ಬಂಡೀಮಠ ಚರಂಡಿ ದುರಸ್ತಿ: ಚಪ್ಪಡಿ ಅಳವಡಿಕೆ
Team Udayavani, Jul 17, 2019, 5:31 AM IST
ಕಾರ್ಕಳ : ಪುರಸಭಾ ವ್ಯಾಪ್ತಿಯ 5ನೇ ವಾರ್ಡ್ ಬಂಡೀಮಠ ಎಸ್ಟಿ ಕಾಲನಿ ಸಮೀಪದ ಚರಂಡಿಗೆ ಚಪ್ಪಡಿ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಪುರಸಭೆಯ ಮೀಸಲು ನಿಧಿ 1.5 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ ಎಂದು ಪುರಸಭಾ ಎಂಜಿನಿಯರ್ ತಿಳಿಸಿದರು.
ಕಲ್ಲೊಟ್ಟೆ ಪರಿಸರದ ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿ ಸರಾಗವಾಗಿ ನೀರು ಹರಿಯುತ್ತಿರಲಿಲ್ಲ. ಸಾರ್ವಜನಿಕರಿಗೆ ದುರ್ನಾತ ಬೀರುವು ದರೊಂದಿಗೆ ಸೊಳ್ಳೆ ಉತ್ಪತ್ತಿ ತಾಣವಾಗಿಯೂ ಮಾರ್ಪಾಡಾಗಿತ್ತು. ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಸ್ಥಳೀಯರಲ್ಲಿ ಆವರಿಸಿತ್ತು. ಈ ಕುರಿತು ಪತ್ರಿಕೆ ವರದಿ ಪ್ರಕಟಿಸಿ, ಪುರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿತ್ತು.
ಇದೀಗ ಚರಂಡಿ ಹೂಳು, ತ್ಯಾಜ್ಯ ತೆಗೆದು ಚಪ್ಪಡಿ ಅಳವಡಿಸಿರುವುದರಿಂದ ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