ರಸ್ತೆ ಅಭಿವೃದ್ಧಿಗೆ ನಗರೋತ್ಥಾನದಿಂದ 3.31 ಕೋಟಿ ರೂ. ಅನುದಾನ


Team Udayavani, May 19, 2019, 6:10 AM IST

raste-abhivraddi

ಕಾರ್ಕಳ: ಐದು ವರ್ಷಗಳ ಬಳಿಕ ಪುರಸಭೆ ರಸ್ತೆಗಳಿಗೆ ಇದೀಗ ಡಾಮರು ಭಾಗ್ಯ ಸಿಕ್ಕಿದೆ. ಅನಂತಶಯನದಿಂದ ಬಂಡಿಮಠದವರೆಗಿನ ರಸ್ತೆಯಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದವು. ಇದೀಗ ಒಂದು ಬದಿಗೆ ಡಾಮರು ಹಾಕಲಾಗಿದೆ.

3.31 ಕೋಟಿ ರೂ. ಅನುದಾನ
ಪುರಸಭೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ 3.31 ಕೋಟಿ ರೂ. ಬಿಡುಗಡೆಗೊಂಡಿದೆ. ಈ ಅನುದಾನದಲ್ಲಿ ಹವಲ್ದಾರ್‌ಬೆಟ್ಟು, ಬಂಗ್ಲೆಗುಡ್ಡೆ ಕಜೆ ಒಂದನೇ ವಾರ್ಡ್‌ ಮತ್ತು ಎರಡನೇ ವಾರ್ಡ್‌, ಮಾರ್ಕೆಟ್‌ ರೋಡ್‌ ರಣವೀರ ಕಾಲನಿ, ದಾನಶಾಲೆ ರಸ್ತೆ, ಕುಂಬ್ರಿಪದವು, ಪತ್ತೂಂಜಿಕಟ್ಟೆ, ಶಾಂತಿನಗರ ರಸ್ತೆ, ಬಂಡಿಮಠ, ಕಾವೆರಡ್ಕ ಕಾಲನಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿ ನಡೆಯಲಿದೆ. ಕೆಲವೊಂದು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದರೆ, ಮತ್ತೆ ಕೆಲವು ಕಾಮಗಾರಿ ಪ್ರಗತಿಯಲ್ಲಿದೆ.

ಸಾಲ್ಮರ ಗ್ಯಾಲಕ್ಷಿ ರಸ್ತೆಗೆ ಡಾಮರು
ಸಾಲ್ಮರದ ಗ್ಯಾಲಕ್ಷಿಯಿಂದ ಜಯಭಾರತಿ ವರೆಗಿನ 510 ಮೀಟರ್‌ ರಸ್ತೆಗೆ ಈಗ ಡಾಮರು ಹಾಕಲಾಗುತ್ತಿದೆ. 22 ಲಕ್ಷ ರೂ. ವೆಚ್ಚದ ಕಾಮಗಾರಿ ಇದಾಗಿದೆ. ಇಲ್ಲಿ ಒಂದು ಬದಿಯಿಂದ ಮಾತ್ರ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಎಲ್ಲೆಡೆ ಕಿರಿದಾದ ರಸ್ತೆಗಳು
ಪುರಸಭೆ ವ್ಯಾಪ್ತಿಯ ಬಹುತೇಕ ಎಲ್ಲ ರಸ್ತೆಗಳು ತೀರಾ ಕಿರಿದಾಗಿವೆ. ಹೀಗಾಗಿ ಮುಖ್ಯರಸ್ತೆಯೊಂದಿಗೆ ಒಳರಸ್ತೆಗಳು ಕೂಡ ಅಗಲೀಕರಣಗೊಳ್ಳಬೇಕು.
ಡಾಮರೀಕರಣವೂ ಆಗಬೇಕೆನ್ನುವುದು ಸಾರ್ವಜನಿಕರ ಆಗ್ರಹವಾಗಿತ್ತು. ಆದರೆ ನಗರೋತ್ಥಾನ ಯೋಜನೆಯಡಿ ಸೀಮಿತ ಅನುದಾನ ಬಿಡುಗಡೆಗೊಂಡಿರುವುದರಿಂದ ಎಲ್ಲ ರಸ್ತೆಗಳ ಅಭಿವೃದ್ಧಿ ಈ ಅನುದಾನದಲ್ಲಿ ಅಸಾಧ್ಯವಾಗಿದೆ.

ಉರಿಯುತ್ತಿಲ್ಲ ಬೀದಿದೀಪ
ಗ್ಯಾಲಕ್ಷಿ ಸಭಾಭವನದಿಂದ ಜಯಭಾರತಿ ವರೆಗೆ ಅಳವಡಿಸಲಾದ ಬೀದಿದೀಪಗಳು ಉರಿಯುತ್ತಿಲ್ಲ. ಡಿವೈಡರ್‌ ಮಧ್ಯದಲ್ಲಿ ಅಳವಡಿಸಲಾದ ಬೀದಿದೀಪಗಳು ಕಳೆದ ಒಂದು ವರ್ಷದಿಂದ ಉರಿಯದಿದ್ದರೂ ಪುರಸಭೆ ಮೌನವಾಗಿದೆ. ಈ ಭಾಗದಲ್ಲಿ ಬೀದಿನಾಯಿಗಳ ಕಾಟವೂ ವಿಪರೀತವಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ದುರಸ್ತಿಗೆ ಕೊಟೇಶನ್‌
ಮುಖ್ಯರಸ್ತೆ ಕಾಮಗಾರಿ ಮೂರು ದಿನಗಳಲ್ಲಿ ಪೂರ್ಣವಾಗಲಿದೆ. ಡಿವೈಡರ್‌ ಲೈಟ್‌ ದುರಸ್ತಿಪಡಿಸುವ ನಿಟ್ಟಿನಲ್ಲಿ ಕೊಟೇಶನ್‌ ಕರೆಯಲಾಗಿದೆ.
-ಪದ್ಮನಾಭ ಎನ್‌.ಕೆ., ಪುರಸಭಾ ಎಂಜಿನಿಯರ್‌

ದುರಸ್ತಿಗೆ ಕೊಟೇಶನ್‌
ಮುಖ್ಯರಸ್ತೆಯ ಒಂದು ಭಾಗ ಮಾತ್ರ ಇದೀಗ ಡಾಮರೀಕರಣಗೊಳ್ಳುತ್ತಿದೆ. ನಗರದ ಮುಖ್ಯರಸ್ತೆಯನ್ನು ಒಮ್ಮೆಗೆ ಡಾಮರೀಕರಣಗೊಳಿಸುವ ನಿಟ್ಟಿನಲ್ಲಿ ಪುರಸಭೆ ಕ್ರಮ ಕೈಗೊಳ್ಳಬೇಕಿತ್ತು. ಪುರಸಭೆಗೆ ಚುನಾವಣೆ ಆಗಿ ವರ್ಷವಾದರೂ ಅಧ್ಯಕ್ಷರ ನೇಮಕವಾಗದಿರುವುದು ಪುರಸಭೆಯ ಆಡಳಿತ ಕಾರ್ಯಗಳಿಗೆ ಅಡ್ಡಿಯಾಗಿರಬಹುದು.
-ಅರುಣ್‌ ಪುರಾಣಿಕ್‌, ಸಾಮಾಜಿಕ ಮುಂದಾಳು

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.