ಸಾಲಿಗ್ರಾಮ: ಇನ್ನೂ ಆಗಿಲ್ಲ ಸರ್ವೀಸ್‌ ರಸ್ತೆ

ಮಾತಿಗೆ ತಪ್ಪಿದ ನವಯುಗ, ಟೋಲ್‌ ತಡೆದು ಪ್ರತಿಭಟಿಸಲು ತಯಾರಿ

Team Udayavani, Jan 25, 2020, 5:30 AM IST

2301KOTA1E

ಚತುಷ್ಪಥ ಕಾಮಗಾರಿ ಆರಂಭದಲ್ಲೇ ಸಾಲಿಗ್ರಾಮದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣವಾಗಬೇಕಿತ್ತು. ಆದರೆ ಕಾಮಗಾರಿ ವಿಳಂಬವಾಗಿತ್ತು. ಇದರ ವಿರುದ್ಧ ಸಾಕಷ್ಟು ಹೋರಾಟಗಳು ನಡೆದು ಕುಂದಾಪುರ ಸಹಾಯಕ ಕಮಿಷನರ್‌ ಮಧ್ಯಸ್ಥಿಕೆಯಲ್ಲಿ ಜನವರಿ ಅಂತ್ಯದೊಳಗೆ ಕಾಮಗಾರಿ ಮುಗಿಸುವುದಾಗಿ ನವಯುಗ ಕಂಪೆನಿ ಭರವಸೆ ನೀಡಿತ್ತು. ಆದರೆ ಗಡುವು ಮುಗಿದರೂ ಕಾಮಗಾರಿ ಆರಂಭಗೊಂಡಿಲ್ಲ. ಹೀಗಾಗಿ ಹೋರಾಟಕ್ಕೆ ಸ್ಥಳೀಯರು ಸಜ್ಜಾಗುತ್ತಿದ್ದಾರೆ.

ಕೋಟ: ಹೆದ್ದಾರಿಯ ಪಕ್ಕದಲ್ಲಿ ಸರ್ವೀಸ್‌ ರಸ್ತೆಯಾಗುತ್ತದೆ ಎಂದು ಕಾದಿದ್ದ ಸಾಲಿಗ್ರಾಮ ಜನತೆಯ ಬೇಡಿಕೆ ಇನ್ನೂ ಈಡೇರಿಲ್ಲ. ಕಾಮಗಾರಿ ನಡೆದು 10 ವರ್ಷ ಕಳೆದರೂ ಬೇಡಿಕೆ ಹಾಗೇ ಉಳಿದಿದ್ದು, ಜನರ ಆಕ್ರೋಶಕ್ಕೆ ಗುರಿಯಾಗಿದೆ.

ಚತುಷ್ಪಥ ಕಾಮಗಾರಿಯ ಪ್ರಥಮ ಹಂತದ ಯೋಜನೆ ಪಟ್ಟಿಯಲ್ಲಿ ಸರ್ವೀಸ್‌ ರಸ್ತೆಯ ಪ್ರಸ್ತಾವನೆ ಇತ್ತು. ಈ ಬಗ್ಗೆ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಹಲವು ಹೋರಾಟಗಳೂ ನಡೆದಿದ್ದವು. ಕೆಲ ತಿಂಗಳ ಹಿಂದೆ ಪ್ರತಿಭಟನೆ ನಡೆದಿದ್ದಾಗ 2020 ಜನವರಿ ಒಳಗೆ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕುಂದಾಪುರ ಎ.ಸಿ.ಯವರ ಸಮಕ್ಷಮದಲ್ಲಿ ಕಂಪೆನಿ ಭರವಸೆ ನೀಡಿತ್ತು. ಆದರೆ ಕಾಮಗಾರಿ ಆರಂಭವಾಗಲೇ ಇಲ್ಲ.

ಸಾರ್ವಜನಿಕರಿಗೆ ಸಮಸ್ಯೆ
ಕಾರ್ಕಡ-ಕಾವಡಿ ರಸ್ತೆಯಿಂದ ಮೀನುಮಾರುಕಟ್ಟೆ ತನಕ ಎರಡೂ ಕಡೆಗಳಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣವಾಗಬೇಕಿತ್ತು. ರಸ್ತೆ ನಿರ್ಮಾಣವಾಗದ್ದರಿಂದ ಕಾವಡಿ ರಸ್ತೆ ಮೂಲಕ ಆಗಮಿಸುವವರು ಸಾಲಿಗ್ರಾಮ ತಲುಪಬೇಕಾದರೆ ಸುಮಾರು 4 ಕಿ.ಮೀ. ಸುತ್ತುಬಳಸಿ ಗುಂಡ್ಮಿ ಮೂಲಕ ಸಂಚರಿಸಬೇಕಾಗಿದೆ. ಅಥವಾ ಸಂಚಾರ ನಿಯಮ ಉಲ್ಲಂ ಸಿ 500 ಮೀ. ದೂರದಲ್ಲೇ ಮುಖ್ಯಪೇಟೆ ತಲುಪಬಹುದು. ಹೀಗಾಗಿ ಇಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರ ಹೆಚ್ಚಿದ್ದು ಸಾಕಷ್ಟು ಅಪಘಾತ, ಜೀವಹಾನಿ ಸಂಭವಿಸಿದೆ.

