ಸಾಲಿಗ್ರಾಮ – ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರ ಸಿದ್ಧ
Team Udayavani, Jun 18, 2018, 2:15 AM IST
ಪ್ರಾ.ಆ. ಕೇಂದ್ರ ಸಾಲಿಗ್ರಾಮ ಸಂಪರ್ಕ: 0820 2564560
ಪ್ರಾ.ಆ. ಕೇಂದ್ರ ಸಾಸ್ತಾನ ಸಂಪರ್ಕ: 0820 2584910
ಸಂಪರ್ಕ ಸಂಖ್ಯೆ
ಡಾ| ರಾಘವೇಂದ್ರ ರಾವ್, ವೈದ್ಯಾಧಿಕಾರಿಗಳು: 9448696970
ಡಾ| ದಿಕ್ಷಾ, ವೈದ್ಯಾಧಿಕಾರಿ: 9481517238
ಕೋಟ: ಕೋಟ ಹೋಬಳಿಯ ಸಾಲಿಗ್ರಾಮ ಹಾಗೂ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಳೆಗಾಲದ ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ಸಿದ್ಧತೆ ನಡೆದಿದೆ. ಔಷಧಗಳ ಸಂಗ್ರಹ, ರೋಗದ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಲಿಗ್ರಾಮ, ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಿಗ್ರಾಮ ಕೇಂದ್ರವು ಪ.ಪಂ. ವ್ಯಾಪ್ತಿಯ ಚಿತ್ರಪಾಡಿ, ಗುಂಡ್ಮಿ, ಪಾರಂಪಳ್ಳಿ, ಕಾರ್ಕಡ ಗ್ರಾಮಗಳನ್ನು ಒಳಗೊಂಡಿದ್ದು, ಒಟ್ಟು 17,256 ಜನಸಂಖ್ಯೆ ಹೊಂದಿದೆ. ಕಾರ್ಕಡದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವಿದ್ದು, ಗುಂಡ್ಮಿ, ಪಾರಂಪಳ್ಳಿ, ಕಾರ್ಕಡದಲ್ಲಿ ಉಪಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದೆ. ಸಾಸ್ತಾನ ಆರೋಗ್ಯ ಕೇಂದ್ರವು ಐರೋಡಿ ಹಾಗೂ ಪಾಂಡೇಶ್ವರ ಗ್ರಾ.ಪಂ. ವ್ಯಾಪ್ತಿಯನ್ನು ಒಳಗೊಂಡಿದ್ದು, ಸುಮಾರು 12,500 ಜನಸಂಖ್ಯೆ ಇದ್ದು, ಐರೋಡಿಯಲ್ಲಿ ಪ್ರಾ.ಆ.ಕೇಂದ್ರದ ಕಟ್ಟಡ ಹಾಗೂ ಮೂಡುಹಡು, ಹಂಗಾರಕಟ್ಟೆ, ಪಾಂಡೇಶ್ವರ, ಐರೋಡಿಗಳಲ್ಲಿ ಉಪಕೇಂದ್ರವಿದೆ.
ಮುನ್ನೆಚ್ಚರಿಕೆ ಕ್ರಮಗಳು
ಮಳೆಗಾಲದಲ್ಲಿ ಎದುರಾಗುವ ಸಾಂಕ್ರಮಿಕ ರೋಗಗಳ ಕುರಿತು ಆರೋಗ್ಯ ಕೇಂದ್ರ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಹಾಗೂ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಶುಚಿತ್ವದ ಕುರಿತು ಎಚ್ಚರಿಕೆ ನೀಡಿ ಕರಪತ್ರಗಳನ್ನು ಹಂಚುತ್ತಿದ್ದಾರೆ. ರೋಗದ ಲಕ್ಷಣ ಕಂಡು ಬಂದರೆ ಮುಂಜಾಗೃತೆ ಕ್ರಮ ಹಾಗೂ ದೃಢಪಟ್ಟಲ್ಲಿ ಖಾಯಿಲೆ ವ್ಯಾಪಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ.
