ಸಾಲಿಗ್ರಾಮ ಡಂಪಿಂಗ್‌ ಯಾರ್ಡ್‌: ಇನ್ನೂ ಬಗೆಹರಿಯದ ಸಮಸ್ಯೆ


Team Udayavani, May 29, 2018, 6:10 AM IST

2405kota2e.jpg

ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಸರಿಯಾದ ಡಂಪಿಂಗ್‌ಯಾರ್ಡ್‌ ಇಲ್ಲದಿರುವುದರಿಂದ ಇಲ್ಲಿನ ಹಳೆಕೋಟೆ ಮೈದಾನದಲ್ಲಿ ತಾತ್ಕಾಲಿಕ ಡಂಪಿಂಗ್‌ಯಾರ್ಡ್‌ ನಿರ್ಮಿಸಲಾಗಿತ್ತು. ಆದರೆ ಆರೇಳು ತಿಂಗಳ ಹಿಂದೆ ಇದರ ಪಕ್ಕದಲ್ಲೇ ಕುಡಿಯುವ ನೀರಿನ ಬಾವಿ ನಿರ್ಮಿಸಿದ್ದು, ಮಳೆಗಾಲದಲ್ಲಿ ಕೊಳಚೆ ನೀರು ಬಾವಿ ಸೇರುವ ಆತಂಕ ಎದುರಾಗಿದೆ. 

ಸ್ಥಳೀಯರಿಗೆ ಸಮಸ್ಯೆ
ಹಳೆಕೋಟೆ ಮೈದಾನವು ಜನ ನಿಬಿಡ ಪ್ರದೇಶ ಹಾಗೂ ಕ್ರೀಡಾಂಗಣವಾಗಿದ್ದು ಸುತ್ತ 100ಕ್ಕೂ ಹೆಚ್ಚು ಮನೆಗಳಿದೆ ಹಾಗೂ ಎರಡು ಕಲ್ಯಾಣ ಮಂಟಪ, ಯಕ್ಷಗಾನ ಕಲಾಕೇಂದ್ರ ಕೂಡ ಇದೆ. ಇಲ್ಲಿ ರಾಷ್ಟ್ರ ಮಟ್ಟದ ಕ್ರಿಕೆಟ್‌ ಪಂದ್ಯಾಟಗಳು ಸಂಘಟಿತಗೊಳ್ಳುತ್ತದೆ ಹಾಗೂ ಪ್ರತಿ ನಿತ್ಯ ಕ್ರೀಡಾಪಟುಗಳು ಅಭ್ಯಾಸ ನಡೆಸುತ್ತಾರೆ.  ಹೀಗಾಗಿ ಇಲ್ಲಿ ಕಸ ವಿಲೇವಾರಿ ಮಾಡಲು ಸ್ಥಳೀಯರು ಮೊದಲೇ ವಿರೋಧ ವ್ಯಕ್ತಪಡಿಸಿದ್ದರು. ಆಗ ತಾತ್ಕಾಲಿಕ ಡಂಪಿಂಗ್‌ಯಾರ್ಡ್‌ ಎಂದು ಮನವೊಲಿಸಲಾಗಿತ್ತು. ಆದರೆ ಒಂದೆರಡು ವರ್ಷವಾದರೂ ಬೇರೆ ವ್ಯವಸ್ಥೆಯಾಗದಿರುವುದು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.  

ಬಾವಿಗೆ ಕೊಳಚೆ ನೀರು! 
ಡಂಪಿಂಗ್‌ಯಾರ್ಡ್‌ನ ಐದಾರು ಅಡಿ ದೂರದಲ್ಲೇ  ಕುಡಿಯುವ ನೀರು ಸರಬರಾಜು ಮಾಡುವ ಸರಕಾರಿ ಬಾವಿ ಇದ್ದು ಸ್ಥಳೀಯ ಪಾರಂಪಳ್ಳಿ ವಾರ್ಡ್‌ನ 650 ಮನೆಗಳಿಗೆ ಇಲ್ಲಿನ ನೀರು ಸರಬರಾಜು ಆಗುತ್ತದೆ. ಈ ಬಾರಿ ಮಳೆಗಾಲದಲ್ಲಿ ಡಂಪಿಂಗ್‌ಯಾರ್ಡ್‌ನಲ್ಲಿ ನಿಂತ ಕೊಳಚೆ ನೀರು  ಈ ಬಾವಿ ಸೇರುವ ಎಲ್ಲಾ ಸಾಧ್ಯತೆ ಇದೆ.

