ಮರಳು ಅಲಭ್ಯತೆಯಿಂದ ನಿರುದ್ಯೋಗಿಗಳಾಗಿದ್ದ ಕಾರ್ಮಿಕರಿಗೆ ಹೊಸ ಕೆಲಸ 


Team Udayavani, Nov 1, 2018, 11:54 AM IST

1-november-6.gif

ಕೋಟ: ಕಾರ್ಮಿಕರ ಕೊರತೆ, ಸುಲಭ ಕೆಲಸ ಎಂಬ ಕಾರಣಕ್ಕೆ ವ್ಯವಸಾಯದಲ್ಲಿ ಯಾಂತ್ರೀಕೃತ ವಿಧಾನ ಅನಿವಾರ್ಯವಾಗಿದೆ. ಈ ನಡುವೆ ಕೆಲವರು ಬೈಹುಲ್ಲಿನ ಆಸೆಗೆ ಸಾಂಪ್ರದಾಯಿಕ ವಿಧಾನವನ್ನೇ ನೆಚ್ಚಿಕೊಂಡಿದ್ದಾರೆ. ಆದರೆ ಇದಕ್ಕೆ ಸ್ಥಳೀಯ ಕಾರ್ಮಿಕರು ಲಭ್ಯವಾಗುತ್ತಿಲ್ಲ. ಹೀಗಾಗಿ ಹೊರ ಜಿಲ್ಲೆಯ ಕಾರ್ಮಿಕರನ್ನು ಅವಲಂಬಿಸಬೇಕಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮರಳು ಸಮಸ್ಯೆಯಿಂದಾಗಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿರುವ ಕೆಲಸಗಾರರಿಗೆ ಕೆಲಸವಿಲ್ಲವಾಗಿದ್ದು, ಇವರೀಗ ದೊಡ್ಡ ಸಂಖ್ಯೆಯಲ್ಲಿ ಭತ್ತ ಕಟಾವಿನಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾರ್ಮಿಕರ ಕೊರತೆ ಇಲ್ಲ
ಕೊಪ್ಪಳ, ರಾಯಚೂರು, ಬೀದರ್‌, ಹುಬ್ಬಳ್ಳಿ, ಬಿಜಾಪುರ ಮುಂತಾದ ಜಿಲ್ಲೆಗಳ ಕಾರ್ಮಿಕರು ಜಿಲ್ಲೆಯಲ್ಲಿ ಕಟಾವು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉಡುಪಿ, ಕುಂದಾಪುರ ಮುಂತಾದ ಪ್ರಮುಖ ಪ್ರದೇಶದಲ್ಲಿ ಜೋಪಡಿಗಳಲ್ಲಿ ವಾಸವಿದ್ದು ಅಲ್ಲಿಂದ ಜಿಲ್ಲೆಯ ಬೇರೆ-ಬೇರೆ ಕಡೆಗೆ ಕೆಲಸಕ್ಕೆ ತೆರಳುತ್ತಾರೆ. ಕಳೆದ ವರ್ಷ ಸೀಮಿತ ಕೆಲಸಗಾರರು ಕಟಾವಿಗೆ ಸಿಗುತ್ತಿದ್ದರು. ಆದರೆ ಈ ಬಾರಿ ದೊಡ್ಡ ಸಂಖ್ಯೆಯ ಕಾರ್ಮಿಕರ ಲಭ್ಯತೆ ಇದೆ.

ಶ್ರಮವಹಿಸಿ ದುಡಿಮೆ
ಈ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಮಾಡಿದರೆ ಬೆಳಗ್ಗೆ 7.30ರಿಂದ 8ಗಂಟೆಗೆ ಜಮೀನಿಗೆ ತೆರಳಿ ಕಟಾವಿನಲ್ಲಿ ತೊಡಗಿಸಿಕೊಳ್ಳುತ್ತಾರೆ ಹಾಗೂ ಸಂಜೆ 6ಗಂಟೆ ತನಕ ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. 500ರಿಂದ 600ರೂ ಸಂಬಳ ಪಡೆಯುತ್ತಾರೆ. ಜತೆಗೆ ಕರಾವಳಿಯ ಕಟಾವು ಪದ್ಧತಿಯನ್ನೂ ಇವರು ಮೈಗೂಡಿಸಿಕೊಂಡಿದ್ದಾರೆ.

