“ಅಧಿಕಾರಿಗಳಿಂದ ಮತ್ತೆ ಮರಳು ಸಮಸ್ಯೆ’
Team Udayavani, Jul 1, 2018, 6:00 AM IST
ಉಡುಪಿ: ಮರಳು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಪ್ರಯತ್ನಿಸದೆ ಉಲ್ಬಣಕ್ಕೆ ಕಾರಣವಾಗುತ್ತಿದ್ದಾರೆಂದು ಶಾಸಕರಾದ
ಕೆ. ರಘುಪತಿ ಭಟ್ ಮತ್ತು ಪ್ರತಾಪಚಂದ್ರ ಶೆಟ್ಟಿ ಶನಿವಾರ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಆ. 7ಕ್ಕೆ ಈ ವರ್ಷದ ಸಿಆರ್ಝೆಡ್ ಮರಳುಗಾರಿಕೆ ಅನುಮತಿ (ಲೀಸ್) ಅವಧಿ ಮುಕ್ತಾಯವಾಗುತ್ತದೆ. ಅನಂತರ ಮತ್ತೆ ಅನುಮತಿ ನೀಡಬೇಕು. ಅನುಮತಿ ನೀಡಬೇಕಾದರೆ ಮೊದಲೇ ಮರಳುದಿಬ್ಬಗಳನ್ನು ಗುರುತಿಸಬೇಕು. ಈ ಕೆಲಸವನ್ನು ಮಾಡಿಲ್ಲ. ಹಾಗಾಗಿ ಮತ್ತೆ ಮುಂದಿನ ಹಲವು ತಿಂಗಳುಗಳ ಕಾಲ ಮರಳಿನ ಸಮಸ್ಯೆ ಉಲ್ಬಣವಾಗುವ ಆತಂಕ ಇದೆ ಎಂದರು. ಫೆಬ್ರವರಿ-ಮಾರ್ಚ್ನಲ್ಲಿಯೇ ಹೊಸ ಮರಳು ದಿಬ್ಬಗಳನ್ನು ಗುರುತಿಸುವ ಕೆಲಸ ಮಾಡಬೇಕಿತ್ತು ಎಂದು ಜಿ.ಪಂ. ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ ಹೇಳಿದರು.
ಲೇಡಿಗೋಷನ್ನಂತೆ ಉಡುಪಿ ಆಸ್ಪತ್ರೆ: ಈಗ ಖಾಸಗಿಯವರಿಂದ ನಿರ್ಮಿಸಲ್ಪಟ್ಟ ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತವಾಗಿ ಚಿಕಿತ್ಸೆ ದೊರೆಯಬೇಕಾದರೆ ಅದರ ಮೇಲೆ ಸರಕಾರದ ನಿಯಂತ್ರಣ ಅತ್ಯಗತ್ಯ. ಈಗ ಇರುವ ಹೆಂಗಸರ ಮತ್ತು ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿರುವ ವೈದ್ಯರು, ದಾದಿಯರು, ಸಿಬಂದಿಯನ್ನು ಹೊಸದಾಗಿ ನಿರ್ಮಾಣವಾದ 200 ಬೆಡ್ಗಳ ಆಸ್ಪತ್ರೆಗೆ ನಿಯೋಜಿಸಬೇಕು. ಅಲ್ಲಿ ಸರಕಾರಿ ಮತ್ತು ಖಾಸಗಿ ವೈದ್ಯರು, ಸಿಬಂದಿ, ತಜ್ಞರಿರಬೇಕು. ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿರುವಂತೆ ಪ್ರತ್ಯೇಕ ಯುನಿಟ್ಗಳಿರಬೇಕು. ಈಗ ಒಡಂಬಡಿಕೆ ಆಗಿದೆ. ಕೆಲವು ಷರತ್ತುಗಳನ್ನು ವಿಧಿಸಿಯೇ ಅಂತಿಮ ಒಪ್ಪಿಗೆ ನೀಡಬೇಕು. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಎಂದು ಭಟ್ ಹೇಳಿದರು.
ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ, ಉದಯ ಕೋಟ್ಯಾನ್, ಶಶಿಕಾಂತ್ ಪಡುಬಿದ್ರಿ, ಸಿಇಒ ಶಿವಾನಂದ ಕಾಪಶಿ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್, ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