಿಗೆ ವಾಹನಗಳವರು ಈ ರಸ್ತೆಯಲ್ಲಿ ಸಾಗಲು ಹಿಂದೇಟು ಹಾಕುತ್ತಿದ್ದು ಜನರಿಗೆ ತೊಂದರೆಯಾಗಿದೆ.
ಕೆಲವು ವರ್ಷಗಳ ಹಿಂದೆ ಸೂಡದ ಕಲ್ಲಿನ ಕೋರೆಯಿಂದ ಜಲ್ಲಿಕಲ್ಲು ಸಾಗಿಸಿದ್ದರಿಂದಾಗಿ ಡಾಮರೀಕರಣಗೊಂಡಿದ್ದ ರಸ್ತೆಯು ಸಂಪೂರ್ಣ ಹದಗೆಟ್ಟು ವಾಹನ ಸವಾರರು ಚಲಿಸಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಬಳಿಕ ನಾಗರಿಕರ ಪ್ರತಿಭಟನೆಯಿಂದ ಮರು ಡಾಮರೀಕರಣಗೊಂಡಿತ್ತು.ಇದೀಗ ಸಂಚಾರಕ್ಕೆ ಅಯೋಗ್ಯವಾದ ರಸ್ತೆಯ ಬಗ್ಗೆ ನಾಗರಿಕರು ಪ್ರತಿಭಟಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಸಂಚಾರಕ್ಕೆ ದುಸ್ತರವಾದ ರಸ್ತೆಯನ್ನು ಜನಪ್ರತಿನಿಧಿಗಳು,ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಂಡು ಸರಿಪಡಿಸಬೇಕಾಗಿದೆ.

ರಸ್ತೆಯಲ್ಲಿ ಹೊಂಡ ಗುಂಡಿಗಳಿದ್ದು ವಾಹನದಲ್ಲಿ ಸಂಚಾರ ನಡೆಸುವುದೇ ಕಷ್ಟಕರವಾಗಿದೆ. ಶಾಲಾ ವಿದ್ಯಾರ್ಥಿಗಳು ಕೂಡಾ ಈ ಭಾಗದಿಂದ ಸಂಚರಿಸುತ್ತಿದ್ದು ಹೊಂಡಗಳಲ್ಲಿ ನೀರು ತುಂಬಿರುವುದರಿಂದಾಗಿ ದ್ವಿಚಕ್ರವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸೂಡ ಅರ್ಚಕರಾದ ಶ್ರೀಶ ಭಟ್‌ ಅವರು ಹೇಳುತ್ತಾರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.