ವೈದ್ಯರ ಲಭ್ಯತೆ
ಸಾಲಿಗ್ರಾಮ ಹಾಗೂ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳಗ್ಗೆ 9ರಿಂದ ಅಪರಾಹ್ನ 1 ಹಾಗೂ ಅಪರಾಹ್ನ 1.45ರಿಂದ 4.30ರ ವರೆಗೆ ತರೆದಿರುತ್ತದೆ. ಈ ಸಂದರ್ಭ ಹಿರಿಯ ವೈದ್ಯಾಧಿಕಾರಿಗಳು ಹಾಗೂ ಕಿರಿಯ ಆರೋಗ್ಯ ಸಹಾಯಕರು ಸೇವೆಗೆ ಲಭ್ಯವಿರುತ್ತಾರೆ. ಮಂಗಳವಾರ ಪಾರಂಪಳ್ಳಿ ಉಪಕೇಂದ್ರ ಹಾಗೂ ಬುಧವಾರ ಗುಂಡ್ಮಿ ಉಪಕೇಂದ್ರಕ್ಕೆ ಹಿರಿಯ ವೈದ್ಯರು ಭೇಟಿ ನೀಡುತ್ತಾರೆ.
ಪ್ರಮುಖ ಸಮಸ್ಯೆಗಳು
ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ಗುಂಡ್ಮಿ, ಪಾರಂಪಳ್ಳಿ ಉಪಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲ. ಸಾಸ್ತಾನ ಆರೋಗ್ಯ ಕೇಂದ್ರದ ಕಟ್ಟಡ ಸಂಪೂರ್ಣ ಶಿಥಿಲವಾಗಿದ್ದು ತುರ್ತು ಸಂದರ್ಭದಲ್ಲಿ ರೋಗಿಗಳ ದಾಖಲಾತಿ, ಚಿಕಿತ್ಸೆ ಕಷ್ಟವಾಗುತ್ತಿದೆ. ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಜಾಗದ ಕೊರತೆ ಇದೆ. ಇಲ್ಲಿನ ಖಾಯಂ ವೈದ್ಯರು ಬೇರೆ ಕಡೆಗೆ ನಿಯೋಜನೆಗೊಂಡಿರುವುದರಿಂದ ಸಾಲಿಗ್ರಾಮ ಕೇಂದ್ರದ ವೈದ್ಯಾಧಿಕಾರಿಗಳನ್ನು ಆಡಳಿತಾಧಿಕಾರಿಯಾಗಿ ನೇಮಿಸಿ, ಗುತ್ತಿಗೆ ಆಧಾರದ ವೈದ್ಯೆಯೋರ್ವರ ಮೂಲಕ ಸೇವೆ ನೀಡಲಾಗುತ್ತಿದೆ ಜತೆಗೆ ಮೂಡಹಡು ಹಾಗೂ ಹಂಗಾರಕಟ್ಟೆಯ ಉಪಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲ.
ಸೌಲಭ್ಯ ಏನೇನಿವೆ?
ಎರಡೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಂಕ್ರಾಮಿಕ ರೋಗಗಳ ಪರೀಕ್ಷೆ, ರಕ್ತ, ಮೂತ್ರದ ಪರೀಕ್ಷೆ ನಡೆಸಲು ಪ್ರಯೋಗಾಲಯ ಸಿದ್ಧವಿದೆ. ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡುವ ಸಲುವಾಗಿ 6 ಬೆಡ್ಗಳ ಕೊಠಡಿ ಸೌಲಭ್ಯವಿದೆ. ಮಲೇರಿಯಾ,ಡೆಂಗ್ಯು ಮುಂತಾದ ಸಾಂಕ್ರಾಮಿಕ ಖಾಯಿಲೆಗಳಿಗೆ ಔಷಧ ಸಂಗ್ರಹವಿದೆ.
ಸ್ವಚ್ಚತೆಗೆ ಹೆಚ್ಚು ಗಮನ ನೀಡಿ
ಮಳೆಗಾಲದಲ್ಲಿ ಮನೆ ಹಾಗೂ ಪರಿಸರದ ಸುತ್ತಮುತ್ತ ಸ್ವಚ್ಚತೆಗೆ ಹೆಚ್ಚು ಗಮನ ನೀಡಬೇಕು ಹಾಗೂ ವೈಯಕ್ತಿಕ ಸ್ವಚ್ಚತೆ ಕುರಿತು ಗಮನಹರಿಸಬೇಕು. ಜ್ವರ ಕಾಣಿಸಿಕೊಂಡಾಗ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸರಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಸೇವೆ ನೀಡಲಾಗುತ್ತದೆ.
– ರಾಘವೇಂದ್ರ ರಾವ್, ವೈದ್ಯಾಧಿಕಾರಿ ಪ್ರಾ.ಆ.ಕೇ. ಸಾಲಿಗ್ರಾಮ
— ರಾಜೇಶ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