ಊರಿನ ಕಾರ್ಮಿಕರು ಕಟಾವಿನಿಂದ ದೂರವಾದ್ದರಿಂದ ಸಾಂಪ್ರದಾಯಿಕ ವಿಧಾನ ಅನುಸರಿಸಬೇಕಾದರೆ ಒಂದೋ ಮನೆಯವರೇ ಕೆಲಸ ಮಾಡಬೇಕು. ಇಲ್ಲವಾದರೆ ಹೊರಜಿಲ್ಲೆಯ ಕಾರ್ಮಿಕರನ್ನು ಕರೆ ತಂದು ಕೆಲಸ ಮಾಡಿಸಬೇಕು ಎನ್ನುವ ಪರಿಸ್ಥಿತಿ ಇದೆ. ಹೀಗಾಗಿ ಸಾಂಪ್ರದಾಯಿಕ ಕಟಾವಿಗೆ ಈ ಕಾರ್ಮಿಕರೇ ಆಧಾರವಾಗಿದ್ದಾರೆ.

ಸಾಂಪ್ರದಾಯಿಕ ವಿಧಾನದಲ್ಲೇ 4ಎಕ್ರೆ ಕಟಾವು
ಈನಾನು 4ಎಕ್ರೆ ಭತ್ತ ಬೆಳೆಯುತ್ತೇನೆ. ಪ್ರತಿ ವರ್ಷ ಹೊರಜಿಲ್ಲೆಯ ಕಾರ್ಮಿಕರ ಮೂಲಕ ಸಾಂಪ್ರದಾಯಿಕ ವಿಧಾನದಿಂದಲೇ ಕಟಾವು ನಡೆಸುತ್ತೇನೆ. ಈ ವಿಧಾನದಿಂದ ಬೈಹುಲ್ಲು ಹಾಗೂ ಅಧಿಕ ಭತ್ತ ಸಿಗುತ್ತದೆ ಮತ್ತು ಹೆಚ್ಚು ಲಾಭವಾಗುತ್ತದೆ. ಈ ಬಾರಿ ಮರಳು ಸಮಸ್ಯೆ ಇರುವುದರಿಂದ ಕಾರ್ಮಿಕರ ಲಭ್ಯತೆ ಹೆಚ್ಚಿನ ಸಂಖ್ಯೆಯಲ್ಲಿದೆ. 
 – ರವೀಂದ್ರ ಐತಾಳ,
ಪ್ರಗತಿಪರ ಕೃಷಿಕರು ಪಡುಕರೆ

ಕೆಲಸ ಮಾಡುವುದು ಖುಷಿ ನೀಡುತ್ತದೆ
5 ವರ್ಷದಿಂದ ಕಟಾವಿಗಾಗಿ ಈ ಊರಿಗೆ ಬರುತ್ತಿದ್ದೇನೆ. ಇಲ್ಲಿನ ವಿಧಾನ ಮೊದಲು ಸ್ವಲ್ಪ ಕಷ್ಟವಾಗುತಿತ್ತು. ಆದರೆ ಇದೀಗ ಹೊಂದಿಕೊಂಡಿದ್ದೇವೆ. ವರ್ಷದಲ್ಲಿ ಒಂದು ಬಾರಿ ಇಲ್ಲಿಗೆ ಬಂದು ಕೆಲಸ ಮಾಡುವುದು ಖುಷಿ ಕೊಡುತ್ತದೆ. ಈ ಬಾರಿ ಮರಳು ಸಮಸ್ಯೆಯಿಂದ ನಮ್ಮವರು ಎಲ್ಲರೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಹನುಮಂತಪ್ಪ ಕೊಪ್ಪಳ,
ಸಹೊರಜಿಲ್ಲೆಯ ಕೃಷಿ ಕಾರ್ಮಿಕ

ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.