![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್ ವಶ
Team Udayavani, Dec 10, 2023, 12:38 AM IST
![Sand Transport: ಮರಳು ಸಹಿತ ಟಿಪ್ಪರ್ ವಶ](https://www.udayavani.com/wp-content/uploads/2023/12/Sand-Transport-620x321.jpg)
ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಟಿಪ್ಪರ್ ವಾಹನದಲ್ಲಿ ಹಿರಿಯಡಕ ಜಂಕ್ಷನ್ನಿಂದ ಮಣಿಪಾಲ ಕಡೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವರನ್ನು ತಡೆದು ನಿಲ್ಲಿಸಿದಾಗ ಚಾಲಕ ಪರಾರಿಯಾದ ಘಟನೆ ನಡೆದಿದೆ.
ಟಿಪ್ಪರ್ ವಾಹನವನ್ನು ಪರಿಶೀಲಿಸಿದಾಗ ಸುಮಾರು 12 ಸಾವಿರ ರೂ. ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಕಳ್ಳತನ ಮಾಡಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು ವಾಹನ ಸಹಿತ ವಶಪಡಿಸಿಕೊಂಡು ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಆತ್ರಾಡಿ: ಜುಗಾರಿ ಆಟ; ಬಂಧನ
ಹೆಬ್ರಿ: ಆತ್ರಾಡಿ ಸಂತೆ ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳ ದಲ್ಲಿ ಹಣವನ್ನು ಪಣವನ್ನಾಗಿಟ್ಟು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿರುವ ಸ್ಥಳಕ್ಕೆ ಹಿರಿಯಡಕ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಸಚಿನ್ ಮತ್ತು ರಾಘವೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.