ಸಂಗಮ್ ಜಂಕ್ಷನ್: ಸಂಚಾರಿ ಪೊಲೀಸ್ ನಿಯೋಜನೆ
Team Udayavani, May 21, 2019, 6:10 AM IST
ಕುಂದಾಪುರ: ಬೈಂದೂರು – ಕುಂದಾಪುರ ರಾ.ಹೆದ್ದಾರಿ 66 ರ ಸಂಗಮ್ ಜಂಕ್ಷನ್ ಬಳಿಯ ವಾಹನ ಸಂಚಾರ ಗೊಂದಲ ನಿವಾರಣೆ ಪರಿಹರಿಸುವ ಸಲುವಾಗಿ 15 ದಿನಗಳ ಮಟ್ಟಿಗೆ ಸಂಚಾರಿ ಪೊಲೀಸರನ್ನು ನಿಯೋಜಿಸಲಾಗುವುದು ಕುಂದಾಪುರ ಡಿವೈಎಸ್ಪಿ ಬಿ.ಪಿ. ದಿನೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ಸಂಗಮ್ ಜಂಕ್ಷನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ಜತೆಗೂ ಚರ್ಚಿಸಿದ ಅವರು, ಇಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿದರೆ ವಾಹನ ದಟ್ಟಣೆ ಹೆಚ್ಚಿರುವುದರಿಂದ ನಿರಂತರ ಟ್ರಾಫಿಕ್ ಜಾಂ ಉಂಟಾಗುತ್ತದೆ. ಅದಕ್ಕಾಗಿ ಸದ್ಯದ ಮಟ್ಟಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಪೊಲೀಸ್ ಸಿಬಂದಿಯನ್ನು ಹಾಕಲಾಗಿದೆ. ಶೀಘ್ರ ಈ ಕಡೆಯ ಸೇತುವೆ ದುರಸ್ತಿ ಕಾರ್ಯವೂ ಮುಗಿಯಲಿದ್ದು, ಆ ಬಳಿಕ ಎರಡೂ ಬದಿಯೂ ಸಂಚಾರಕ್ಕೆ ಮುಕ್ತವಾಗಲಿದ್ದು, ಆಗ ಸ್ವಲ್ಪ ಮಟ್ಟಿಗಿನ ಗೊಂದಲ ನಿವಾರಣೆಯಾಗಲಿದೆ ಎಂದರು.
ಪತ್ರಿಕೆ ವರದಿ
ಸಂಗಮ್ ಜಂಕ್ಷನ್ನಲ್ಲಿನ ಸಂಚಾರಿ ಗೊಂದಲಗಳ ಕುರಿತಂತೆ “ಉದಯ ವಾಣಿ’ಯು ಮೇ 20 ರಂದು “ಸಂಗಮ್ ಜಂಕ್ಷನ್: ವಾಹನಗಳದ್ದೇ ಟೆನ್ಶನ್’ ಎನ್ನುವ ತಲೆಬರಹದಡಿ ವಿಸ್ತೃತವಾದ ವರದಿಯನ್ನು ಪ್ರಕಟಿಸಿ, ಗಮನಸೆಳೆದಿತ್ತು.
ಈ ಸಂದರ್ಭದಲ್ಲಿ ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಉಪಸ್ಥಿತರಿದ್ದರು.
ಸಿಗ್ನಲ್ ಲೈಟ್ ಅಳವಡಿಕೆ?
ಸಂಗಮ್ ಜಂಕ್ಷನ್, ತಲ್ಲೂರು ಪೇಟೆ, ಹೆಮ್ಮಾಡಿ ಜಂಕ್ಷನ್ಗಳಲ್ಲಿ ಅವೈಜ್ಞಾನಿಕ ರೀತಿಯ ಕಾಮಗಾರಿಯಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಈ ಬಗ್ಗೆ ಗುತ್ತಿಗೆ ವಹಿಸಿಕೊಂಡಿ ರುವ ಕಂಪೆನಿ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಸಂಗಮ್ ಜಂಕ್ಷನ್ ಪರಿಸರದಲ್ಲಿ ಮುಂದಿನ ದಿನಗಳಲ್ಲಿ ವಾಹನ ದಟ್ಟಣೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿದ್ದು, ಇಲ್ಲಿ ಅಂಡರ್ಪಾಸ್ ಮಾಡಿದರೆ ಸಾಕಷ್ಟು ಪ್ರಯೋಜನವಾಗಲಿದೆ. ಇಲಾಖೆಯಿಂದ ತಲ್ಲೂರು, ಸಂಗಮ್, ಹೆಮ್ಮಾಡಿಯಲ್ಲಿ ಸಿಗ್ನಲ್ ಲೈಟ್ ಅಳವಡಿಕೆ ಕುರಿತು ಚಿಂತಿಸಲಾಗುವುದು ಎಂದು ಡಿವೈಎಸ್ಪಿಯವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