ಗಮನ ಸೆಳೆಯುತ್ತಿರುವ ಗ್ರಾಮೀಣ ಕರಕುಶಲ ಮೇಳ


Team Udayavani, Jan 16, 2021, 9:16 PM IST

ಗಮನ ಸೆಳೆಯುತ್ತಿರುವ ಗ್ರಾಮೀಣ ಕರಕುಶಲ ಮೇಳ

ಉಡುಪಿ:  ಶ್ರೀಕೃಷ್ಣಮಠದ ದೈವಾರ್ಷಿಕ ಪರ್ಯಾಯ ಪೂಜಾ ಪದ್ಧತಿಗೆ 500ನೇ ವರ್ಷಕ್ಕೆ ಕಾಲಿಡುವ ಸಂದರ್ಭ ಆಯೋಜಿಸಲಾದ ಗ್ರಾಮೀಣ ಉತ್ಪನ್ನಗಳ ಮೇಳ ಜ. 16ರಂದು ಆರಂಭಗೊಂಡಿದ್ದು 23ರ ವರೆಗೆ ನಡೆಯಲಿದೆ.

ರಾಜಾಂಗಣ ಸಭಾಭವನದಲ್ಲಿ ಪಶ್ಚಿಮ ಬಂಗಾಲ, ಒಡಿಶಾ, ತೆಲಂಗಾಣ, ಛತ್ತೀಸ್‌ಗಢ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರದ ವಿವಿಧ ಕಲಾಪ್ರಕಾರಗಳು, ಮಧುಬನಿ, ಮಿಥಿಲಾ ಚಿತ್ರ, ಮಂಜುಷಾ ಚಿತ್ರ, ಗೋದ್ನ ಚಿತ್ರ, ಕಾಲಿಘಟ್‌ ಪೈಂಟಿಂಗ್‌, ಪಟಚಿತ್ರ, ಲೋಹಶಿಲ್ಪ, ಎರಕಶಿಲ್ಪ, ಗೋಂದು ಕಲಾಕೃತಿ, ಮಣ್ಣಿನ, ಹುಲ್ಲಿನ ಕಲಾಕೃತಿಗಳು, ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ, ಬಿಜಾಪುರ, ಧಾರವಾಡ, ಶಿರಸಿ, ಕುಂದಾಪುರ, ಬೆಂಗಳೂರು, ಉಡುಪಿ ಭಾಗದ ಗ್ರಾಮೀಣ ಉತ್ಪನ್ನಗಳಾದ ಸೀರೆ, ಹುಲ್ಲಿನ, ಮರದ ಕಲಾಕೃತಿಗಳು, ಸಾವಯವ ಉತ್ಪನ್ನಗಳು, ಚರ್ಮದ ಉತ್ಪನ್ನಗಳು, ವಿವಿಧ ಕಲಾ ಪ್ರಕಾರಗಳಾದ ಮಣ್ಣಿನ ಕಲಾಕೃತಿ ರಚನೆ, ಬುಟ್ಟಿ ರಚನೆ, ಸಹಜ ಬಣ್ಣದಲ್ಲಿ ಚಿತ್ರ ರಚನೆ ಮುಂತಾದ ಕಲಾ ಪ್ರಾತ್ಯಕ್ಷಿಕೆ ನಡೆಯುತ್ತಿವೆ.

ಲಂಬಾಣಿ ಕಸೂತಿ, ಹಿಡಿಕಡ್ಡಿ ಉತ್ಪನ್ನ :

ಇಳಕಲ್‌ ಸೀರೆ, ಪಟ್ಟದ ಸೀರೆಗಳಿಗೆ ಲಂಬಾಣಿ ಕಸೂತಿಯನ್ನು (ಎಂಬ್ರಾಯxರಿ) ಬಳ್ಳಾರಿ ಹೂವಿನಹಡಗಲಿಯ ರವಿಕಿರಣ್‌ ಪ್ರದರ್ಶಿಸುತ್ತಿದ್ದಾರೆ. ಗದಗ ಜಿಲ್ಲೆಯಿಂದ ಬಂದ ವಿವಿಧ ಬಗೆಯ ಲೆದರ್‌ ಬ್ಯಾಗ್‌, ಚಾ ಇಡುವ ಮ್ಯಾಟ್‌, ಬಟ್ಟೆಯ ಬುಟ್ಟಿಗಳು, ತೆಂಗಿನ ಗರಿಯಿಂದ (ಹಿಡಿಕಡ್ಡಿ) ತಯಾರಿಸಿದ ಬಾಸ್ಕೆಟ್‌, ಟ್ರೇ, ಜೊಂಡುಹುಲ್ಲಿನಿಂದ ತಯಾರಿಸಿದ ಬುಟ್ಟಿ, ಗುಳೇದಗುಡ್ಡ, ಇಳಕಲ್‌, ಉಡುಪಿ ಸೀರೆಗಳ ಮಳಿಗೆಗಳು ನೋಡುಗರ ಮನ ತಣಿಸುತ್ತಿವೆ. ಮಹಾರಾಷ್ಟ್ರದ ಕಸೂತಿ ಕೆಲಸಗಳು (ಬೆಡ್‌, ಸೋಫಾ ಕವರ್‌, ಮ್ಯಾಟ್‌ ಇತ್ಯಾದಿ), ಬೆಳಗಾವಿಯ ಅಗಸ್ತ್ಯ ಪ್ರತಿಷ್ಠಾನದವರ ಕಾಟನ್‌ ತ್ರೆಡ್‌, ಸೆಣಬಿನಿಂದ ತಯಾರಿಸಿದ ಅಲಂಕಾರಿಕ ಸಾಮಗ್ರಿಗಳು, ಟೇಬಲ್‌ ಮ್ಯಾಟ್‌, ಕುಂದಾಪುರ ಆಲೂರಿನ ರಘುರಾಮ ಕುಲಾಲರ ಮಣ್ಣಿನ ತರಹೇವಾರಿ ಸಾಮಗ್ರಿಗಳು ಪ್ರದರ್ಶನದಲ್ಲಿವೆ.

