ಮರಳು: ಮತದಾನ ಬಹಿಷ್ಕರಿಸದಂತೆ ಮನವಿ
Team Udayavani, Apr 13, 2019, 6:00 AM IST
ಉಡುಪಿ: ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಬುಧವಾರ ನಡೆದ ಮರಳು ಹೋರಾಟ ಸಮಿತಿ ಸಭೆಯಲ್ಲಿ ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕಾರ ಮಾಡದಂತೆ ಮನವರಿಕೆ ಮಾಡಿ ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಲಾಯಿತು.
ಮರಳು ಸಮಸ್ಯೆಯಿಂದ ಬಳಲುತ್ತಿದ್ದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ, ಚುನಾವಣೆ ಮುಗಿದ ತತ್ಕ್ಷಣ ಮರಳುಗಾರಿಕೆಗೆ ಅವಕಾಶ ನೀಡುವುದಾಗಿ ಸ್ವತಃ ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದಿಂದ ಇದಕ್ಕೆ ಬೇಕಾದ ಅನುಮತಿ ಪಡೆಯಲಾಗಿದೆ. 7.80 ಲಕ್ಷ ಮೆಟ್ರಿಕ್ ಟನ್ ಮರಳು ವಿತರಣೆ ಮಾಡುವಂತದ್ದು ಬಾಕಿ ಇದೆ. ಸದ್ಯ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವಾಗಿದೆ. ಆದರೆ ಎ. 19ರಂದು ಇದಕ್ಕೆ ಸಂಬಂಧಿಸಿದಂತೆ ಮರಳುಗಾರಿಕೆಗೆ ಅವಕಾಶ ನೀಡದೆ ಇದ್ದಲ್ಲಿ ಮತ್ತೂಮ್ಮೆ ಪ್ರತಿಭಟನೆ ಮಾಡುವುದಾಗಿ ರಘುಪತಿ ಭಟ್ ಮತ್ತು ಶೋಭಾ ಕರಂದ್ಲಾಜೆ ಅವರ ಸಮ್ಮುಖದಲ್ಲಿ ನಿರ್ಧರಿಸಲಾಯಿತು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹಾಗೂ ಮರಳು ಹೋರಾಟ ಸಮಿತಿಯ ಪದಾಧಿಕಾರಿಗಳಾದ ಲೋಕೇಶ್ ಮೆಂಡನ್, ಶ್ಯಾಮ್ ಕುಂದರ್, ಭಾಸ್ಕರ ಶೆಟ್ಟಿ, ಪ್ರವೀಣ್ ಸುವರ್ಣ, ಸತ್ಯರಾಜ್ ಬಿರ್ತಿ, ಚಂದ್ರ ಪೂಜಾರಿ, ರಾಘವೇಂದ್ರ ಶೆಟ್ಟಿ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