ಇನ್ಸುಲೇಟರ್ನಲ್ಲಿ ಮರಳು ಸಾಗಾಟ: 7 ಮಂದಿ ಸೆರೆ
Team Udayavani, Mar 26, 2019, 6:30 AM IST
ಕುಂದಾಪುರ: ಮೀನು ಸಾಗಾಟದ ಇನ್ಸುಲೇಟರ್ ವಾಹನದಲ್ಲಿ ಮರಳು ಸಾಗಿಸುತ್ತಿದ್ದ ತಂಡವನ್ನು ಸೋಮವಾರ ಬೆಳಗ್ಗೆ ಕೋಟೇಶ್ವರ ಸಮೀಪದ ಬೀಜಾಡಿಯಲ್ಲಿ ಪತ್ತೆ ಹಚ್ಚಿದ ಪೊಲೀಸರು, 7 ಮಂದಿಯನ್ನು ಬಂಧಿಸಿ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಾಲಕ ಮಂಜೇಶ್ವರ ಪಾವೂರಿನ ಅಬ್ದುಲ್ ಸತ್ತಾರ್ (23), ನೌಶಾದ್ ಅಲಿ (21), ಬ್ರಹ್ಮಾವರ ವಾರಂಬಳ್ಳಿ ನಿವಾಸಿಗಳಾದ ಕೊಪ್ಪಳ ಮೂಲದ ಮಂಜುನಾಥ್ ದಮ್ಮೂರ್ (19), ಶ್ರೀಕಾಂತ್ (28), ಶರಣಪ್ಪ (19), ಬಿಜೈಯ ರಾಜೇಶ್ ಶೆಟ್ಟಿ (40), ಸುರತ್ಕಲ್ ಕುಳಾಯಿ ನಿವಾಸಿ ಸುಕೇಶ್ ಕೋಟ್ಯಾನ್ (34) ಬಂಧಿತರು.
ಎಸ್ಐ ಹರೀಶ್ ಆರ್. ನೇತೃತ್ವದ ಪೊಲೀಸರ ತಂಡ ಬೀಜಾಡಿಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಇನ್ನೋವಾ ಕಾರು ಹಾಗೂ ಇನ್ಸುಲೇಟರ್ ವಾಹನವನ್ನು ನಿಲ್ಲಿಸಲು ಸೂಚಿಸಿದರು. ಆಗ ವಾಹನದಲ್ಲಿದ್ದವರು ಸ್ವಲ್ಪ ದೂರ ಸಂಚರಿಸಿ, ವಾಹನ ನಿಲ್ಲಿಸಿ ಪರಾರಿಯಾಗಲು ಯತ್ನಿಸಿದ್ದರು. ಕೂಡಲೇ ಅವರನ್ನು ಸುತ್ತುವರಿದ ಪೊಲೀಸರು ವಿಚಾರಿಸಿ ದಾಗ, ಬೆಂಗಾವಲು ವಾಹನ ಇಟ್ಟುಕೊಂಡು ಮರಳು ತುಂಬಿಸಿ ಬಿ.ಸಿ. ರೋಡ್ನಿಂದ ಬೀಜಾಡಿಗೆ ಸಾಗಿಸುತ್ತಿರುವುದಾಗಿ ತಿಳಿಸಿದ್ದಾರೆ.
ಇನ್ಸುಲೇಟರ್ ವಾಹನ ಹಾಗೂ ಇನ್ನೋವಾ ಕಾರನ್ನು ವಶಪಡಿಸಿ ಕೊಳ್ಳಲಾಗಿದೆ. ಮಂಗಳೂರಿನಿಂದ ದುಪ್ಪಟ್ಟು ಹಣಕ್ಕೆ ಮರಳನ್ನು ಸಾಗಿಸಲಾಗುತ್ತಿದ್ದು, ಹಲವು ತಿಂಗಳಿಂದ ಈ ಜಾಲ ಸಕ್ರಿಯವಾಗಿ ಕಾರ್ಯಾಚರಿಸುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