ಬೆಳಗಾವಿಯ ಸಿದ್ದವ್ವ ಜೊಂಡುಹುಲ್ಲಿನ ವಿವಿಧ ಆಕಾರದ ಬುಟ್ಟಿಗಳನ್ನು ಇರಿಸಿಕೊಂಡಿದ್ದಾರೆ. ಛತ್ತೀಸ್‌ಗಢದ ಕಬ್ಬಿಣದ ವಿವಿಧ ಅಲಂಕೃತ ಆಟಿಕೆಗಳು ಇವೆ. ಇವರು ವೆಲ್ಡಿಂಗ್‌ ಇಲ್ಲದೆ ಸಾಂಪ್ರದಾಯಿಕ ರೀತಿಯಲ್ಲಿ ಕಬ್ಬಿಣವನ್ನು ಕಾಯಿಸಿ ಆಟಿಕೆಗಳನ್ನು ತಯಾರಿಸುವುದು ವೈಶಿಷ್ಟ್ಯ. ಕೊಳಲು (ಬಾನ್ಸುರಿ), ಖಡ್ಗ, ಕೊಡಲಿ, ಬಿಲ್ಲುಬಾಣಗಳನ್ನು ಬಿದಿರಿನಿಂದ ತಯಾರಿಸುವವರು ಮಧ್ಯಪ್ರದೇಶದ ಕಲಾವಿದರು.

ಬಂಗಾಳದ ಚಿತ್ರಕಾರ, ಆಶುಕವಿ :

ಪಶ್ಚಿಮ ಬಂಗಾಲದ ಪ್ರವೀರ್‌ ಚಿತ್ರಕಾರ್‌ ಅವರು ಚಿತ್ರಕಲೆಗಳು ಆಕರ್ಷಕ. ಇವರು ಚಿತ್ರಗಳಿಗೆ ತಕ್ಕುದಾದ ಹಾಡುಗಳನ್ನು ಹಾಡುತ್ತಾರೆ. ಇದು ಕವಿ ರವೀಂದ್ರನಾಥ ಠಾಕೂರ್‌ ಅವರ ಪರಿಶ್ರಮದಿಂದ ಪಶ್ಚಿಮಬಂಗಾಲದಲ್ಲಿ ಉತ್ತೇಜನಗೊಂಡ ಕಲೆಯಾಗಿದೆ. ಪ್ರವೀರ್‌ ಅಂತಹವರು ಆಶುಕವಿಗಳು. ಇವರು ಕೋವಿಡ್ ಕುರಿತೂ ಹಾಡು ರಚಿಸಿ ಚಿತ್ರಕಲೆಯನ್ನು ನಿರ್ಮಿಸಿ ಪ್ರದರ್ಶಿಸುತ್ತಿದ್ದಾರೆ.

ಗ್ರಾಮೀಣ ಶ್ರಮಿಕ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಷ್ಟ್ರಮಟ್ಟದ ಗ್ರಾಮೀಣ ಉತ್ಪನ್ನಗಳ ಮೇಳ, ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ ಎಂದು ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮತ್ತು ಸಂಘಟಕ ಪುರುಷೋತ್ತಮ ಅಡ್ವೆ ತಿಳಿಸಿದ್ದಾರೆ.

ಪುರಾತನ ಉಪಕರಣಗಳು :

ಹಿಂದಿನ ಕಾಲದ ಮನೆಗಳಲ್ಲಿ ಬಳಸುವ ಕೊಡಪಾನ, ಬ್ಯಾಟ್‌, ಗುಂಡುಕಲ್ಲು, ಲೋಟಗಳು, ಚೆನ್ನೆಮಣೆ, ಡೋಲು, ಶ್ಯಾವಿಗೆ ಮಾಡುವ ಮರದ ಯಂತ್ರ ಮೊದಲಾದ ತುಳುನಾಡ ಪಾರಂಪರಿಕ ಪರಿಕರಗಳ ಪ್ರದರ್ಶನಗಳೂ ಇಲ್ಲಿವೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.