ಡಿಸಿ ಜತೆ ಮಾತುಕತೆ ಸಫ‌ಲ: ಬಿಜೆಪಿ ಧರಣಿ ಅಂತ್ಯ


Team Udayavani, Aug 31, 2017, 7:50 AM IST

300817Astro07.jpg

ಉಡುಪಿ: ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆಯನ್ನು ಶೀಘ್ರ ಆರಂಭಿಸಬೇಕು ಹಾಗೂ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಎಲ್ಲರಿಗೂ ಅನುಮತಿ ನೀಡಬೇಕೆಂದು ಆಗ್ರಹಿಸಿ ಬುಧವಾರ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿಯು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರ ಜತೆಗೆ ಮಾತುಕತೆ ನಡೆಸಿದ ಬಳಿಕ ಧರಣಿಯನ್ನು ಹಿಂದೆಗೆದುಕೊಳ್ಳಲಾಯಿತು. ಇದಕ್ಕೂ ಮುನ್ನ ಧರಣಿಗಾಗಿ ಉಡುಪಿ ಕ್ಲಾಕ್‌ ಟವರ್‌ ಬಳಿ ಅಳವಡಿಸಿದ್ದ ಪೆಂಡಾಲ್‌ ತೆರವುಗೊಳಿಸಿದ್ದ ಕಾರಣ ಬಿಜೆಪಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರೇ ಪ್ರತಿಭಟನೆ ನಡೆಸಿತು. 

ಉಡುಪಿ ಸರ್ವಿಸ್‌ ಬಸ್‌ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿದ ಬಿಜೆಪಿ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮರಳು ಗಾರಿಕೆ ಆರಂಭಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿದರು. ಆಗ ಬಿಜೆಪಿ ನಿಯೋಗದ ಜತೆ ಡಿಸಿ ಹಾಗೂ ಎಸ್‌ಪಿ ಡಾ| ಸಂಜೀವ್‌ ಎಂ. ಪಾಟೀಲ್‌ ಮಾತುಕತೆ ನಡೆಸಿದರು. ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಎಲ್ಲರಿಗೂ ಅನುಮತಿ ಕೊಡುವ ಸಂಬಂಧ ಸೆ. 2ರ ಸಭೆಯಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಡಿಸಿ ತಿಳಿಸಿದರು.

ಹೋರಾಟದ ಎಚ್ಚರಿಕೆ
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಬಿಜೆಪಿಯ ಬೃಹತ್‌ ಹೋರಾಟದ ಫ‌ಲವಾಗಿ ಜಿಲ್ಲೆಯ 2 ವರ್ಷಗಳ ಮರಳು ಸಮಸ್ಯೆಗೆ ಮುಕ್ತಿ ಸಿಗುತ್ತಿದೆ. ಡಿಸಿ ಹಾಗೂ ಎಸ್‌ಪಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸೆ. 2ರಂದು ಬೇಡಿಕೆ ಈಡೇರಿಸದಿದ್ದರೆ ಇದಕ್ಕಿಂತಲೂ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು. ಬಿಜೆಪಿ ಪಕ್ಷದ ಧ್ವಜವಿರುವ ಪೆಂಡಾಲ್‌ ತೆರವುಗೊಳಿಸಿದ ನಗರಸಭೆಯ ಪೌರಾಯುಕ್ತರ ವಿರುದ್ಧ ಬೃಹತ್‌ ಹೋರಾಟ ನಡೆಸಲಾಗುವುದು ಎಂದು ಹೇಳಿದರು. 

