ಸಹ್ಯಾದ್ರಿ ಪಂಚಮುಖಿ ಭತ್ತದ ತಳಿ: ಉತ್ತಮ ಇಳುವರಿ ನಿರೀಕ್ಷೆ

ಎಂಒ4ಗಿಂತಲೂ ಮೊದಲೇ ಫಸಲು ಬಿಟ್ಟ ಹೊಸ ತಳಿ

Team Udayavani, Oct 10, 2021, 6:18 AM IST

ಸಹ್ಯಾದ್ರಿ ಪಂಚಮುಖಿ ಭತ್ತದ ತಳಿ: ಉತ್ತಮ ಇಳುವರಿ ನಿರೀಕ್ಷೆ

ಕುಂದಾಪುರ: ನೆರೆ ಬಾಧಿತ ಕರಾವಳಿ ಪ್ರದೇಶಗಳಿಗೆ ಸರಿ ಹೊಂದುವಂತೆ ಹೊಸದಾಗಿ ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರದವರು ಸಂಶೋಧಿಸಿದ ಸಹ್ಯಾದ್ರಿ ಪಂಚಮುಖಿ (ಕೆಂಪಕ್ಕಿ) ಭತ್ತದ ತಳಿಯನ್ನು ಈ ಬಾರಿ ಕುಂದಾಪುರ ಭಾಗದಲ್ಲಿ ಅನೇಕ ಮಂದಿ ರೈತರು ಪ್ರಾಯೋಗಿಕವಾಗಿ ಬೆಳೆದಿದ್ದು, ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದಾರೆ.

ಈ ಬಾರಿ ಕುಂದಾಪುರದ ಅನೇಕ ಕಡೆಗಳಲ್ಲಿ ರೈತರು ಈ ಸಹ್ಯಾದ್ರಿ ಪಂಚಮುಖಿ ಭತ್ತದ ತಳಿಯನ್ನು ಪ್ರಾಯೋಗಿಕ ನೆಲೆಯಲ್ಲಿ ಬೆಳೆಸಿದ್ದು, ಎಂ.ಒ.-4 ಗಿಂತಲೂ ಮೊದಲೇ ಫಸಲು ಬಂದಿದೆ. ಮಾತ್ರವಲ್ಲದೆ ಇಳುವರಿಯೂ ಉತ್ತಮವಾಗಿ ಇರುವಂತೆ ತೋರುತ್ತಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳುವುದರಿಂದ ತಗ್ಗು ಪ್ರದೇಶದ ಗದ್ದೆಗಳಲ್ಲಿ ನೀರು ನಿಂತು, ಭತ್ತದ ಪೈರು ಕೊಳೆಯುತ್ತಿರುತ್ತದೆ. ಈ ಸಮಸ್ಯೆಯನ್ನು ಅರಿತು ಇಲ್ಲಿನ ಪ್ರದೇಶಕ್ಕೆ ಅನುಕೂಲವಾಗುವಂತಹ ಸಹ್ಯಾದ್ರಿ ಪಂಚಮುಖಿ ತಳಿಯನ್ನು ಬ್ರಹ್ಮಾವರದ ಕೃಷಿ ಸಂಶೋಧನ ಕೇಂದ್ರದವರು ಅನ್ವೇಷಿಸಿದ್ದಾರೆ.

ಎಲ್ಲೆಲ್ಲಿ?
ಕುಂದಾಪುರ, ಬೈಂದೂರು ತಾಲೂಕಿನ ಸಿದ್ದಾಪುರ, ಗಂಗೊಳ್ಳಿ, ಅರಾಟೆ, ಹೆಮ್ಮಾಡಿ, ಮರವಂತೆ, ಬೆಳ್ವೆ, ಆರ್ಡಿ, ಅಲ್ಬಾಡಿ, ಹೈಕಾಡಿ, ಕಾಳಾವರ ಮತ್ತಿತರ ಪ್ರದೇಶಗಳಲ್ಲಿ ರೈತರು ಬೆಳೆದಿದ್ದಾರೆ. ಹೆಚ್ಚಿನವರು ಒಂದೆರಡು ಗದ್ದೆಗಳಲ್ಲಿ ಅಷ್ಟೇ ಬೆಳೆದಿದ್ದಾರೆ. ಈ ಬಾರಿಯ ಇಳುವರಿಯನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಹೆಚ್ಚಿಗೆ ಬೆಳೆಸುವ ಯೋಜನೆ ಹಾಕಿಕೊಂಡಿದ್ದಾರೆ ರೈತರು.

