ಸಂಗಮ್ ಜಂಕ್ಷನ್ : ಸುಗಮ ಸಂಚಾರಕ್ಕೆ ವ್ಯವಸ್ಥೆ
Team Udayavani, May 23, 2019, 6:20 AM IST
ಕುಂದಾಪುರ: ಬೈಂದೂರು – ಕುಂದಾಪುರ ರಾ.ಹೆದ್ದಾರಿ 66 ರ ಸಂಗಮ್ ಜಂಕ್ಷನ್ ಬಳಿಯ ವಾಹನ ಸಂಚಾರದಲ್ಲಿ ಉಂಟಾಗುತ್ತಿದ್ದ ಗೊಂದಲವನ್ನು ಮನಗಂಡು, ಸುಗಮ ವಾಹನ ಸಂಚಾರ ವ್ಯವಸ್ಥೆ ನೋಡಿಕೊಳ್ಳಲು ಬುಧವಾರ ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗಿದೆ.
ಇಲ್ಲಿ ವಾಹನ ಸವಾರರಿಗೆ, ಪಾದಚಾರಿಗಳಿಗೆ ರಸ್ತೆ ಕ್ರಾಸ್ ಮಾಡುವುದು ದೊಡ್ಡ ಸವಾಲಾಗಿದ್ದು, ಈ ಕುರಿತಂತೆ “ಉದಯವಾಣಿ’ಯು ನಿರಂತರವಾಗಿ ವರದಿ ಮೂಲಕ ಗಮನ ಸೆಳೆಯುತ್ತಿತ್ತು.
ಇದಕ್ಕೆ ಸ್ಪಂದಿಸಿದ ಪೊಲೀಸ್ ಇಲಾಖೆ ತಾತ್ಕಲಿಕವಾಗಿ ಇಲ್ಲಿ ಓರ್ವ ಪೊಲೀಸ್ ಸಿಬಂದಿಯನ್ನು ನಿಯೋಜಿಸುವ ಮೂಲಕ ಕ್ರಮಕೈಗೊಂಡಿದೆ.
ಕುಂದಾಪುರ ಡಿವೈಎಸ್ಪಿ ಬಿ.ಪಿ. ದಿನೇಶ್ ಕುಮಾರ್ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದು, ಕಳೆದೆರಡು ದಿನಗಳಿಂದ ಇಲ್ಲಿಗೆ ಭೇಟಿ ನೀಡಿ, ಅಲ್ಲಿನ ವಸ್ತು ಸ್ಥಿತಿಯನ್ನು ಪರಿಶೀಲಿಸಿದರು.
ಮಂಗಳವಾರ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಮಧುಕೇಶ್ವರ್ ಕೂಡ ಭೇಟಿ ನೀಡಿ, ಸೂಕ್ತ ಸಲಹೆ ನೀಡಿದ್ದರು.
ಈ ಬಗ್ಗೆ ಪುರಸಭೆ ಸದಸ್ಯ ಸಂತೋಷ್ ಕುಮಾರ್ ಶೆಟ್ಟಿ ಅವರು ಕೂಡ ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…