ಸಾಲಿಗ್ರಾಮ ಪ.ಪಂ.: ವರ್ಷದಿಂದ ಗೋಡೌನ್‌ನಲ್ಲಿ ಕಸ ಬಾಕಿ


Team Udayavani, Jan 30, 2023, 6:25 AM IST

ಸಾಲಿಗ್ರಾಮ ಪ.ಪಂ.: ವರ್ಷದಿಂದ ಗೋಡೌನ್‌ನಲ್ಲಿ ಕಸ ಬಾಕಿ

ಕೋಟ: ಸಾಲಿಗ್ರಾಮ ಪ.ಪಂ. ಕಸದ ಸಮಸ್ಯೆ ಹೊಸ-ಹೊಸ ರೂಪದಲ್ಲಿ ಹೊರಹೊಮ್ಮುತ್ತಿದೆ. ವರ್ಷದ ಹಿಂದೆ ಕಸ ವಿಲೇವಾರಿಗೆ ಸ್ಥಳಾವಕಾಶವಿಲ್ಲದೆ ಸಮಸ್ಯೆ ಆಗಿತ್ತು. ಅನಂತರ ದಿನದಲ್ಲಿ ಪಾರಂಪಳ್ಳಿಯಲ್ಲಿ ಗೋಡೌನ್‌ ದೊರತ್ತಿದ್ದರಿಂದ ಸ್ವಲ್ಪ ಮಟ್ಟಿಗೆ ನಿರಾಳವಾಗಿತ್ತು. ಆದರೆ ಇದೀಗ ಗೋಡೌನ್‌ನಲ್ಲಿ ಶೇಖರಣೆಯಾದ ಕಸವನ್ನು ವಿಲೇವಾರಿ ಮಾಡಲು ಟೆಂಡರ್‌ ಪಡೆದ ಕಂಪೆನಿ ಕೈಕೊಟ್ಟಿದೆ. ಹೊಸ ಗುತ್ತಿಗೆದಾರರು ಕಸ ವಿಲೇವಾರಿಗೆ ಮುಂದೆ ಬರುತ್ತಿಲ್ಲ. ಹೀಗಾಗಿ ಸ್ಥಳೀಯಾಡಳಿತಕ್ಕೆ ಸಮಸ್ಯೆಯಾಗಿದೆ.

ಗೋಡೌನ್‌ನಲ್ಲಿ ಶೇಖರಣೆಯಾದ ಕಸವನ್ನು ಪೂರ್ತಿಯಾಗಿ ವಿಲೇವಾರಿ ಮಾಡಲು ಮಂಗಳೂರು ಮೂಲದ ಗ್ರೀನ್‌ ಇಂಪ್ಯಾಕ್ಟ್ ಫೌಂಡೇಶನ್‌ ಎನ್ನುವ ಕಂಪೆನಿಗೆ 2022 ಜು. 20ರಂದು 3.5 ಲಕ್ಷ ರೂಗೆ ಒಪ್ಪಂದ ಮಾಡಿಕೊಂಡು ಮುಂಗಡವಾಗಿ 1.75ಲಕ್ಷ ರೂ ನೀಡಲಾಗಿತ್ತು. ಆದರೆ ಕಂಪೆನಿ ಕೇವಲ 7 ಲೋಡ್‌ ಕಸ ಮಾತ್ರ ವಿಲೇವಾರಿ ಮಾಡಿ ಸುಮ್ಮನಾಗಿದೆ.

ಒಪ್ಪಂದದ ದೋಷ
ಸಾಮಾನ್ಯವಾಗಿ ಕಸ ವಿಲೇವರಿಗೆ ಒಪ್ಪಂದ ಮಾಡಿಕೊಳ್ಳುವಾಗ 3ರಿಂದ 6 ತಿಂಗಳಲ್ಲಿ ವಿಲೇ ಮಾಡಬೇಕು ಎನ್ನುವ ಶರತ್ತನ್ನು ಸ್ಥಳೀಯಾಡಳಿತ ವಿಧಿಸುತ್ತದೆ. ಆದರೆ ಈ ಒಪ್ಪಂದಲ್ಲಿ ಕಾಲಮಿತಿ ವಿಧಿಸಿಲ್ಲ. ಹೀಗಾಗಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಆದರೆ ಪ.ಪಂ. ಮುಖ್ಯಸ್ಥರು ಹೇಳುವ ಪ್ರಕಾರ ಒಪ್ಪಂದದಲ್ಲಿ ನಮೂದಾಗದಿದ್ದರೂ 6ತಿಂಗಳೊಳಗೆ ವಿಲೇ ಮಾಡಬೇಕು ಎನ್ನುತ್ತಾರೆ.

