ನಿಯಮ ಪಾಲಿಸದವರಿಗೆ ಎಸ್ಪಿ ನಿಶಾ ಜೇಮ್ಸ್ ಅವರಿಂದ ಗುಲಾಬಿ
Team Udayavani, Jul 11, 2019, 5:02 AM IST
ಮಲ್ಪೆ: ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಮಲ್ಪೆ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವು ಜು. 10ರಂದು ಮಲ್ಪೆಯಲ್ಲಿ ನಡೆಯಿತು.
ಉಡುಪಿ ಎಸ್ಪಿ ನಿಶಾ ಜೇಮ್ಸ್ ಅವರು ಕಾಲೇಜಿನ ವಿದ್ಯಾರ್ಥಿಗಳ ಜತೆಯಲ್ಲಿ ಸೀಟ್ ಬೆಲ್r ಮತ್ತು ಹೆಲ್ಮಟ್ ಧರಿಸದ ವಾಹನ ಸವಾರರಿಗೆ ಗುಲಾಬಿ ಹೂ ನೀಡುವ ಮೂಲಕ ಸಂಚಾರ ನಿಯಮಗಳ ಕುರಿತು ಜನಜಾಗೃತಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಲು ಮತ್ತು ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಲು ವಾಹನ ಸವಾರರಿಗೆ ಕಾಲೇಜಿನ ವಿದ್ಯಾರ್ಥಿಗಳಿಂದ ಗುಲಾಬಿ ಹೂ ಮತ್ತು ಕರಪತ್ರವನ್ನು ಕೊಡಿಸಿ ಜಾಗೃತಿ ಮೂಡಿಸಲಾಗುತ್ತದೆ. ಬೈಕ್ ಸವಾರರು ಇನ್ನು ಮುಂದೆ ಹೆಲ್ಮೆಟನ್ನು ಖಡ್ಡಾಯವಾಗಿ ಧರಿಸಬೇಕು. ನಿಯಮ ಪಾಲಿಸದಿದ್ದರೆ ದಂಡವಿಧಿಸುವುದು ಅನಿವಾರ್ಯವಾಗುತ್ತದೆ. ಕಾರು ಚಲಾಯಿಸುವವರು ಸೀಟ್ಬೆಲ್r ಹಾಕಿಕೊಳ್ಳಬೇಕು. ಜನನಿಬಿಡ ಪ್ರದೇಶದಲ್ಲಿ ನಿಧಾನವಾಗಿ ಚಲಿಸಬೇಕು. 18 ವರ್ಷ ವಯಸ್ಸಿಗಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ಕೊಡಬಾರದು. ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದರಿಂದ ಏಕಾಗ್ರತೆಗೆ ಭಂಗ ಉಂಟಾಗಿ ಅಪಘಾತಕ್ಕೆ ಕಾರಣವಾಗುತ್ತದೆ ಎಂದರು.
ಶಿಕ್ಷಣ ಇಲಾಖೆಯ ಪ್ರಭಾರ ಡಿಡಿಪಿಯು ವಿಲಾಸ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಪಿ. ವರ್ಗಿಸ್, ಪ್ರೌಢಶಾಲಾ ಹಿರಿಯ ಶಿಕ್ಷಕಿ ವಿನೋದ ಎಂ., ಮಲ್ಪೆ ಠಾಣಾ ಎಎಸ್ಐ ರತ್ನಾಕರ, ಹೆಡ್ ಕಾನ್ಸ್ಸೇrಬಲ್ ಜಯಕರ, ಕಾನ್ಸ್ಸೇrಬಲ್ಗಳಾದ ರವಿರಾಜ್, ಗುರುಲಿಂಗಪ್ಪ, ಸದ್ದಾಂ ಹುಸೇನ್, ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಸುರೇಶ್ ಬಿ. ಕರ್ಕೇರ, ಕೋಶಾಧಿಕಾರಿ ಮಹೇಶ್ ಕುಮಾರ್, ನಗರಸಭಾ ಸದಸ್ಯ ಸುಂದರ್ ಕಲ್ಮಾಡಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