ಎಸ್‌-ಟಿ ಸಂಶೋಧನೆ: ರಾಜ್ಯಕ್ಕೆ ಸುಸ್ಥಿರ ಅಗ್ರಸ್ಥಾನ

ಮಣಿಪಾಲದ ಬಯೋ ಇನ್‌ಕ್ಯುಬೇಟರ್‌ ಉದ್ಘಾಟಿಸಿ ಡಿಸಿಎಂ ಡಾ| ಅಶ್ವತ್ಥನಾರಾಯಣ

Team Udayavani, Oct 26, 2019, 5:16 AM IST

a-90

ಉಡುಪಿ: ವಿಜ್ಞಾನ ಮತ್ತು ತಂತ್ರ ಜ್ಞಾನದ ಸಂಶೋಧನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದ್ದು ಇದನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಉಪಮುಖ್ಯಮಂತ್ರಿ, ಉನ್ನತ, ವೈದ್ಯಕೀಯ ಶಿಕ್ಷಣ, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ (ಎಸ್‌-ಟಿ) ಇಲಾಖೆ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಅವರು ಶುಕ್ರವಾರ ಮಣಿಪಾಲದಲ್ಲಿ ಮಣಿಪಾಲ- ರಾಜ್ಯ ಸರಕಾರದ ಬಯೋ ಇನ್‌ಕ್ಯುಬೇಟರ್‌ ಸೆಂಟರ್‌ ಉದ್ಘಾಟಿಸಿ ಮಾತನಾಡಿದರು. ಐಟಿ, ಬಿಟಿ, ಎಸ್‌-ಎಸ್‌ಟಿ ಸಂಶೋಧನೆಯಿಂದ ಸ್ಟಾರ್ಟ್‌ಅಪ್‌, ರಕ್ಷಣೆ, ಸಂಶೋಧನೆ ಮತ್ತು ಅಭಿವೃದ್ಧಿ, ವ್ಯೋಮ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿದೆ. ಇದಕ್ಕೆ ಇಲ್ಲಿರುವ ಸಂಶೋಧನೆ ಆಧಾರಿತ ಸಂಸ್ಥೆಗಳು ಕಾರಣ. ಅಗ್ರಸ್ಥಾನದಲ್ಲಿರುವ ರಾಜ್ಯದ ಸಾಧನೆಯನ್ನು ವಿಶೇಷ ಪರಿಶ್ರಮ ಪಟ್ಟು ಉಳಿಸಿಕೊಂಡು ಹೋಗಬೇಕಾಗಿದೆ. ಈ ಕಾರಣಕ್ಕಾಗಿ ಸರಕಾರ ಇನ್‌ಕ್ಯುಬೇಟರ್‌ ಕೇಂದ್ರಗಳಿಗೆ ನೆರವು ನೀಡುತ್ತಿದೆ. ಬಯೋ ಟೆಕ್ನಾಲಜಿ ಇನ್‌ಕ್ಯುಬೇಟರ್‌ ಕೇಂದ್ರದಿಂದಾಗಿ ವ್ಯಾಕ್ಸಿನ್‌, ಚಿಕಿತ್ಸಾ ವಿಧಾನದಲ್ಲಿ ಹೊಸ ಸಂಶೋಧನೆ ಮಾಡಬಹುದು ಎಂದರು.

ಡಿಸಿಎಂ ಕೆಎಂಸಿ ಹಳೆ ವಿದ್ಯಾರ್ಥಿ
ಮಣಿಪಾಲಕ್ಕೆ ಮೊದಲ ಖಾಸಗಿ ವೈದ್ಯಕೀಯ ಕಾಲೇಜು ಎಂಬ ಹೆಗ್ಗಳಿಕೆ ಇದೆ. ಅತ್ಯುತ್ತಮ ಮೂಲಸೌಕರ್ಯಗಳು ಇಲ್ಲಿವೆ. ಮಂಗಳೂರು ಕೆಎಂಸಿಯಲ್ಲಿ ವೈದ್ಯಕೀಯ ಶಿಕ್ಷಣ ಪಡೆದಿರುವ ನನಗೆ ಈಗ ಅದೇ ಸಂಸ್ಥೆಯ ಕೇಂದ್ರವೊಂದನ್ನು ಉದ್ಘಾಟಿಸುವ ಅಪೂರ್ವ ಭಾಗ್ಯ ಸಿಕ್ಕಿದೆ ಎಂದು
ಡಾ|ಅಶ್ವತ್ಥನಾರಾಯಣ ಹೇಳಿದರು.