ಮೃದು ಧೋರಣೆ
ಒಂದು ಅಂದಾಜಿನ ಪ್ರಕಾರ ಗೋಡೌನ್‌ನಲ್ಲಿರುವ ಎಲ್ಲ ಕಸ ವಿಲೇವಾರಿ ಮಾಡಲು 6-7ಲಕ್ಷ ರೂ ಬೇಕಾಗುತ್ತದೆ. ಆದರೆ ಗುತ್ತಿಗೆ ವಹಿಸಿಕೊಂಡ ಕಂಪೆನಿ 3.5ಲಕ್ಷಕ್ಕೆ ಬಿಡ್‌ ಮಾಡುವ ಮೂಲಕ ಆರಂಭದಲ್ಲೇ ಎಡವಿದೆ ಎನ್ನಲಾಗಿದೆ. ಕಂಪೆನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಕ್ಕೆ ಗುತ್ತಿಗೆ ಪಡೆದ ವ್ಯಕ್ತಿಗೆ ತೀವ್ರ ಅಪಘಾತವಾಗಿದ್ದು, ಓಡಾಡುವ ಪರಿಸ್ಥಿತಿ ಇಲ್ಲ. ಮೂರು ಬಾರಿ ಅವರಿಗೆ ನೋಟೀಸು ನೀಡಿದ್ದೇವೆ. 7 ಲೋಡ್‌ ಕಸ ವಿಲೇವಾರಿ ಮಾಡಲು 56 ಸಾವಿರ ರೂ. ಖರ್ಚಾಗಿದ್ದು ಮಿಕ್ಕುಳಿದ ಹಣ ವಾಪಾಸು ಮಾಡುತ್ತೇನೆ ಎಂದವರು ತಿಳಿಸಿದ್ದಾರೆ. ಆದ್ದರಿಂದ ಕಾದು ನೋಡುತ್ತಿದ್ದೇವೆ ಎಂದು ಮುಖ್ಯಾಧಿಕಾರಿಗಳು ಹೇಳುತ್ತಾರೆ.

ಕ್ರಮ ಕೈಗೊಳ್ಳುತ್ತೇವೆ
ಒಪ್ಪಂದದಂತೆ ಕಾಮಗಾರಿ ನಿರ್ವಹಿಸಲು ವಿಫಲವಾಗಿರುವುದರಿಂದ ನಾವು ನೀಡಿದ ಹಣವನ್ನು ಹಿಂದಿರುಗಿಸುವಂತೆ ಮೂರು ಬಾರಿ ನೋಟೀಸು ನೀಡಿದ್ದೇವೆ. ಆದರೆ ಅನಾರೋಗ್ಯದ ಕಾರಣ ಕಾಲಾವಕಾಶ ಕೇಳಿದ್ದಾರೆ. ಇನ್ನೊಮ್ಮೆ ವಿಚಾರಿಸಿ ಕ್ರಮಕೈಗೊಳ್ಳುತ್ತೇವೆ.
-ಶಿವ ನಾಯ್ಕ, ಮುಖ್ಯಾಧಿಕಾರಿಗಳು

ಸಾರ್ವಜನಿಕ ಹಿತಾಸಕ್ತಿ ದೂರು
ಸ್ಥಳೀಯಾಡಳಿತ ನಿಗದಿಪಡಿಸುವ ಮೊತ್ತವನ್ನು, ಸೀಮಿತ ದಿನದೊಳಗೆ ಗುತ್ತಿಗೆ ವಹಿಸಿಕೊಂಡವರು ವಾಪಾಸು ನೀಡಬೇಕಿತ್ತು. ಇಲ್ಲವಾದರೆ ಅವರ ವಿರುದ್ಧ ಪೊಲೀಸ್‌ ಪ್ರಕರಣ ದಾಖಲಿಸಬೇಕಿತ್ತು. ಸಾರ್ವಜನಿಕರ ತೆರಿಗೆ ಹಣ ಪೋಲಾಗಬಾರದು ಎನ್ನುವ ನಿಟ್ಟಿನಲ್ಲಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಲಾಗು ವುದು.
-ಶ್ಯಾಮ್‌ಸುಂದರ್‌ ನಾೖರಿ, ಸದಸ್ಯರು, ಪ.ಪಂ.

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

punjab-kings

ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

ಬೆಳಪು :27 ವರ್ಷದ ವಿವಾಹಿತೆ ನಾಪತ್ತೆ

1-sadsasa-d

ಎಳ್ಳಾರೆ ವೈ.ವಿಟ್ಠಲ ಪ್ರಭು ಹೃದಯಾಘಾತದಿಂದ ನಿಧನ

1-daadas

ಮಂಗಳೂರು,ಉಡುಪಿಯಲ್ಲಿ ನಾಳೆಯಿಂದ ರಂಜಾನ್ ಉಪವಾಸ ಆರಂಭ

1-adassad

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಯುನಿಕೋರ್ಟ್‌ ದಿನ

25 ಸಾವಿರ ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ : ಪೇಜಾವರ ಶ್ರೀ

25 ಸಾವಿರ ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ : ಪೇಜಾವರ ಶ್ರೀ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

punjab-kings

ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್

1-adsadsad

ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?

1-a-wewq3

ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.