ಕೊಡಚಾದ್ರಿ ಏರಲು ಕೊಲ್ಲೂರಿನಿಂದ ರೋಪ್‌ವೇ ; ನಡೆಯುತ್ತಿದೆ ಸಿದ್ಧತೆ  ; ಕರಾವಳಿಗೆ ಪ್ರಥಮ

ಉಭಯ ತಾಲೂಕುಗಳ ಪ್ರಗತಿಗೆ ಪೂರಕ

Team Udayavani, Jun 24, 2020, 6:28 AM IST

ಕೊಡಚಾದ್ರಿ ಏರಲು ಕೊಲ್ಲೂರಿನಿಂದ ರೋಪ್‌ವೇ ; ನಡೆಯುತ್ತಿದೆ ಸಿದ್ಧತೆ  ; ಕರಾವಳಿಗೆ ಪ್ರಥಮ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೊಲ್ಲೂರು: ಕೊಲ್ಲೂರಿನಿಂದ ಕೊಡಚಾದ್ರಿ ಬೆಟ್ಟಕ್ಕೆ ಸುಲಭ ಸಂಪರ್ಕ ಕಲ್ಪಿಸುವ ಮಹತ್ವಾ ಕಾಂಕ್ಷಿ ರೋಪ್‌ವೇ ಯೋಜನೆ ಜಾರಿಗೆ ಸಿದ್ಧತೆ ನಡೆಯುತ್ತಿದೆ.

ಇದು ಅನುಷ್ಠಾನಗೊಂಡರೆ ಬೈಂದೂರು, ಕುಂದಾಪುರ ತಾಲೂಕುಗಳಲ್ಲಿ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿ ಉಂಟಾಗಲಿದೆ.

ಕರಾವಳಿ ಪ್ರದೇಶದ ಮೊದಲ ರೋಪ್‌ವೇ ಎಂಬ ಹೆಗ್ಗಳಿಕೆಯೂ ಇದಕ್ಕೆ ಸಿಗಲಿದೆ. ಕೊಲ್ಲೂರು ದೇಗುಲಕ್ಕೆ ದಿನವೂ ಯಾತ್ರಾರ್ಥಿ ಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಬಹುಪಾಲು ಮಂದಿ ಕೊಡಚಾದ್ರಿ ಸರ್ವಜ್ಞ ಪೀಠಕ್ಕೆ ತೆರಳುವ ಹರಕೆ ಹೊತ್ತವರು.

ಸಂಸದ ಬಿ.ವೈ. ರಾಘವೇಂದ್ರ ಈ ರೋಪ್‌ವೇ ಯೋಜನೆ ಜಾರಿಗೆ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಕೊಡಚಾದ್ರಿ ವಿಶೇಷ ಧಾರ್ಮಿಕ ಪ್ರಾಮುಖ್ಯ ಹೊಂದಿದೆ. ಹಾದಿ ದುರ್ಗಮವಾಗಿದ್ದು, ಜೀಪ್‌ಗ್ಳಲ್ಲಿ ಅಥವಾ ಕಾಲ್ನಡಿಗೆಯಲ್ಲಿ ಏರಿ ನಿಸರ್ಗ ಸೌಂದರ್ಯ ಆಸ್ವಾದಿಸುತ್ತಾರೆ.

ಸಾವಿರಾರು ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಪಬ್ಲಿಕ್‌ ಪ್ರೈವೇಟ್‌ ಪಾರ್ಟನರ್‌ ಶಿಪ್‌ (ಪಿಪಿಪಿ) ಮೂಲಕ ಅನುಷ್ಠಾನಕ್ಕೆ ತರಲು ಸಾಧ್ಯವಿದೆ. ಇದರಿಂದ ಸರಕಾರಕ್ಕೆ ಹೊರೆ ಕಡಿಮೆಯಾಗಲಿದೆ ಬಂಡವಾಳ ಹೂಡಲು ಈಗಾಗಲೇ ಕೆಲವು ಖಾಸಗಿ ಕಂಪೆನಿಗಳು ಮುಂದೆ ಬಂದಿವೆ.

ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ರೋಪ್‌ ವೇ ನಿರ್ಮಾಣಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ವರುಷಗಳ ಕನಸನ್ನು ನನಸಾಗಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನವು ಯಶಸ್ವಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪರಿಸರಕ್ಕೆ ಹಾನಿಯಿಲ್ಲ
ಕೊಡಚಾದ್ರಿಗೆ ರಸ್ತೆ ನಿರ್ಮಿಸಲು ತಾಂತ್ರಿಕ ಅಡಚಣೆಗಳು ಎದುರಾಗುವುದರಿಂದ ಬದಲಿ ಮಾರ್ಗ ಕಂಡುಕೊಳ್ಳುವುದು ಅನಿವಾರ್ಯ. ರೋಪ್‌ ವೇಯಿಂದ ಅರಣ್ಯ ನಾಶ, ಪ್ರಾಣಿ ಪಕ್ಷಿಗಳಿಗೆ ಹಾನಿ ಇಲ್ಲ. ಜಮ್ಮು-ಕಾಶ್ಮೀರದ ಪ್ರಸಿದ್ಧ ವೈಷ್ಣೋದೇವಿ ಸನ್ನಿಧಿಗೆ ಈಗಾಗಲೇ ರೋಪ್‌ವೇ ನಿರ್ಮಿಸಲಾಗಿದೆ. ಅದೇ ಮಾದರಿಯಲ್ಲಿ ಕೊಡಚಾದ್ರಿಗೂ ನಿರ್ಮಾಣವಾದರೆ ಪ್ರವಾಸೋದ್ಯಮ ಅಭಿವೃದ್ಧಿಯಾಗಿ ಉದ್ಯೋಗಾವಕಾಶಗಳೂ ಹೆಚ್ಚಲಿವೆ. ಕೊಲ್ಲೂರು ಬಳಿ ಕೊಡಚಾದ್ರಿ ಬೆಟ್ಟದ ತಪ್ಪಲಿನಿಂದ ರೋಪ್‌ವೇಯ ಆರಂಭ ಸ್ಥಾನ ಇರಲಿದ್ದು, ಅಲ್ಲಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಪ್ರವಾಸೋದ್ಯಮಕ್ಕೆ ಒತ್ತು
ರೋಪ್‌ವೇ ನಿರ್ಮಾಣದಿಂದ ಜಗದ್ಗುರು ಶ್ರೀ ಶಂಕರಾಚಾರ್ಯರ ತಪೋಭೂಮಿ ಕೊಡಚಾದ್ರಿಗೆ ತೆರಳಲು ಈಗಿರುವ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಅನೇಕ ಮಂದಿಗೆ ಉದ್ಯೋಗಾವಕಾಶ, ಪ್ರವಾಸೋದ್ಯಮ ಅಭಿವೃದ್ಧಿ ಆಗಲಿದೆ. ಪ್ರಕೃತಿಗೆ ಹಾನಿಯಾಗದಂತೆ ನೂತನ ತಂತ್ರಜ್ಞಾನ ಅಳವಡಿಸಿ ರೋಪ್‌ವೇ ನಿರ್ಮಿಸಲು ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳೊಡನೆ ಮಾತುಕತೆ ನಡೆಯುತ್ತಿದೆ.
– ಬಿ.ವೈ. ರಾಘವೇಂದ್ರ, ಸಂಸದ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.