ಮರಳು ಅಲಭ್ಯತೆಯಿಂದ ನಿರುದ್ಯೋಗಿಗಳಾಗಿದ್ದ ಕಾರ್ಮಿಕರಿಗೆ ಹೊಸ ಕೆಲಸ 


Team Udayavani, Nov 1, 2018, 11:54 AM IST

1-november-6.gif

ಕೋಟ: ಕಾರ್ಮಿಕರ ಕೊರತೆ, ಸುಲಭ ಕೆಲಸ ಎಂಬ ಕಾರಣಕ್ಕೆ ವ್ಯವಸಾಯದಲ್ಲಿ ಯಾಂತ್ರೀಕೃತ ವಿಧಾನ ಅನಿವಾರ್ಯವಾಗಿದೆ. ಈ ನಡುವೆ ಕೆಲವರು ಬೈಹುಲ್ಲಿನ ಆಸೆಗೆ ಸಾಂಪ್ರದಾಯಿಕ ವಿಧಾನವನ್ನೇ ನೆಚ್ಚಿಕೊಂಡಿದ್ದಾರೆ. ಆದರೆ ಇದಕ್ಕೆ ಸ್ಥಳೀಯ ಕಾರ್ಮಿಕರು ಲಭ್ಯವಾಗುತ್ತಿಲ್ಲ. ಹೀಗಾಗಿ ಹೊರ ಜಿಲ್ಲೆಯ ಕಾರ್ಮಿಕರನ್ನು ಅವಲಂಬಿಸಬೇಕಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮರಳು ಸಮಸ್ಯೆಯಿಂದಾಗಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿರುವ ಕೆಲಸಗಾರರಿಗೆ ಕೆಲಸವಿಲ್ಲವಾಗಿದ್ದು, ಇವರೀಗ ದೊಡ್ಡ ಸಂಖ್ಯೆಯಲ್ಲಿ ಭತ್ತ ಕಟಾವಿನಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾರ್ಮಿಕರ ಕೊರತೆ ಇಲ್ಲ
ಕೊಪ್ಪಳ, ರಾಯಚೂರು, ಬೀದರ್‌, ಹುಬ್ಬಳ್ಳಿ, ಬಿಜಾಪುರ ಮುಂತಾದ ಜಿಲ್ಲೆಗಳ ಕಾರ್ಮಿಕರು ಜಿಲ್ಲೆಯಲ್ಲಿ ಕಟಾವು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉಡುಪಿ, ಕುಂದಾಪುರ ಮುಂತಾದ ಪ್ರಮುಖ ಪ್ರದೇಶದಲ್ಲಿ ಜೋಪಡಿಗಳಲ್ಲಿ ವಾಸವಿದ್ದು ಅಲ್ಲಿಂದ ಜಿಲ್ಲೆಯ ಬೇರೆ-ಬೇರೆ ಕಡೆಗೆ ಕೆಲಸಕ್ಕೆ ತೆರಳುತ್ತಾರೆ. ಕಳೆದ ವರ್ಷ ಸೀಮಿತ ಕೆಲಸಗಾರರು ಕಟಾವಿಗೆ ಸಿಗುತ್ತಿದ್ದರು. ಆದರೆ ಈ ಬಾರಿ ದೊಡ್ಡ ಸಂಖ್ಯೆಯ ಕಾರ್ಮಿಕರ ಲಭ್ಯತೆ ಇದೆ.

ಶ್ರಮವಹಿಸಿ ದುಡಿಮೆ
ಈ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಮಾಡಿದರೆ ಬೆಳಗ್ಗೆ 7.30ರಿಂದ 8ಗಂಟೆಗೆ ಜಮೀನಿಗೆ ತೆರಳಿ ಕಟಾವಿನಲ್ಲಿ ತೊಡಗಿಸಿಕೊಳ್ಳುತ್ತಾರೆ ಹಾಗೂ ಸಂಜೆ 6ಗಂಟೆ ತನಕ ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. 500ರಿಂದ 600ರೂ ಸಂಬಳ ಪಡೆಯುತ್ತಾರೆ. ಜತೆಗೆ ಕರಾವಳಿಯ ಕಟಾವು ಪದ್ಧತಿಯನ್ನೂ ಇವರು ಮೈಗೂಡಿಸಿಕೊಂಡಿದ್ದಾರೆ.

