ಕೊಮೆ- ಮಣೂರು: ಕೃಷಿ ಭೂಮಿ ಆವರಿಸಿದ ಉಪ್ಪುನೀರು


Team Udayavani, Jul 19, 2018, 6:00 AM IST

1707tke3.jpg

ತೆಕ್ಕಟ್ಟೆ : ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಕ್ಕಟ್ಟೆ -ಕೊಮೆ ಹಾಗೂ ಮಣೂರು ಭಾಗದಲ್ಲಿ ಸಮುದ್ರದಬ್ಬರ ಹೆಚ್ಚಾಗಿದ್ದು, ಇಲ್ಲಿನ ಕೃಷಿ ಭೂಮಿಗೆ ಸಮಸ್ಯೆಯಾಗಿದೆ. ಇಲ್ಲಿನ ಉಪ್ಪುನೀರು ತಡೆ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸದೇ ಇರುವುದು ರೈತರ ಆತಂಕಕ್ಕೆ ಕಾರಣವಾಗಿದೆ.  

15 ಎಕ್ರೆ ಪ್ರದೇಶಕ್ಕೆ ಸಮಸ್ಯೆ 
ಕಡಲ ತೀರದ ರೈತರು ಈಗಾಗಲೇ ನಾಟಿ ಕಾರ್ಯವನ್ನು ಪೂರ್ತಿಗೊಳಿಸಿದ್ದಾರೆ. ಕಳೆದ ಬಾರಿ ಉತ್ತಮ ಫ‌ಸಲು ಬಂದಿದ್ದು, ಈ ಬಾರಿಯೂ ಉತ್ಸಾಹದಿಂದ ನಾಟಿಗೆ ತೊಡಗಿದ್ದರು. ಆದರೆ ಉಪ್ಪುನೀರು ಜಮೀನು ಆವರಿಸತೊಡಗಿದ್ದರಿಂದ 15 ಎಕ್ರೆ ಭತ್ತ ಕೃಷಿ ಹಾಳಾಗುವ ಆತಂಕ ಎದುರಾಗಿದೆ.  

ಮರಳು ದಿಬ್ಬ ಅಗೆದ ಗ್ರಾಮಸ್ಥರು 
ಕೃಷಿ ಭೂಮಿ ಸೇರುತ್ತಿರುವ ಉಪ್ಪುನೀರನ್ನು ಮತ್ತೆ ಸಮುದ್ರಕ್ಕೆ ಹೋಗುವಂತೆ ಮಾಡಲು ಸ್ಥಳೀಯ ಯುವಕರ ತಂಡ ಮಂಗಳವಾರ ದೊಡ್ಡ ಮರಳಿನ ದಿಬ್ಬವನ್ನು ಅಗೆದಿದ್ದು, ನೀರು ಹೋಗಲು ಶ್ರಮಿಸಿದೆ. 

19 ಲಕ್ಷ ರೂ. ವೆಚ್ಚದ 
ಕಿಂಡಿ ಅಣೆಕಟ್ಟು ನಿಷ್ಪ್ರಯೋಜಕ 

2010ರಲ್ಲಿ ತೆಕ್ಕಟ್ಟೆ -ಕೊಮೆ ಹಾಗೂ ಮಣೂರು ಭಾಗದ ಕಡಲ ತೀರದಲ್ಲಿ  19 ಲಕ್ಷ ರೂ. ವೆಚ್ಚದಲ್ಲಿ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಆದರೆ  ಇದರ ಹಲಗೆ ಮತ್ತು ಹಲಗೆ ಸಂಗ್ರಹಿಸುವ ಕೊಠಡಿ ಹಾಳಾಗಿದೆ. ಇಲ್ಲಿ ಗಿಡಗಂಟಿ ಆವರಿಸಿ ಗೆದ್ದಲು ಹಿಡಿಯುತ್ತಿದೆ. ಇದರಿಂದ ಸ್ಥಳೀಯ ರೈತರ ಸಮಸ್ಯೆ ಪರಿಹಾರವಾಗದೇ ಉಳಿದಿದೆ. 

ಕೃಷಿ ಸಂಪೂರ್ಣ ನಾಶ
ಕಿಂಡಿ ಅಣೆಕಟ್ಟಿಗೆ  ಹಲಗೆ ಅಳವಡಿಸದ ಹಿನ್ನೆಲೆಯಲ್ಲಿ  ಕಳೆದೆರಡು ದಿನಗಳಿಂದ ಸಮುದ್ರದಲ್ಲಿ ಹೆಚ್ಚಿ ದ ಅಲೆಗಳ ಅಬ್ಬರದಿಂದಾಗಿ ಅಪಾರ ಪ್ರಮಾಣದಲ್ಲಿ  ಉಪ್ಪು ನೀರು ತೀರವನ್ನು  ಆವರಿಸುವ ಪರಿಣಾಮ ಕೃಷಿ ಸಂಪೂರ್ಣ ಕೊಳೆತು ಹೋಗುತ್ತಿದೆ.  
– ಯಡಾಡಿ ಬಸವ ಪೂಜಾರಿ, 
ಹಿರಿಯ ಕೃಷಿಕರು

  
ಶಾಸಕರ ಗಮನಕ್ಕೆ 
ಈ ಬಾರಿ ಅಲೆಗಳ ಅಬ್ಬರ ಹೆಚ್ಚಾಗಿ  ಉಪ್ಪು ನೀರು ನುಗ್ಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್‌ನಲ್ಲಿ  ಕಿಂಡಿ ಅಣೆಕಟ್ಟಿಗೆ ಹಲಗೆಯನ್ನು ಜೋಡಿಸಲಾಗುತ್ತಿದೆ. ಮಳೆಗಾಲ ಆರಂಭಕ್ಕೂ ಮುನ್ನ ಹಲಗೆ  ತೆರವುಗೊಳಿಸುತ್ತೇವೆ. ಆದರೆ ಸ್ಥಳೀಯರ ಅಭಿಪ್ರಾಯದಂತೆ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟಿನ ಅಗಲ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ 2 ಕಿಂಡಿಗಳನ್ನು ಶಾಶ್ವತವಾಗಿ ಮುಚ್ಚಬೇಕು ಎನ್ನುವ ಆಗ್ರಹದ ಬಗ್ಗೆ  ಶಾಸಕರ ಗಮನಕ್ಕೆ ತಂದಿದ್ದೇನೆ. 
– ಶೇಖರ್‌ ಕಾಂಚನ್‌, 
ಕೊಮೆ ಅಧ್ಯಕ್ಷರು, ಗ್ರಾ.ಪಂ. ತೆಕ್ಕಟ್ಟೆ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.