110 ದಿನಗಳಲ್ಲೇ ಫಸಲು
ಎಂ.ಒ.-4 ಭತ್ತದ ತಳಿಯು ನಾಟಿ ಮಾಡಿದ ಅನಂತರ ಸುಮಾರು 130 ರಿಂದ 135 ದಿನಗಳಲ್ಲಿ ಫಸಲು ಬಂದಿದ್ದರೆ, ಅದಕ್ಕೆ ಪರ್ಯಾಯವಾಗಿ ಬೆಳೆಸಿದ ಈ ಸಹ್ಯಾದ್ರಿ ಪಂಚಮುಖಿ ಭತ್ತದ ತಳಿಯು 110ರಿಂದ 120 ದಿನಗಳಲ್ಲಿಯೇ ಫಸಲು ಬಿಟ್ಟಿದೆ. 1 ಬುಡದಲ್ಲಿ 15ರಿಂದ 20 ಪೈರು ಬೆಳೆದಿವೆ. ಎಂ.ಒ.-4 ಗಿಂತ 4 ಇಂಚು ಎತ್ತರವಾಗಿ ಬೆಳೆದಿದೆ.

ಇದನ್ನೂ ಓದಿ:ಗೋವಾದಲ್ಲಿ ಚಾರ್ಟರ್ ವಿಮಾನಗಳು ಆರಂಭ: ಉತ್ತಮ ಪ್ರವಾಸಿ ಋತು ನಿರೀಕ್ಷೆ

ಉತ್ತಮ ಫಲಿತಾಂಶ
ನಮ್ಮ 2 ಸೆನ್ಸ್‌ ಗದ್ದೆಯೊಂದರಲ್ಲಿ ಈ ಸಹ್ಯಾದ್ರಿ ಪಂಚಮುಖಿ ಭತ್ತದ ತಳಿಯನ್ನು ಬೆಳೆದಿದ್ದೇನೆ. ಎಂ.ಒ.4 ಗಿಂತ ಉತ್ತಮ ಇಳುವರಿಯ ನಿರೀಕ್ಷೆಯಿದೆ. ಈಗಾಗಲೇ ಉತ್ತಮವಾಗಿ ಫಸಲು ಬಂದಿದೆ. ರೋಗಬಾಧೆ ಸಹ ಸ್ವಲ್ಪ ಮಟ್ಟಿಗೆ ಕಡಿಮೆಯಿದ್ದಂತೆ ಕಾಣುತ್ತಿದೆ. ಫಸಲು ಬೇಗ ಆದರೆ ಕಟಾವಿಗೆ ಸ್ವಲ್ಪ ಮಟ್ಟಿಗೆ ತೊಂದರೆ ಆಗಬಹುದು. 1 ಸಾಲಿನಿಂದ ಇನ್ನೊಂದು ಸಾಲಿಗೆ 10 ಇಂಚು ಅಂತರ ಬಿಡಬೇಕು. ಒಂದೊಂದು ಗಿಡ ನೆಟ್ಟಿದ್ದು, ಈಗ 15-20 ಗಿಡಗಳು ಒಂದು ಬುಡದಲ್ಲಿ ಬಂದಿದೆ.
– ಕೃಷ್ಣ ನಾಯ್ಕ ಬೆಳ್ವೆ, ಕೃಷಿಕರು

ಪ್ರಾಯೋಗಿಕ ಪ್ರಯತ್ನ
ಕುಂದಾಪುರ ಭಾಗದ ಹಲವು ಮಂದಿ ರೈತರು ಈ ಸಹ್ಯಾದ್ರಿ ಭತ್ತದ ತಳಿಯನ್ನು ಪ್ರಾಯೋಗಿಕವಾಗಿ ಪರೀಕ್ಷಿಸುವ ಸಲುವಾಗಿ ಬೆಳೆದಿದ್ದಾರೆ. ಹೆಚ್ಚು ಎತ್ತರ ಬೆಳೆಯುವುದರಿಂದ ಭತ್ತದ ಪೈರುಗಳು ಗಾಳಿಗೆ ಗದ್ದೆಗೆ ಬಾಗಿ, ಮಲಗಿದೆ. ಈವರೆಗೆ ಉತ್ತಮ ಫಸಲು ಬಂದಿದ್ದು, ಒಳ್ಳೆಯ ಇಳುವರಿಯ ನಿರೀಕ್ಷೆಯೂ ಇದೆ. ಒಂದು ಎಕರೆಗೆ 20 ಕ್ವಿಂಟಾಲ್‌ ಇಳುವರಿ ನಿರೀಕ್ಷೆಯಿದೆ. ನೆರೆ ಹಾವಳಿಗೂ ಇದು ಸಹಕಾರಿ. ಮಲೆನಾಡು, ಕರಾವಳಿಗೆ ಹೆಚ್ಚು ಸೂಕ್ತ.
– ಚೇತನ್‌, ತಾ| ಕೃಷಿ ಅಧಿಕಾರಿ,
ಎಸ್‌ಕೆಡಿಆರ್‌ಡಿಪಿ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.