ಶಾಶ್ವತ ಪರಿಹಾರಕ್ಕೆ ಹಿನ್ನಡೆ
ಪ.ಪಂ. ವತಿಯಿಂದ ಈ ಹಿಂದೆ ಉಳೂ¤ರಿನಲ್ಲಿ ಜಾಗವೊಂದನ್ನು ಖರೀದಿಸಿ ಡಂಪಿಂಗ್‌ಯಾರ್ಡ್‌ ನಿರ್ಮಿಸಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿನ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಅದು ಸಾಧ್ಯವಾಗಲಿಲ್ಲ. ಅನಂತರ  ಹಳೆಕೋಟೆ ಮೈದಾನದಲ್ಲಿ  ಕಸವನ್ನು ರಾಶಿ ಹಾಕಿ ಅಲ್ಲಿಂದ ಉಡುಪಿಯ ಡಂಪಿಂಗ್‌ಯಾರ್ಡ್‌ಗೆ ಸಾಗಿಸಲಾಗುತಿತ್ತು. ಇದೀಗ  ಆದಷ್ಟು ಶೀಘ್ರ ಈ ತಾತ್ಕಾಲಿಕ ಡಂಪಿಂಗ್‌ಯಾರ್ಡ್‌ ಸ್ಥಳಾಂತರಿಸಬೇಕು ಎನ್ನುವುದು ಇಲ್ಲಿನ ನಿವಾಸಿಗಳ ಆಗ್ರಹವಾಗಿದೆ.

ಸ್ಥಳಾಂತರಿಸಿ
ಹಳೆಕೋಟೆಯ ಜನಬಿಡಿದ ಹಾಗೂ ಕ್ರೀಡಾಚಟುವಟಿಕೆಗಳು ನಡೆಯುವ ಸ್ಥಳವನ್ನು ಡಂಪಿಂಗ್‌ಯಾರ್ಡ್‌ಗೆ ಆಯ್ಕೆ ಮಾಡಿಕೊಂಡಿದ್ದು  ತೀರಾ ಅವೈಜ್ಞಾನಿಕ. ಇದೀಗ ಕುಡಿಯುವ ನೀರಿನ ಬಾವಿಯೊಂದನ್ನು ಇದರ ಪಕ್ಕದಲ್ಲೇ ನಿರ್ಮಿಸಿದ್ದು  ಈ ಬಾರಿ ಡಂಪಿಂಗ್‌ಯಾರ್ಡ್‌ನ ಕಲುಷಿತ ನೀರು ಬಾವಿ ಸೇರುವುದು ಖಂಡಿತ ಹಾಗೂ ಸ್ಥಳೀಯ ಪ್ರದೇಶದಲ್ಲೂ  ದುರ್ವಾಸನೆ ಹರಡುತ್ತಿದೆ.
– ರಾಮಚಂದ್ರ ಐತಾಳ ಗುಂಡ್ಮಿ, ಸ್ಥಳೀಯ ನಿವಾಸಿ

ಸೂಕ್ತ ಸ್ಥಳವಿಲ್ಲ   ಸ್ಥಳಾವಕಾಶವಿಲ್ಲದ  ಕಾರಣ ಈ ಹಿಂದೆ ಉಳೂ¤ರಿನಲ್ಲಿ ಜಾಗ ಖರೀದಿಸಿ ಡಂಪಿಂಗ್‌ಯಾರ್ಡ್‌ ನಿರ್ಮಿಸಲು ಪ್ರಯತ್ನಿಸಲಾಗಿತ್ತು. ಆದರೆ ವಿರೋಧ ವ್ಯಕ್ತವಾದ್ದರಿಂದ ತಾತ್ಕಾಲಿಕವಾಗಿ ಕಸ ರಾಶಿ ಹಾಕಲು ಹಳೇಕೋಟೆ ಮೈದಾನ ಬಳಸಿಕೊಂಡು ಅಲ್ಲಿಂದ ಉಡುಪಿ ಡಂಪಿಂಗ್‌ಯಾರ್ಡ್‌ ಗೆ ರವಾನಿಸಲಾಗುತ್ತಿದೆ.  ಈಗ ಇದದರಿಂದ ಕೂಡ ಸಮಸ್ಯೆ ಯಾಗುತ್ತಿದ್ದು ಕಸವನ್ನು ಶೀಘ್ರ ವಿಲೇವಾರಿ ಮಾಡಲಾಗುತ್ತಿದೆ.
– ಶ್ರೀಪಾದ್‌ ಪುರೋಹಿತ್‌, 
ಮುಖ್ಯಾಧಿಕಾರಿಗಳು,ಸಾಲಿಗ್ರಾಮ ಪ.ಪಂ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.