ಆರೋಗ್ಯ ಕ್ಷೇತ್ರದ ಸಂಶೋಧನೆ
ಜೈವಿಕ ಇನ್‌ಕ್ಯುಬೇಟರ್‌ ಆಗಿರುವುದರಿಂದ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ಮಾಡಲು ಅವಕಾಶವಿದೆ. ಈ ಮೂಲಕ ಜೈವಿಕ ತಂತ್ರಜ್ಞಾನ ಕ್ಷೇತ್ರದ ಬಯೋಫಾರ್ಮ, ಬಯೋಮೆಡಿಕಲ್‌ ಉಪಕರಣಗಳು, ದಂತ ವೈದ್ಯಕೀಯ ಆವಿಷ್ಕಾರ, ಆರೋಗ್ಯ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಸ್ಟಾರ್ಟ್‌ಅಪ್‌ ಯೋಜನೆಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ. ಅದಕ್ಕೆ ಬೇಕಾದ ಪ್ರಯೋಗಾಲಯ, ಕಟ್ಟಡ-ಕಚೇರಿ ಇತ್ಯಾದಿ ಮೂಲಸೌಲಭ್ಯಗಳು ಲಭ್ಯವಿವೆ. ಮಣಿಪಾಲದ ಈ ಕೇಂದ್ರ ಜಾಗತಿಕ ವೇದಿಕೆಯಾಗಿ ರೂಪು ಗೊಳ್ಳಲಿದೆ ಎಂದು ಮಣಿಪಾಲ ಬಯೋ ಇನ್‌ಕ್ಯುಬೇಟರ್‌ ಸಿಇಒ ಮನೀಶ್‌ ಥಾಮಸ್‌ ಹೇಳಿದರು.

ಸದ್ಯವೇ ಮಣಿಪಾಲವು ಬಯೋ ಹಬ್‌, ಫಾರ್ಮ ಹಬ್‌ ಆಗಲಿದೆ ಎಂದು ಮಣಿಪಾಲ ಮಾಹೆ ವಿ.ವಿ. ಕುಲಪತಿ ಡಾ| ಎಚ್‌.ವಿನೋದ್‌ ಭಟ್‌ ವಿಶ್ವಾಸ ವ್ಯಕ್ತಪಡಿಸಿದರು. ಮಾಹೆ ವಿ.ವಿ. ಸಹಕುಲಾಧಿಪತಿ ಡಾ|ಎಚ್‌.ಎಸ್‌.ಬಲ್ಲಾಳ್‌ ಅಧ್ಯಕ್ಷತೆ ವಹಿಸಿದ್ದರು. ಸಚಿವರಿಗೆ ಎಂಇಎಂಜಿ ಅಧ್ಯಕ್ಷ ಡಾ|ರಂಜನ್‌ ಪೈ ಸ್ಮರಣಿಕೆ ನೀಡಿ ಗೌರವಿಸಿದರು. ಶಾಸಕ ಕೆ.ರಘುಪತಿ ಭಟ್‌, ಐಜಿಪಿ ಅರುಣ್‌ ಚಕ್ರವರ್ತಿ, ಜಿಲ್ಲಾಧಿಕಾರಿ ಜಿ.ಜಗದೀಶ್‌, ಜಿ.ಪಂ. ಸಿಇಒ ಪ್ರೀತಿ ಗೆಹೋಲೊಟ್, ಎಸ್‌ಪಿ ನಿಶಾ ಜೇಮ್ಸ್‌ ಉಪಸ್ಥಿತರಿದ್ದರು. ಮಣಿಪಾಲ ಲೈಫ್ ಸೈನ್ಸಸ್‌ ಸೆಂಟರ್‌ ನಿರ್ದೇಶಕ ಡಾ|ಕೆ. ಸತ್ಯಮೂರ್ತಿ ಸ್ವಾಗತಿಸಿ ಕೆಎಂಸಿ ಡೀನ್‌ ಡಾ| ಶರತ್‌ ರಾವ್‌ ಅತಿಥಿಗಳನ್ನು ಪರಿಚಯಿಸಿದರು. ಡಾ| ಅನಿಲ್‌ ಭಟ್‌ ಕಾರ್ಯಕ್ರಮ ನಿರ್ವಹಿಸಿದರು.

ಕರಾವಳಿ ಭಾಗಕ್ಕೆ ಪ್ರಯೋಜನ
ಪ್ರಸ್ತಾವನೆಗೈದ ಐಟಿ, ಬಿಟಿ ಇಲಾಖೆ ಆಡಳಿತ ನಿರ್ದೇಶಕ ಪ್ರಶಾಂತಕುಮಾರ್‌ ಮಿಶ್ರಾ ಅವರು, 2001ರಲ್ಲಿ ಜೈವಿಕ ತಂತ್ರಜ್ಞಾನ ನೀತಿಯನ್ನು ಘೋಷಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ರಾಜ್ಯದಲ್ಲಿ ಈಗಾಗಲೇ ನಾಲ್ಕು ತಂತ್ರಜ್ಞಾನ ಆಧಾರಿತ ಇನ್‌ಕ್ಯುಬೇಟರ್‌ಗಳನ್ನು ಆರಂಭಿಸಲಾಗಿದ್ದು ಈಗ ಮಣಿಪಾಲದಲ್ಲಿ ಉದ್ಘಾಟನೆಯಾಗಿರುವುದು ಐದನೆಯದು. ಈ ಕೇಂದ್ರಕ್ಕೆ ಒಟ್ಟು 5.5 ಕೋ.ರೂ. ನೆರವು ಕೊಡಲಾಗುತ್ತಿದೆ. ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಲು ಬೆಂಗಳೂರು ಬಿಟ್ಟು ಮಣಿಪಾಲದಲ್ಲಿ ಇಂತಹ ಕೇಂದ್ರವನ್ನು ಆರಂಭಿಸಲಾಗಿದೆ. ಕರಾವಳಿ ಭಾಗದ ಹೊಸ ಹೊಸ ಸಂಸ್ಥೆಗಳು ಇದರ ಪ್ರಯೋಜನ ಪಡೆದು ಅಭಿವೃದ್ಧಿ ಸಾಧಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.