ಮರಳು ಸಮಸ್ಯೆಗೆ ನಲುಗಿದ ಬೋಳ ಕಿಂಡಿ ಅಣೆಕಟ್ಟು ಕಾಮಗಾರಿ
Team Udayavani, Jun 2, 2019, 12:05 PM IST
ಬೆಳ್ಮಣ್: ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಾಲಿಂಗೇರಿ ಎಂಬಲ್ಲಿ ಶಾಂಭವಿ ನದಿಗೆ ಅಡ್ಡಲಾಗಿ ಕಟ್ಟುತ್ತಿರುವ ಕಿಂಡಿ ಅಣೆಕಟ್ಟು ಕಾಮಗಾರಿ ಈಗ ಮರಳು ಸಮಸ್ಯೆ ಮತ್ತು ನಿರೀಕ್ಷಿತ ಪ್ರಮಾಣದಲ್ಲಿ ಸಿಗದ ಕ್ರಶರ್ ಹುಡಿಯಿಂದಾಗಿ ನಿಧಾನವಾಗಿ ನಡೆಯುತ್ತಿದೆ.
2.5 ಕೋಟಿ ರೂ. ಖರ್ಚಿನಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದ್ದು, ಸ್ಥಳೀಯ ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುವ ಯೋಜನೆ ಇದಾಗಿದೆ. ಹೆಚ್ಚು ನೀರು ಸಂಗ್ರಹಿಸುವ ಉದ್ದೇಶದಿಂದ ಈ ಮೊದಲಿದ್ದ ಸಣ್ಣ ಕಿಂಡಿ ಅಣೆಕಟ್ಟು ಬದಲು ಹೊಸದಾಗಿ ವಿದ್ಯುತ್ ಚಾಲಿತ ಗೇಟ್ಗಳುಳ್ಳ ಅಣೆಕಟ್ಟನ್ನು ನಿರ್ಮಿಸಲಾಗುತ್ತಿದೆ.
ಪಶ್ಚಿಮ ವಾಹಿನಿ ಯೋಜನೆ
ರಾಜ್ಯ ಸರಕಾರ 2017-18ರ ಬಜೆಟ್ನಲ್ಲಿ ಕರಾವಳಿಯ ಪಶ್ಚಿಮಾಭಿಮುಖವಾಗಿ ಹರಿಯುತ್ತಿರುವ ನದಿಗಳ ಹರಿವನ್ನು ಸಂರಕ್ಷಿಸಲು ಪಶ್ಚಿಮ ವಾಹಿನಿ ಯೋಜನೆ ಘೋಷಣೆ ಮಾಡಿತ್ತು. ಇದರಲ್ಲಿ ಕಾರ್ಕಳ ತಾಲೂಕಿಗೆ ಮೂರು ಅಣೆಕಟ್ಟು ಯೋಜನೆಗಳು ಮಂಜೂರಾಗಿತ್ತು. ಇವುಗಳಲ್ಲಿ ಬೋಳ ಅಣೆಕಟ್ಟೂ ಒಂದು.
ಮರಳು ಸಮಸ್ಯೆಯಿಂದ ಗ್ರಹಣ
ಮಾರ್ಚ್ ತಿಂಗಳಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿ ಆರಂಭವಾಗಿದ್ದು ಸುಮಾರು ಒಂದು ತಿಂಗಳ ಕಾಲ ನದಿಯಲ್ಲಿದ್ದ ಕಲ್ಲು ಒಡೆಯುವ ಕಾಮಗಾರಿ ನಡೆದಿತ್ತು. ಮಳೆಗಾಲಕ್ಕೂ ಮೊದಲು ಸಂಪೂರ್ಣ ಕಾಮಗಾರಿ ಮುಗಿಸಿ ಜನಸಂಚಾರಕ್ಕೆ ಅನುವು ಮಾಡಿಕೊಡುವ ಗುತ್ತಿಗೆದಾರರ ಯೋಜನೆೆ ಸರಕಾರದ ಮರಳು ನೀತಿಯಿಂದಾಗಿ ಕುಂಟುತ್ತಾ ಸಾಗುವಂತಾಗಿದೆ.
ಸ್ಥಳೀಯ ಶಾಂಭವಿ ನದಿಯಿಂದಲೇ ಮರಳು ತೆಗೆಯಲೂ ಸರಕಾರದ ನೀತಿ ಅಡ್ಡಗಾಲಾಗಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಮರಳಿಗೆ ಪರ್ಯಾಯವಾಗಿ ಬಳಸುವ ಕ್ರಶರ್ ಹುಡಿ (ಎಂ-ಸ್ಯಾಂಡ್) ಪೂರೈಕೆ ಕೂಡ ಸರಿಯಾಗಿ ಆಗುತ್ತಿಲ್ಲ. ಎಂ ಸ್ಯಾಂಡ್ನಿಂದ ಮಾಡಿದ ಕಾಮಗಾರಿಯ ಗುಣಮಟ್ಟದ ಬಗ್ಗೆಯೂ ಜನರು ಅಸಮಾಧಾನ ಹೊಂದಿದ್ದಾರೆ.
ಮಳೆಗಾಲದಲ್ಲಿ ಸಮಸ್ಯೆ
ಈ ಹಿಂದೆ ಇಲ್ಲಿ ಇದ್ದ ಸಣ್ಣ ಸೇತುವೆ ಕಲ್ಲು ಬ್ಲಾಸ್ಟಿಂಗ್ ವೇಳೆ ಮುರಿದು ಹೋಗಿದೆ. ಮಳೆಗಾಲಕ್ಕಿಂತ ಮೊದಲು ಸೇತುವೆ ನಿರ್ಮಾಣವಾಗುತ್ತದೆ ಎಂದು ಭಾವಿಸಿದ್ದ ಸ್ಥಳೀಯರು ಚಿಂತಾಕ್ರಾಂತರಾಗಿದ್ದಾರೆ. ನದಿಯ ಮತ್ತೂಂದು ಕಡೆ ವಾಸಿಸುವ 50ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಸುಮಾರು 200 ಮೀಟರ್ ದೂರಕ್ಕೆ ಹೋಗಲು 4 ಕಿ.ಮೀ. ದೂರ ನಡೆಯಬೇಕಾದ ಅನಿವಾರ್ಯ ಇದೆ. ಬೋಳ ದೇವಸ್ಥಾನದ ಬಳಿ ಇರುವ ಸೇತುವೆ ಜೀರ್ಣಾವಸ್ಥೆಯಲ್ಲಿದ್ದು ಮಳೆಯರು, ಮಕ್ಕಳು ನಡೆದಾಡಲು ಭಯಪಡುತ್ತಾರೆ.
ಮರಳು ವ್ಯವಸ್ಥೆ ಮಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