ನವಯುಗ ನಾಟ್‌ ರೀಚೆಬಲ್‌
ಕಾಮಗಾರಿ ಯಾವಾಗ ಆರಂಭಿಸುತ್ತೀರಿ ಎಂಬ ಪ್ರಶ್ನೆಗೆ ಕಂಪೆನಿಯ ಉನ್ನತ ಅಧಿಕಾರಿಗಳು ಸಂಪರ್ಕಕ್ಕೆ ಸಿಗುವುದಿಲ್ಲ. ಕಿರಿಯ ಅಧಿಕಾರಿಗಳು ಈ ಬಗ್ಗೆ ತಿಳಿದಿಲ್ಲ ಎನ್ನುತ್ತಾರೆ. ಹೀಗಾಗಿ ಸಮಸ್ಯೆ ಹೇಳಲಾರದೆ, ಯಾರಿಗೆ ಮನವಿ ಸಲ್ಲಿಸಬೇಕು ಎಂದು ತಿಳಿಯದ ಸ್ಥಿತಿಯಲ್ಲಿ ಸ್ಥಳೀಯರಿದ್ದಾರೆ. ಜನಪ್ರತಿನಿಧಿಗಳು ಕೂಡ ಸಮಸ್ಯೆಯನ್ನು ಗಂಭಿರವಾಗಿ ಪರಿಗಣಿಸುತ್ತಿಲ್ಲ ಎನ್ನುವ ಆರೋಪವಿದೆ.

ಫ್ಲೈಓವರ್‌ ಮುಗಿಯದೆ ಕಾಮಗಾರಿ ಆಗದು
ಕಾರ್ಮಿಕರು, ಸಂಪನ್ಮೂಲದ ಕೊರತೆ ಇದೆ. ಹೀಗಾಗಿ ಕುಂದಾಪುರದ ಫ್ಲೈಓವರ್‌ ಕಾಮಗಾರಿ ಮುಗಿದ ಮೇಲೆ ಬಾಕಿ ಉಳಿದ ಕೆಲಸಗಳನ್ನು ಹಂತ- ಹಂತವಾಗಿ ಪೂರ್ಣಗೊಳಿಸ ಲಾಗುವುದು ಎಂದು ನವಯುಗ ಅಧಿಕಾರಿಗಳು ವರ್ಷದ ಹಿಂದೆ ತಿಳಿಸಿದ್ದರು. ಆದರೆ ಫ್ಲೈಓವರ್‌ ಕಾಮಗಾರಿ ಇದುವರೆಗೆ ಪೂರ್ಣಗೊಂಡಿಲ್ಲ. ಟೋಲ್‌ ಆರಂಭಿಸುವಾಗ ಎಲ್ಲ ಕಾಮ ಗಾರಿಗಳು ಬಹುತೇಕ ಪೂರ್ಣಗೊಂಡಿವೆೆ ಎಂದು ಕಂಪನಿ ಮಾಹಿತಿ ನೀಡಿತ್ತು. ಆದರೆ ಯೋಜನೆಯಂತೆ ಇನ್ನೂ ಹಲ ವಾರು ಕಾಮಗಾರಿಗಳು ಬಾಕಿ ಇವೆ. ಆದ್ದರಿಂದ ಟೋಲ್‌ ತಡೆದು ಹೋರಾಟ ನಡೆಸಿದಲ್ಲಿ ತಪ್ಪಿಲ್ಲ ಎನ್ನುವುದು ಹೆದ್ದಾರಿ ಜಾಗೃತಿ ಸಮಿತಿಯ ಅಭಿಪ್ರಾಯವಾಗಿದೆ.

