ಯಾಂತ್ರೀಕೃತ ಬೀಜ ಬಿತ್ತನೆಗೆ ಮೊರೆ ಹೋದ ಗ್ರಾಮೀಣ ರೈತರು


Team Udayavani, May 31, 2018, 6:15 AM IST

2505tke1.jpg

ತೆಕ್ಕಟ್ಟೆ :  ಕರಾವಳಿಯ ಕೃಷಿಕರಿಗೆ ಎದುರಾದ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಯಿಂದಾಗಿ ಯಾಂತ್ರೀಕೃತ ಬೀಜ ಬಿತ್ತನೆ ಕಾರ್ಯಕ್ಕೆ ಮೊರೆಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಕೃಷಿ ಭೂಮಿಗಳಲ್ಲಿ ಯಂತ್ರಗಳ ಸದ್ದು ಜೋರಾಗಿದೆ.

ಮುಂಗಾರು ಮಳೆಯ ಆಗಮನದ ನಿರೀಕ್ಷೆಯಲ್ಲಿದ್ದ ರೈತರು ಕಳೆದ ಹಲವು ದಿನಗಳಿಂದಲೂ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಗದ್ದೆಗಳಿಗೆ ಗೊಬ್ಬರ ಹಾಕಿ ಹದಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಸುರಿದ ಮಳೆ ಇದಕ್ಕೆ ಪೂರಕವಾಗಿದೆ. 
 
ಯಾಂತ್ರೀಕೃತ ಬೀಜ ಬಿತ್ತನೆ 
ರೈತರು ಈ ಹಿಂದೆ ಸಾಂಪ್ರದಾಯಿಕವಾಗಿ ಬೀಜ ಬಿತ್ತನೆ ಮಾಡಿ 20 ದಿನಗಳ ಅನಂತರ ನೇಜಿ ಕಾರ್ಯ ಮಾಡುತ್ತಿದ್ದರು. ಆದರೆ ಬದಲಾದ ಕಾಲಕ್ಕೆ ತಕ್ಕಂತೆ ರೈತರು ಮಾನವ ಶಕ್ತಿಯ ಬಳಕೆ ಕಡಿಮೆ ಮಾಡಿ ಯಾಂತ್ರಿಕೃತ ಬೀಜ ಬಿತ್ತನೆ ಮೊರೆ ಹೋಗಿದ್ದಾರೆ. ಇದರಿಂದ ಕೂಲಿ ಉಳಿತಾಯ ಮತ್ತು ಬೀಜ, ಗೊಬ್ಬರ ಮಿತ ಬಳಕೆಯಾಗುತ್ತದೆ.  

ಡಿಎಸ್‌ಆರ್‌ ಪ್ರಾತ್ಯಕ್ಷಿಕೆ
ಕೃಷಿ ಇಲಾಖೆ, ಇಕ್ರಿಸ್ಯಾಟ್‌ ಸಿಮ್ಮಿಟ್‌ ಸಹಯೋಗದೊಂದಿಗೆ ಭೂ ಸಮೃದ್ಧಿ ಯೋಜನೆ ಅಡಿಯಲ್ಲಿ  ಟ್ಯಾಕ್ಟರ್‌ ಡ್ರಮ್‌ ಸೀಡರ್‌ ಡಿಎಸ್‌ಆರ್‌ ಪ್ರಾತ್ಯಕ್ಷಿಕೆಗಳ ಮೂಲಕ ಬೀಜ ಬಿತ್ತನೆ ತೋರಿಸಿ ಕೊಡಲಾಗುತ್ತಿದೆ. ಇದು ರೈತರಿಗೆ ಹೊಸತನವನ್ನು  ಅಳವಡಿಸಿಕೊಳ್ಳಲು ಸಹಾಯಕವಾಗುತ್ತಿದೆ.

ಗಂಟೆಗೆ 1 ಎಕರೆ  ಬೀಜ ಬಿತ್ತನೆ
ಏಕ ಕಾಲದಲ್ಲಿ ಟ್ಯಾಕ್ಟರ್‌ಗೆ ಅಳವಡಿಸಿದ ಡ್ರಮ್‌ ಸೀಡರ್‌ ಮೂಲಕ ಒಟ್ಟು 9 ಕಿರಿದಾದ ನೇಗಿಲಗಳು ಉಳುತ್ತಾ ಸುಮಾರು 9 ಇಂಚು ಅಂತರದಲ್ಲಿ ಬೀಜ ಬಿತ್ತನೆಯಾಗುವುದು. ಒಟ್ಟಿನಲ್ಲಿ ಗಂಟೆಗೆ ಸುಮಾರು 1ಎಕರೆ ವಿಸ್ತಿರ್ಣದ ಕೃಷಿ ಭೂಮಿಗೆ ಬೀಜ ಬಿತ್ತನೆಗೆ ಸಮರ್ಪಕವಾಗಿ ಬೀಜ ಬಿತ್ತನೆ ಮಾಡುವ ಸಾಮರ್ಥ್ಯವನ್ನು ಈ ಯಂತ್ರ ಹೊಂದಿದೆ.

ಕಳೆ ನಿಯಂತ್ರಣ 
ಬೀಜ ಮೊಳಕೆ ಒಡೆದು ಸುಮಾರು 21 ದಿನಗಳಲ್ಲಿ ಸಸಿಯಾಗಿ ಬೆಳೆಯುವಾಗ ಕಳೆ ನಿಯಂತ್ರಣಕ್ಕಾಗಿ ರೌಂಡ್‌ ಅಪ್‌ ಹಾಗೂ ಪೆಂಡಿ ಲಿಕ್ವಿಡ್‌ಗಳನ್ನು ಸಿಂಪಡಿಸಿದಾಗ ಸಸಿ ಸಮೃದ್ಧವಾಗಿ ಬೆಳೆದು ಉತ್ತಮ ಫಸಲು ಕಂಡುಕೊಳ್ಳಲು ಸಾಧ್ಯ
– ಯೋಗೀಶ್‌ , ಕೃಷಿ ಇಲಾಖೆ

12 ಕೆ.ಜಿ. ಬಿತ್ತನೆ ಬೀಜ
ಈ ಹಿಂದೆ ಚಾಪೆ ನೇಜಿ ಮಾಡುವಾಗ ಒಂದು ಎಕರೆ ವಿಸ್ತೀರ್ಣದ ಕೃಷಿಭೂಮಿಗೆ ಸುಮಾರು 25 ಕೆ.ಜಿ. ಬೀಜ ಬಿತ್ತನೆಗೆ ಬೇಕಾಗುತ್ತಿತ್ತು. ಟ್ಯಾಕ್ಟರ್‌ ಡ್ರಮ್‌ ಸೀಡರ್‌ ಬಳಕೆ ಮಾಡುವುದರಿಂದ ಸುಮಾರು 12 ಕೆ.ಜಿ. ಬೀಜ ಬಿತ್ತನೆಗೆ ಬೇಕಾಗುತ್ತಿದೆ.  ಇದರಿಂದಾಗಿ ತುಂಬಾ ಉಳಿತಾಯವಾಗುತ್ತಿದೆ. ಕೃಷಿ ಇಲಾಖೆ ಉತ್ತಮ ನೆರವು ನೀಡಿದೆ.      
 
– ವೆಂಕಟೇಶ್‌ ವೈದ್ಯ ಕೊಮೆ , ಸಾವಯವ ಕೃಷಿಕರು.

– ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.