ಸಾರ್ವಜನಿಕ ಕ್ಷಮೆಗೆ ಆಗ್ರಹ
ಈ ಹೋರಾಟ ಇಂದಿಗೆ ಮಾತ್ರ ಹಿಂದೆಗೆದುಕೊಳ್ಳುತ್ತಿ ರುವುದು. ಮತ್ತೆ ಮರಳು ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಬೃಹತ್‌ ಹೋರಾಟ ಮಾಡಲಾಗುವುದು. ನಗರಸಭೆ ಹಾಗೂ ಜಿಲ್ಲಾಡಳಿತದ ಬಳಿ ಅಹೋರಾತ್ರಿ ಧರಣಿ ನಡೆಸಲು ಅನುಮತಿ ಕೇಳಿದ್ದರೂ ನಗರಸಭೆ ಸಂಜೆ 6 ಗಂಟೆವರೆಗೆ ಮಾತ್ರ ಅವಕಾಶ ನೀಡಿತ್ತು.  ಸಚಿವರ ಮಾತು ಕೇಳಿ ಪೌರಾಯುಕ್ತರು ಪೆಂಡಾಲ್‌ ತೆರವುಗೊಳಿಸಿದ್ದಾರೆ. ಬುಧವಾರ ನಡೆಯುವ ನಗರಸಭೆ ಅಧಿವೇಶನದಲ್ಲಿ ಸಾರ್ವಜನಿಕ ಕ್ಷಮೆ ಕೇಳಬೇಕು, ಇಲ್ಲದಿದ್ದಲ್ಲಿ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಶಾಸಕ ರಘುಪತಿ ಭಟ್‌ ಎಚ್ಚರಿಸಿದರು. 

ಭಜನೆ, ಡ್ಯಾನ್ಸ್‌, ಬ್ಯಾಂಡ್‌ 
ಡಿಸಿ ಕಚೇರಿ ಎದುರು ಭಾರೀ ಸಂಖ್ಯೆಯಲ್ಲಿ ಬಿಜೆಪಿಗರು ಸೇರಿ ನಾಸಿಕ್‌ ಬ್ಯಾಂಡ್‌ ಸದ್ದಿಗೆ ಕುಣಿದರು. ಮಹಿಳಾ ನಾಯಕಿಯರಿಂದ ಭಜನೆ, ದೇಶಭಕ್ತಿ ಗೀತೆ ಹಾಡಲಾಯಿತು. “ಅಂಬಿಗಾ ನಾ ನಿನ್ನ ನಂಬಿದೆ| ಜಗದಂಬಾರಮಣ ನಾ ನಂಬಿದೆ…| ಹಾಡೂ ಕೇಳಿಬಂತು. ಮುಂಜಾಗ್ರತಾ ಕ್ರಮವಾಗಿ ಭಾರೀ ಭದ್ರತೆ ಮಾಡಲಾಗಿತ್ತು. ಪೆಂಡಾಲ್‌ ತೆರವುಗೊಳಿಸಿದ ಪೌರಾಯುಕ್ತರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಉಡುಪಿಯಿಂದ ಜಿಲ್ಲಾಧಿಕಾರಿವರೆಗೆ ಸುಮಾರು 6.5 ಕಿ.ಮೀ. ಪಾದಯಾತ್ರೆಯಲ್ಲಿ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ನಾಯಕರಾದ ಮಟ್ಟಾರ್‌ ರತ್ನಾಕರ ಹೆಗ್ಡೆ, ರಘುಪತಿ ಭಟ್‌, ಯಶಪಾಲ್‌ ಸುವರ್ಣ,  ಕುಯಿಲಾಡಿ ಸುರೇಶ್‌ ನಾಯಕ್‌, ವೀಣಾ ಕೆ. ಶೆಟ್ಟಿ, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಗೀತಾಂಜಲಿ ಸುವರ್ಣ, ರವಿ ಅಮೀನ್‌, ಗೀತಾ ಶೇಟ್‌, ಕುತ್ಯಾರು ನವೀನ್‌ ಶೆಟ್ಟಿ, ಪ್ರಭಾಕರ ಪೂಜಾರಿ, ಗಿರೀಶ್‌ ಅಂಚನ್‌ ಮತ್ತಿತರರು, ಹೊಯಿಗೆ ಹೋರಾಟಗಾರರ ಸಮಿತಿ ಪ್ರಮುಖರು ನಡೆದರು. ಮಾಜಿ ಶಾಸಕ ಲಾಲಾಜಿ ಮೆಂಡನ್‌, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ನಾಯಕರಾದ ಉದಯ್‌ ಕುಮಾರ್‌ ಶೆಟ್ಟಿ, ಸೋಮಶೇಖರ್‌ ಭಟ್‌, ಬೈಕಾಡಿ ಸುಪ್ರಸಾದ್‌ ಶೆಟ್ಟಿ,  ಶ್ಯಾಮಲಾ ಕುಂದರ್‌ ಪಾಲ್ಗೊಂಡಿದ್ದರು. 