ಊರಿನ ಕಾರ್ಮಿಕರು ಕಟಾವಿನಿಂದ ದೂರವಾದ್ದರಿಂದ ಸಾಂಪ್ರದಾಯಿಕ ವಿಧಾನ ಅನುಸರಿಸಬೇಕಾದರೆ ಒಂದೋ ಮನೆಯವರೇ ಕೆಲಸ ಮಾಡಬೇಕು. ಇಲ್ಲವಾದರೆ ಹೊರಜಿಲ್ಲೆಯ ಕಾರ್ಮಿಕರನ್ನು ಕರೆ ತಂದು ಕೆಲಸ ಮಾಡಿಸಬೇಕು ಎನ್ನುವ ಪರಿಸ್ಥಿತಿ ಇದೆ. ಹೀಗಾಗಿ ಸಾಂಪ್ರದಾಯಿಕ ಕಟಾವಿಗೆ ಈ ಕಾರ್ಮಿಕರೇ ಆಧಾರವಾಗಿದ್ದಾರೆ.

ಸಾಂಪ್ರದಾಯಿಕ ವಿಧಾನದಲ್ಲೇ 4ಎಕ್ರೆ ಕಟಾವು
ಈನಾನು 4ಎಕ್ರೆ ಭತ್ತ ಬೆಳೆಯುತ್ತೇನೆ. ಪ್ರತಿ ವರ್ಷ ಹೊರಜಿಲ್ಲೆಯ ಕಾರ್ಮಿಕರ ಮೂಲಕ ಸಾಂಪ್ರದಾಯಿಕ ವಿಧಾನದಿಂದಲೇ ಕಟಾವು ನಡೆಸುತ್ತೇನೆ. ಈ ವಿಧಾನದಿಂದ ಬೈಹುಲ್ಲು ಹಾಗೂ ಅಧಿಕ ಭತ್ತ ಸಿಗುತ್ತದೆ ಮತ್ತು ಹೆಚ್ಚು ಲಾಭವಾಗುತ್ತದೆ. ಈ ಬಾರಿ ಮರಳು ಸಮಸ್ಯೆ ಇರುವುದರಿಂದ ಕಾರ್ಮಿಕರ ಲಭ್ಯತೆ ಹೆಚ್ಚಿನ ಸಂಖ್ಯೆಯಲ್ಲಿದೆ. 
 – ರವೀಂದ್ರ ಐತಾಳ,
ಪ್ರಗತಿಪರ ಕೃಷಿಕರು ಪಡುಕರೆ

ಕೆಲಸ ಮಾಡುವುದು ಖುಷಿ ನೀಡುತ್ತದೆ
5 ವರ್ಷದಿಂದ ಕಟಾವಿಗಾಗಿ ಈ ಊರಿಗೆ ಬರುತ್ತಿದ್ದೇನೆ. ಇಲ್ಲಿನ ವಿಧಾನ ಮೊದಲು ಸ್ವಲ್ಪ ಕಷ್ಟವಾಗುತಿತ್ತು. ಆದರೆ ಇದೀಗ ಹೊಂದಿಕೊಂಡಿದ್ದೇವೆ. ವರ್ಷದಲ್ಲಿ ಒಂದು ಬಾರಿ ಇಲ್ಲಿಗೆ ಬಂದು ಕೆಲಸ ಮಾಡುವುದು ಖುಷಿ ಕೊಡುತ್ತದೆ. ಈ ಬಾರಿ ಮರಳು ಸಮಸ್ಯೆಯಿಂದ ನಮ್ಮವರು ಎಲ್ಲರೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಹನುಮಂತಪ್ಪ ಕೊಪ್ಪಳ,
ಸಹೊರಜಿಲ್ಲೆಯ ಕೃಷಿ ಕಾರ್ಮಿಕ

ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.