ಬೆಳ್ವೆ : ಹೊಂಡಗಳಿಂದ ತುಂಬಿದ ರಾಜ್ಯ ಹೆದ್ದಾರಿ
ಕೊಲ್ಲೂರು-ಶೃಂಗೇರಿ ಸಂಪರ್ಕಿಸುವ ರಸ್ತೆ
Team Udayavani, Sep 28, 2020, 12:15 PM IST
ಗೋಳಿಯಂಗಡಿ, ಸೆ. 27 : ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿ-90ರ ಬೆಳ್ವೆ ಪೇಟೆಯಲ್ಲಿ ರಸ್ತೆಯಲ್ಲಿ ಹೊಂಡ ಆಗಿರುವುದೋ ಅಥವಾ ಹೊಂಡದಲ್ಲಿಯೇ ರಸ್ತೆ ನಿರ್ಮಿಸಲಾಗಿ ದೆಯೇ ಎನ್ನುವ ಅನುಮಾನ ಮೂಡುತ್ತದೆ. ಕೊಲ್ಲೂರು- ಶೃಂಗೇರಿಯನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿ ಇದಾಗಿದ್ದು, ಬೆಳ್ವೆ ಪೇಟೆಯ ಆಸುಪಾಸಿನ ಒಂದು ಕಿ.ಮೀ. ವ್ಯಾಪ್ತಿಯ ಅಲ್ಲಲ್ಲಿ ಅನೇಕ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರು ನಿತ್ಯ ಯಾತನೆ ಅನುಭವಿಸುತ್ತಿದ್ದಾರೆ. ಬೈಕ್ ಸವಾರರ ಪಾಡಂತೂ ಹೇಳತೀರದಾಗಿದೆ.
ರಾಜ್ಯ ಹೆದ್ದಾರಿ ಈ ರೀತಿ ಹದಗೆಟ್ಟಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಈ ರಸ್ತೆಯ ವೀಡಿಯೋ, ಚಿತ್ರಗಳನ್ನು ಹರಿಯಬಿಟ್ಟಿದ್ದಾರೆ. ಕಳೆದ ಆಗಸ್ಟ್ನಲ್ಲಿ ಈ ಬಗ್ಗೆ “ಉದಯವಾಣಿ ಸುದಿನ’ ವರದಿ ಮಾಡಿದಾಗ ತತ್ಕ್ಷಣ ಸ್ಪಂದಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆಯ ಹೊಂಡಗಳನ್ನು ತೇಪೆ ಹಾಕಿ ಮುಚ್ಚಿದ್ದರು. ಆದರೆ ಮಳೆಯಿಂದಾಗಿ ಅದು ಅಷ್ಟೇ ಬೇಗ ಎದ್ದು ಹೋಗಿದೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