ನಗರಸಭೆಯಿಂದ ಪೆಂಡಾಲ್‌ ತೆರವು
ಬಿಜೆಪಿ ಆಯೋಜಿಸಿದ್ದ ಅಹೋರಾತ್ರಿ ಸಲುವಾಗಿ ಕ್ಲಾಕ್‌ ಟವರ್‌ ಮುಂಭಾಗ ಅಳವಡಿಸಿದ್ದ ಪೆಂಡಾಲ್‌ನ್ನು ನಗರಸಭೆ ವತಿಯಿಂದ ಸಂಜೆ ತೆರವುಗೊಳಿಸಿದರು. ನಗರಸಭೆಯ ಜೆಸಿಬಿ ಹಾಗೂ ಪಿಕಪ್‌ ವಾಹನದಲ್ಲಿ ಪೆಂಡಾಲ್‌ ಸಾಮಗ್ರಿಗಳನ್ನು ಕೊಂಡೊಯ್ಯಲಾಯಿತು. ಈ ವೇಳೆ ಕ್ಲಾಕ್‌ ಟವರ್‌ ಸುತ್ತ ಭಾರೀ ಭದ್ರತೆ ಮಾಡಲಾಗಿತ್ತು. ಇಲ್ಲಿ ಜನಸಂದಣಿ ಹೆಚ್ಚಿದ್ದು, ಸಂಜೆ ವೇಳೆ ವಾಹನ ದಟ್ಟಣೆಯು ಅಧಿಕವಾಗಿರುವುದರಿಂದ ರಾತ್ರಿ ವೇಳೆ ಪೆಂಡಾಲ್‌ ಹಾಕಲು ಅನುಮತಿ ನೀಡಿಲ್ಲ. ಜತೆಗೆ ಡಿಸಿ ಹಾಗೂ ಎಸ್‌ಪಿ ಸಹ ಸೂಚನೆ ನೀಡಿದ್ದು, ಆ ಬಳಿಕ ತೆರವುಗೊಳಿಸಲಾಗಿದೆ ಎಂದು ಸ್ಥಳದಲ್ಲಿದ್ದ ನಗರಸಭೆ ಅಧಿಕಾರಿಗಳು ತಿಳಿಸಿದರು.  

ಸೆ. 2ರ ಸಭೆ ಬಳಿಕ ನಿರ್ಧಾರ
ಜಿಲ್ಲೆಯಲ್ಲಿ ಹಿಂದೆ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ 168 ಮಂದಿ ಪೈಕಿ ಈಗಾಗಲೇ 134 ಮಂದಿಗೆ ಅನುಮತಿ ನೀಡಲಾಗಿದೆ. 4 ಮಂದಿ ವಿರುದ್ಧ ಅಕ್ರಮ ಮರಳುಗಾರಿಕೆ ಪ್ರಕರಣದಡಿ ಅನುಮತಿ ನಿರಾಕರಿಸಲಾಗಿದೆ. ಇನ್ನುಳಿದ 30 ಮಂದಿಗೆ ಕೊಡಬೇಕಾ? ಅಥವಾ ಬೇಡವಾ? ಅನ್ನುವುದು ಸೆ. 2 ರಂದು 7 ಮಂದಿಯ ಮರಳು ಸಮಿತಿ ಸಭೆಯಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌,
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.