ಕೋಟೆ: ಪ್ರಯಾಣ ಸುಗಮ, ನಿಟ್ಟುಸಿರು ಬಿಟ್ಟ ಸಂಚಾರಿಗಳು
Team Udayavani, Dec 20, 2018, 3:15 AM IST
ಕಟಪಾಡಿ: ತೀರಾ ಹದಗೆಟ್ಟು, ವಾಹನ ಸಂಚಾರಕ್ಕೆ ಕಷ್ಟ ಸಾಧ್ಯವಾಗಿದ್ದ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಟಪಾಡಿ-ಕೋಟೆ-ಮಟ್ಟು ಸಂಪರ್ಕದ ಪ್ರಮುಖ ಮೀನುಗಾರಿಕಾ ಇಲಾಖಾ ರಸ್ತೆಯು ಇದೀಗ ದುರಸ್ತಿ ಕೆಲಸ ಕಾರ್ಯ ನಡೆಯುವ ಮೂಲಕ ನಿತ್ಯ ಸಂಚಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಈ ಬಾರಿಯ ಮಳೆಗಾಲಕ್ಕೂ ಮುನ್ನವೇ ಈ ರಸ್ತೆಯು ಹೊಂಡ ಬಿದ್ದಿದ್ದು ವಾಹನ ಸಂಚಾರಕ್ಕೂ ಕಷ್ಟವಾಗುತ್ತಿತ್ತು. ಮೊದಲೇ ಅಗಲ ಕಿರಿದಾದ ರಸ್ತೆ ಇದಾಗಿದ್ದು ಮಳೆ ಸುರಿದ ಅನಂತರದಲ್ಲಿ ಬೃಹತ್ ಗಾತ್ರದ ಹೊಂಡಗಳ ಸಹಿತ ಕೆಲವೆಡೆ ಡಾಂಬರು ಕಿತ್ತು ಹೋಗಿ ಮಣ್ಣು, ಜಲ್ಲಿಯ ರಸ್ತೆಯಾಗಿ ಮಾರ್ಪಾಟಾಗಿ ಸಂಚಾರಿಗಳು ಸಂಕಷ್ಟಕ್ಕೀಡಾಗಿದ್ದರು. ಜನರ, ವಾಹನ ಸವಾರರ ಈ ನಿತ್ಯ ಬವಣೆಯ ಬಗ್ಗೆ ಉದಯವಾಣಿ ವರದಿಯನ್ನು ಪ್ರಕಟಿಸಿ ಇಲಾಖೆಯು ಗಮನ ಹರಿಸುವಂತೆ ಮಾಡಿತ್ತು. ಇದೀಗ ಈ ಪ್ರಮುಖ ಮೀನುಗಾರಿಕಾ ರಸ್ತೆಯು ದುರಸ್ತಿಯನ್ನು ಕಾಣುವ ಮೂಲಕ ಈ ಭಾಗದ ಜನರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.
ರಿಂಗ್ ಮಾದರಿಯ ಸಂಪರ್ಕ ರಸ್ತೆ
ಈ ರಸ್ತೆಯು ಪ್ರಮುಖವಾಗಿ ಮೀನುಗಾರರು ಹೆಚ್ಚು ಅವಲಂಬಿತವಾಗಿರುವ ಈ ಭಾಗದ ಪ್ರಮುಖ ರಿಂಗ್ ಮಾದರಿಯ ಸಂಪರ್ಕ ರಸ್ತೆಯು ಇದಾಗಿದ್ದು, ಕೆನರಾ ಬ್ಯಾಂಕ್ ಬಳಿ, ಅಂಬಾಡಿ ಜಂಕ್ಷನ್ ಬಳಿ ಸಹಿತ ಅಲ್ಲಲ್ಲಿ ಹೊಂಡ ಬಿದ್ದು, ಡಾಂಬರು ಕಿತ್ತು ಬಂದಿದ್ದು, ರಸ್ತೆ ಸಂಚಾರ ತ್ರಾಸದಾಯಕವಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಶಾಲಾ ವಾಹನಗಳೂ ಈ ರಸ್ತೆಯಲ್ಲಿ ಸಂಚರಿಸುತ್ತವೆ. ಪಾದಾಚಾರಿಗಳು ವಾಹನ ಬಂದಾಗ ಓಡಿ ಹೋಗಿ ಸುರಕ್ಷಿತ ಸ್ಥಳದಲ್ಲಿ ನಿಲ್ಲದಿದ್ದಲ್ಲಿ ಕೆಸರು ನೀರಿನ ಪ್ರೋಕ್ಷಣೆಗೊಳಗಾಗುತ್ತಿದ್ದರು.
