ರಾಡಿಯೆದ್ದ ಉಪ್ಪಿನಕುದ್ರು – ಬೇಡರಕೊಟ್ಟಿಗೆ ರಸ್ತೆ
Team Udayavani, Jul 22, 2019, 5:52 AM IST
ಕುಂದಾಪುರ: ತಲ್ಲೂರು ಗ್ರಾ.ಪಂ. ವ್ಯಾಪ್ತಿಯ ಉಪ್ಪಿನಕುದ್ರು ಶಾಲೆ ಬಳಿಯಿಂದ ಬೇಡರಕೊಟ್ಟಿಗೆ ಕಡೆಗೆ ಸಂಚರಿಸುವ ರಸ್ತೆಗೆ ಈ ಬಾರಿಯೂ ಡಾಮರೀಕರಣವಾಗದೆ ರಾಡಿಯೆದ್ದು ಹೋಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಬೇಡರಕೊಟ್ಟಿಗೆಯ ಬೊಬ್ಬರ್ಯ ದೈವಸ್ಥಾನದವರೆಗಿನ ಸುಮಾರು 2 ಕಿ.ಮೀ. ರಸ್ತೆಗೆ ಕಾಂಕ್ರಿಟೀಕರಣಕ್ಕೆ ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಮಂಜೂರಾಗಿತ್ತು. ಆದರೆ ಮಳೆಗಾಲಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸಮಸ್ಯೆಯಾಗಿದೆ.ಈ ರಸ್ತೆಯ ಎರಡೂ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸ್ವಲ್ಪ ದೂರದವರೆಗೆ ಜಲ್ಲಿ ಕಲ್ಲು ಹಾಕಲಾಗಿದೆ.
ಮತ್ತೆ ಉಳಿದ ರಸ್ತೆಯಿಡೀ ಕೆಸರುಮಯವಾಗಿದ್ದು, ವಾಹನ ಸವಾರರು ನಿತ್ಯ ಪರದಾಟ ನಡೆಸುತ್ತಿದ್ದಾರೆ.ಕನಿಷ್ಠ ಗ್ರಾಮ ಪಂಚಾಯತ್ ವತಿಯಿಂದಲಾದರೂ ಈ ರಸ್ತೆಗೆ ಜಲ್ಲಿ ಮಿಶ್ರಿತ ಮರಳನ್ನು ಹಾಕಿ, ಕೆಸರುಮಯ ರಸ್ತೆಯಿಂದ ಮುಕ್ತಿ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!