Padubidri ಕೈಗಾರಿಕ ಪ್ರದೇಶದಲ್ಲಿ ಕಲ್ಲು ಬಂಡೆ ಸ್ಫೋಟ, ಸಾಗಾಟ ಪತ್ತೆ

ಸ್ಫೋಟಕಗಳು, 4 ಟಿಪ್ಪರ್‌, ಹಿಟಾಚಿ ಯಂತ್ರ, ಕಂಪ್ರಸರ್‌ ಟ್ರ್ಯಾಕ್ಟರ್ ಸಹಿತ ಓರ್ವ ವಶಕ್ಕೆ

Team Udayavani, Dec 26, 2023, 12:40 AM IST

Padubidri ಕೈಗಾರಿಕ ಪ್ರದೇಶದಲ್ಲಿ ಕಲ್ಲು ಬಂಡೆ ಸ್ಫೋಟ, ಸಾಗಾಟ ಪತ್ತೆ

ಪಡುಬಿದ್ರಿ: ನಂದಿಕೂರು ಕೈಗಾರಿಕ ಪ್ರದೇಶದಲ್ಲಿರುವ ಕಲ್ಲು ಬಂಡೆಗಳಿಂದ ಕೂಡಿರುವ ಖಾಲಿ ನಿವೇಶನದಲ್ಲಿ ಯಾವುದೇ ರೀತಿಯ ಸ್ಫೋಟಕ ಪರವಾನಿಗೆ ಇಲ್ಲದೇ ಕಲ್ಲು ಬಂಡೆಗಳನ್ನು ಸ್ಫೋಟಿಸಿ ಅವುಗಳನ್ನು ಲಾರಿಗಳ ಮೂಲಕ ತುಂಬಿಸಿ ಕಾನೂನು ಬಾಹಿರವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಪಡುಬಿದ್ರಿ ಪೊಲೀಸರು ನಾಲ್ಕು ಟಿಪ್ಪರ್‌, ಸ್ಥಳದಲ್ಲಿ ಉಪಯೋಗಿಸುತ್ತಿದ್ದ ಹಿಟಾಚಿ ಯಂತ್ರ, ಕಂಪ್ರಸರ್‌ ಟ್ರ್ಯಾಕ್ಟರ್ ಹಾಗೂ ಬಂಡೆ ಸ್ಫೋಟಿಸಲು ಸಿದ್ಧತೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ಪಡುಬಿದ್ರಿ ಕ್ರೈಂ ಎಎಸ್‌ಐ ಸುದರ್ಶನ್‌ ದೊಡ್ಡಮನಿ ಅವರಿಗೆ ದೊರೆತ‌ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಖಾಲಿ ನಿವೇಶನದಲ್ಲಿ ಕಲ್ಲು ಬಂಡೆಗಳನ್ನು ಒಡೆದು ಹಾಕಿರುವುದು ಮತ್ತು ಒಡೆದಿರುವ ಬಂಡೆಕಲ್ಲುಗಳನ್ನು ಲೋಡ್‌ ಮಾಡಿರುವುದು ಪತ್ತೆ ಯಾಗಿದೆ.

ಬಂಡೆಕಲ್ಲುಗಳಲ್ಲಿ ಕೆಲವು ಕಡೆ ರಂಧ್ರ ಕೊರೆದು ಎಲೆಕ್ಟ್ರಿಕ್‌ ವಯರ್‌ ಸಂಪರ್ಕಿಸಿ ಬಂಡೆಕಲ್ಲುಗಳನ್ನು ಸ್ಫೋಟ ನಡೆಸಲು ಸಿದ್ಧತೆೆ ನಡೆಸಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಕಲ್ಲು ಬಂಡೆ ಸ್ಫೋಟಿಸುತ್ತಿದ್ದ ಮಂಜುನಾಥ ನಾಯ್ಕರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲಿದ್ದ ಟಿಪ್ಪರ್‌ ಲಾರಿ ಚಾಲಕರು ಓಡಿ ಹೋಗಿದ್ದಾರೆ. ಈ ಖಾಲಿ ಜಾಗವು ಐವನ್‌ ಎನ್ನುವವರಿಗೆ ಸೇರಿದ್ದಾಗಿದ್ದು ವೆರೋನಿಕಾ ಯಾನೆ ಶರ್ವಿನ್‌ ಅವರು ಸ್ಫೋಟಕ ಬಳಸಿ ಒಡೆಯಲು ಗುತ್ತಿಗೆ ವಹಿಸಿಕೊಂಡಿದ್ದಾಗಿ ಆರೋಪಿ ಮಂಜುನಾಥ ಬಾಯ್ಬಿಟ್ಟಿದ್ದಾನೆ.

ಸಂಬಂಧಪಟ್ಟ ಇಲಾಖೆ ಯಿಂದ ಬಂಡೆಕಲ್ಲನ್ನು ಸ್ಫೋಟಕ ಬಳಸಿ ಒಡೆಯಲು ಮತ್ತು ಒಡೆದ ಬಂಡೆಕಲ್ಲುಗಳನ್ನು ಟಿಪ್ಪರ್‌ಗಳ ಮೂಲಕ ಸಾಗಾಟ ಮಾಡಲು ಯಾವುದೇ ಪರವಾನಿಗೆ ಪಡೆದಿರುವುದಿಲ್ಲ. ಸ್ಥಳದಲ್ಲಿದ್ದ ಸ್ಫೋಟಕ ವಸ್ತುಗಳು, ಕಂಪ್ರಸರ್‌ ಟ್ರ್ಯಾಕ್ಟರ್‌, 4 ಟಿಪ್ಪರ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಜಾಗದ ಮಾಲಕ ಐವನ್‌, ವೆರೊನಿಕಾ ಯಾನೆ ಶರ್ವಿನ್‌, ಮಂಜುನಾಥ ನಾಯ್ಕರ್‌ ಮತ್ತು ಇತರರ ವಿರುದ್ಧ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.