ಸರ್ವಿಸ್‌ ರಸ್ತೆಯ ಬೇಡಿಕೆ ನಿನ್ನೆಮೊನ್ನೆಯದ್ದಲ್ಲ. ಹತ್ತು ವರ್ಷಗಳ ಆಗ್ರಹ. ಆದರೆ ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅದರ ಜತೆಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪಘಾತಗಳು ಜನರ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿವೆೆ. ಅಧಿಕಾರಿಗಳು ಈ ಬಗ್ಗೆ ತುರ್ತು ಕ್ರಮಕೈಗೊಳ್ಳಬೇಕಾಗಿದೆ.

ಹೋರಾಟಕ್ಕೆ ಸಿದ್ಧತೆ
ಕಂಪೆನಿ ಮಾತಿಗೆ ತಪ್ಪಿರುವುದರಿಂದ ಸ್ಥಳೀಯರು ಅಸಮಾಧಾನ ಗೊಂಡಿದ್ದಾರೆ. ಕಾಮಗಾರಿ ಬಹುತೇಕ ಪೂರ್ಣಗೊಳ್ಳದೆ ಟೋಲ್‌ ಸ್ವೀಕರಿಸುವಂತಿಲ್ಲ ಎನ್ನುವ ಕಾನೂನು ಇರುವುದರಿಂದ ಮುಂದೆ ಸರ್ವೀಸ್‌ ರಸ್ತೆ ಆಗುವ ವರೆಗೆ ಟೋಲ್‌ ಸಂಗ್ರಹಿಸಲು ಬಿಡುವುದಿಲ್ಲ ಎಂದು ಪ್ರತಿಭಟಿಸುವ ಸಿದ್ಧತೆ ನಡೆಸುತ್ತಿದ್ದಾರೆ.

ಮೂಲಸೌಕರ್ಯ
ಅಪಘಾತ ಹೆಚ್ಚಳ ತಡೆಯಲು ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು.

ಕಾಮಗಾರಿ ಆರಂಭಿಸುವ ಲಕ್ಷಣವಿಲ್ಲ
ಸರ್ವೀಸ್‌ ರಸ್ತೆಗೆ ಸಂಬಂಧಿಸಿದಂತೆ ಕಳೆದ ಏಳೆಂಟು ತಿಂಗಳ ಹಿಂದೆ ಹೋರಾಟ ನಡೆಸಿದಾಗ ಜನವರಿ ಆರಂಭದೊಳಗೆ ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದೀಗ ಗಡುವು ಮುಗಿದರೂ ಕಾಮಗಾರಿ ಆರಂಭಿಸುವ ಲಕ್ಷಣ ಕಂಡು ಬರುತ್ತಿಲ್ಲ. ನವಯುಗದ ಅಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ಹೋರಾಟ ನಡೆಸುವ ಚಿಂತನೆಯಲ್ಲಿದ್ದೇವೆ..
– ರತ್ನಾ ನಾಗರಾಜ್‌,
ಪ.ಪಂ. ಪೇಟೆ ವಾರ್ಡ್‌ ಸದಸ್ಯೆ

ಟೋಲ್‌ ತಡೆದು ಪ್ರತಿಭಟನೆ
ಕಾಮಗಾರಿ ಆಗದ್ದರಿಂದ ಮುಂದೆ ಟೋಲ್‌ ಬಂದ್‌ ಮಾಡಿ ಪ್ರತಿಭಟಿಸುವ ಬಗ್ಗೆ ಸಿದ್ಧತೆ ನಡೆಸಿದ್ದೇವೆ. ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಪತ್ರ ರವಾನಿಸಿದ್ದೇವೆ.
– ಶ್ಯಾಮ್‌ಸುಂದರ ನಾೖರಿ,
ಅಧ್ಯಕ್ಷರು ಹೆದ್ದಾರಿ ಜಾಗೃತಿ ಸಮಿತಿ

ಮಾಹಿತಿ ಇಲ್ಲ
ಸರ್ವೀಸ್‌ ರಸ್ತೆ ಯಾವಾಗ ಆರಂಭವಾಗುತ್ತದೆ ಎನ್ನುವ ಕುರಿತು ಯಾವುದೇ ಮಾಹಿತಿ ಇಲ್ಲ. ಆರ್ಥಿಕ ಅಡಚಣೆಯಿಂದ ಕೆಲಸಗಳು ಸ್ಥಗಿತಗೊಂಡಿದೆ ಎನ್ನುವ ಮಾಹಿತಿ ಇದೆ. ಮೇಲಧಿಕಾರಿಗಳಿಂದ ಆದೇಶ ಬಂದ ಕೂಡಲೇ ಕೆಲಸ ಆರಂಭಿಸುತ್ತೇವೆ. .
– ನವಯುಗ ಎಂಜಿನಿಯರ್‌

-ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.