ವಾಹನ ದಟ್ಟಣೆಯ ರಸ್ತೆ
ಮೊದಲೇ ಅಗಲ ಕಿರಿದಾದ ರಸ್ತೆ ಇದಾಗಿದ್ದು, ನಿತ್ಯ 7 ಬಸ್ಸುಗಳು ಈ ಭಾಗದಲ್ಲಿ ನಿಗದಿತ ವೇಳಾಪಟ್ಟಿಯಂತೆ ಜನಸೇವೆಯನ್ನು ನೀಡುತ್ತಿದೆ. ಇದರೊಂದಿಗೆ ಬೈಕ್, ಕಾರು, ರಿಕ್ಷಾ, ಟೆಂಪೋ, ಸರಕು ಸಾಗಾಟದ ವಾಹನಗಳು ಅಧಿಕವಾಗಿ ಈ ಭಾಗದಲ್ಲಿ ಸಂಚರಿಸುತ್ತಿರುವುದರಿಂದ ವಾಹನ ದಟ್ಟಣೆಯೂ ಅಧಿಕವಾಗಿದೆ. ಬೈಕ್, ಸೈಕಲ್ ಸವಾರರ ಸಂಚಾರ ನಿತ್ಯ ಸರ್ಕಸ್ನಂತಾಗಿದ್ದು, ಕೆಲ ಸವಾರರು ಬಿದ್ದು ಗಾಯಗೊಂಡ ಘಟನೆಗಳೂ ಸಂಭವಿಸಿತ್ತು.
ಈ ರಸ್ತೆಯು ಪಡುಭಾಗದಲ್ಲಿ ಕೈಪುಂಜಾಲು -ಮಟ್ಟು-ಕಟಪಾಡಿ, ಮಟ್ಟು-ಉದ್ಯಾವರ ಕೊಪ್ಲ-ಕಡೆತೋಟ-ಕನಕೋಡ-ಮಲ್ಪೆ ಸಂಪರ್ಕಕ್ಕೆ ರಿಂಗ್ ರಸೆ ¤ಮಾದರಿಯಲ್ಲಿ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಈ ಭಾಗದ ಮಾತ್ರವಲ್ಲದೇ ಉದ್ಯಾವರ ಭಾಗದ ಜನರೂ ಇದನ್ನೇ ಪ್ರಮುಖ ಸಂಪರ್ಕ ರಸ್ತೆಯಾಗಿ ಬಳಸಿಕೊಳ್ಳುತ್ತಿದ್ದಾರೆ.
ಹತ್ತು ಲಕ್ಷ ರೂ. ಬಳಕೆ
ಮೀನುಗಾರಿಕಾ ಕೊಂಡಿ ರಸ್ತೆ ದುರಸ್ತಿಯ ಯೋಜನೆಯಡಿ ಕಟಪಾಡಿ-ಕೋಟೆ-ಮಟ್ಟು ಸಂಪರ್ಕದ ಪ್ರಮುಖ ಮೀನುಗಾರಿಕಾ ಇಲಾಖಾ ರಸ್ತೆಯ ದುರಸ್ತಿ ಕೆಲಸ ಕಾರ್ಯವನ್ನು ಸುಮಾರು 10 ಲಕ್ಷ ರೂ. ಅನುದಾನವನ್ನು ಬಳಸಿಕೊಂಡು ನಡೆಸಲಾಗಿದೆ.
– ಉದಯ ಕುಮಾರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಬಂದರು ಮತ್ತು ಮೀನುಗಾರಿಕಾ ಇಲಾಖೆ
ತಾತ್ಕಾಲಿಕ ಪರಿಹಾರ
ಈ ರಸ್ತೆಯು ತಾತ್ಕಾಲಿಕವಾಗಿ ದುರಸ್ತಿಗೊಂಡಿದ್ದು ಸಂಚಾರಕ್ಕೆ ಅನುಕೂಲವಾಗಿದೆ. ಕಾಂಕ್ರೀಟಿಕರಣಗೊಂಡು ದ್ವಿಪಥವಾಗಿ ವಿಸ್ತರಿಸಿಕೊಂಡು ಇಕ್ಕೆಲಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ನಿರ್ಮಾಣಗೊಂಡಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂಬ ಆಶಯ ನಮ್ಮದು.
– ಮನೋಹರ್ ಜೆ. ಸಾಲ್ಯಾನ್, ಉಪಾಧ್ಯಕ್ಷ, ರಿಕ್ಷಾ ಯೂನಿಯನ್, ಕಟಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