ಶಿರೂರು: ಮಳಿಗೆಯಿಂದ 2ಕೆ.ಜಿ. ಚಿನ್ನ, 15 ಕೆ.ಜಿ. ಬೆಳ್ಳಿ ಕಳವು
Team Udayavani, Apr 4, 2017, 1:11 PM IST
ಬೈಂದೂರು: ಶಿರೂರಿನ ಚಿನ್ನಾಭರಣದ ಅಂಗಡಿಯೊಂದರ ಹಿಂಭಾಗದ ಗೋಡೆ ಕೊರೆದು ನುಗ್ಗಿ ಕಳ್ಳತನ ನಡೆಸಲಾಗಿದೆ. ಇಲ್ಲಿನ ಗೋಲ್ಡ್ ಜುವೆಲರ್ಸ್ ಹಿಂಭಾಗದ ಗೋಡೆಯ ಮೇಲ್ಭಾಗದಲ್ಲಿರುವ ಚಿಕ್ಕ ಕಿಟಕಿಯ ಸರಳುಗಳನ್ನು ಗ್ಯಾಸ್ ಕಟ್ಟರ್ ಮೂಲಕ ಕೊರೆದು ಒಳನುಗ್ಗಿದ ಕಳ್ಳರು ಅಪಾರ ಪ್ರಮಾಣದ ಚಿನ್ನಾಭರಣ ದೋಚಿದ್ದಾರೆ. ಅಂಗಡಿಯಲ್ಲಿರುವ ಸಿಸಿ ಕೆಮರಾ ಸಂಪರ್ಕ ಕಡಿತಗೊಳಿಸಿದ್ದಾರೆ. ಮಾತ್ರವಲ್ಲದೇ ಹಾರ್ಡ್ ಡಿಸ್ಕ್ ಕದ್ದೊಯ್ದಿದ್ದಾರೆ. ಅಂಗಡಿಯ ಒಳ ಹೊರಗಿನ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರುವವರೇ ಈ ಕಳವು ನಡೆಸಿರುವ ಸಾಧ್ಯತೆ ಇದೆ.
ಸುಮಾರು ಎರಡು ಕೆ.ಜಿ. ಚಿನ್ನಾಭರಣ ಹಾಗೂ 15 ಕೆ.ಜಿ.ಯಷ್ಟು ಬೆಳ್ಳಿಯ ಆಭರಣಗಳು ಕಳವಾಗಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿಗಳು ಭೇಟಿ ನೀಡಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