![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬೆಳ್ವೆ : ಹೊಂಡಗಳಿಂದ ತುಂಬಿದ ರಾಜ್ಯ ಹೆದ್ದಾರಿ
ಕೊಲ್ಲೂರು-ಶೃಂಗೇರಿ ಸಂಪರ್ಕಿಸುವ ರಸ್ತೆ
Team Udayavani, Sep 28, 2020, 12:15 PM IST
![ಬೆಳ್ವೆ : ಹೊಂಡಗಳಿಂದ ತುಂಬಿದ ರಾಜ್ಯ ಹೆದ್ದಾರಿ](https://www.udayavani.com/wp-content/uploads/2020/09/kund-tdy-2-1-620x372.jpg)
ಗೋಳಿಯಂಗಡಿ, ಸೆ. 27 : ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿ-90ರ ಬೆಳ್ವೆ ಪೇಟೆಯಲ್ಲಿ ರಸ್ತೆಯಲ್ಲಿ ಹೊಂಡ ಆಗಿರುವುದೋ ಅಥವಾ ಹೊಂಡದಲ್ಲಿಯೇ ರಸ್ತೆ ನಿರ್ಮಿಸಲಾಗಿ ದೆಯೇ ಎನ್ನುವ ಅನುಮಾನ ಮೂಡುತ್ತದೆ. ಕೊಲ್ಲೂರು- ಶೃಂಗೇರಿಯನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿ ಇದಾಗಿದ್ದು, ಬೆಳ್ವೆ ಪೇಟೆಯ ಆಸುಪಾಸಿನ ಒಂದು ಕಿ.ಮೀ. ವ್ಯಾಪ್ತಿಯ ಅಲ್ಲಲ್ಲಿ ಅನೇಕ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರು ನಿತ್ಯ ಯಾತನೆ ಅನುಭವಿಸುತ್ತಿದ್ದಾರೆ. ಬೈಕ್ ಸವಾರರ ಪಾಡಂತೂ ಹೇಳತೀರದಾಗಿದೆ.
ರಾಜ್ಯ ಹೆದ್ದಾರಿ ಈ ರೀತಿ ಹದಗೆಟ್ಟಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಈ ರಸ್ತೆಯ ವೀಡಿಯೋ, ಚಿತ್ರಗಳನ್ನು ಹರಿಯಬಿಟ್ಟಿದ್ದಾರೆ. ಕಳೆದ ಆಗಸ್ಟ್ನಲ್ಲಿ ಈ ಬಗ್ಗೆ “ಉದಯವಾಣಿ ಸುದಿನ’ ವರದಿ ಮಾಡಿದಾಗ ತತ್ಕ್ಷಣ ಸ್ಪಂದಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆಯ ಹೊಂಡಗಳನ್ನು ತೇಪೆ ಹಾಕಿ ಮುಚ್ಚಿದ್ದರು. ಆದರೆ ಮಳೆಯಿಂದಾಗಿ ಅದು ಅಷ್ಟೇ ಬೇಗ ಎದ್ದು ಹೋಗಿದೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.