ಸಂಗಮ್ ಜಂಕ್ಷನ್: ವಾಹನಗಳದ್ದೇ ಟೆನ್ಶನ್
ಗೊಂದಲಮಯ ರಸ್ತೆ ಸಂಚಾರ, ಬ್ಯಾರಿಕೇಡ್ ಅಳವಡಿಕೆಗೆ ಆಗ್ರಹ
Team Udayavani, May 20, 2019, 6:00 AM IST
ಕುಂದಾಪುರ: ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಜಂಕ್ಷನ್ನಲ್ಲಿ ವಾಹನ ಸವಾರರಿಗೆ ರಸ್ತೆ ಕ್ರಾಸ್ ಮಾಡುವುದೇ ದೊಡ್ಡ ಸವಾಲಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಗೊಂದಲದ ವಾತವಾರಣ ಸೃಷ್ಟಿಯಾಗಿದೆ.
ಕುಂದಾಪುರದಿಂದ ಅಂಚೆ ಕಚೇರಿ ಮಾರ್ಗವಾಗಿ ಆನಗಳ್ಳಿ ಕಡೆಗೆ ತೆರಳ ಬೇಕಾದರೆ ದೊಡ್ಡ ಸಾಹಸವನ್ನೇ ಮಾಡ ಬೇಕಾಗಿದೆ. ಇನ್ನು ಅದೇ ರೀತಿ ಆನಗಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ಸಂಚರಿಸ ಬೇಕಾದರೂ, ಇದೇ ರೀತಿಯ ಸವಾಲು ಎದುರಿಸಬೇಕು. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಅಂಚೆ ಕಚೇರಿ ಮಾರ್ಗವಾಗಿ ತೆರಳಲು ಕ್ರಾಸ್ ಆಗಬೇಕಾದರೂ ಇನ್ನಷ್ಟು ಕಷ್ಟ ಪಡಬೇಕಾಗಿದೆ.
ರಸ್ತೆ ದಾಟುವುದೇ ಕಷ್ಟ
ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ನಿರಂತರವಾಗಿದ್ದು, ಇಲ್ಲಿ ಪಾದಚಾರಿ ಗಳಂತೂ ರಸ್ತೆ ದಾಟುವುದೇ ದುಸ್ತರವಾಗಿದೆ. ಯಾವ ಕಡೆಯಿಂದ ವಾಹನಗಳು ಬರುತ್ತದೋ ಎಂದು ಹೇಳುವುದು ಕಷ್ಟ. ಅದರಲ್ಲೂ ಹಿರಿಯರಂತೂ ಒಂದು ಬದಿ ಯಿಂದ ಮತ್ತೂಂದು ಕಡೆಗೆ ರಸ್ತೆ ದಾಟಲು ಸಾಧ್ಯವೇ ಇಲ್ಲದಂತಾಗಿದೆ. ಇನ್ನು ಆನಗಳ್ಳಿ ಕಡೆಗೆ ತೆರಳುವ ರಸ್ತೆಯಾಗಿ ಡಾ| ಬಿ.ಬಿ. ಹೆಗ್ಡೆ ಕಾಲೇಜು, ಹಿ.ಪ್ರಾ. ಶಾಲೆಯಿದ್ದು, ವಿದ್ಯಾರ್ಥಿಗಳಿಗೂ ತೊಂದರೆ ಯಾಗುತ್ತಿದೆ.
ಅಪಘಾತ ವಲಯ..!
ಸರಿಯಾದ ಸಂಚಾರ ವ್ಯವಸ್ಥೆ ಇಲ್ಲದಿರು ವುದರಿಂದ ಇದೊಂದು ಅಪಘಾತ ವಲಯವಾಗಿ ಮಾರ್ಪಡಾಗಿದೆ. ರಾತ್ರಿ ವೇಳೆಯಂತೂ ಇಲ್ಲಿ ಸಂಚರಿಸುವುದೇ ಅಸಾಧ್ಯ ಎನ್ನುವಂತಾಗಿದೆ.
ಟ್ರಾಫಿಕ್ ಜಾಂ
ಇದು ಹೆದ್ದಾರಿಯಾಗಿದ್ದು, ಪ್ರತಿ ದಿನ ಇಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಆಗಾಗ ಟ್ರಾಫಿಕ್ ಜಾಂ ಉಂಟಾಗುತ್ತಿರುತ್ತದೆ. ಅದರಲ್ಲೂ ಬೆಳಗ್ಗಿನ ಅವಧಿ ಹಾಗೂ ಸಂಜೆ ವೇಳೆ ಯಾವಾಗಲೂ ಇಲ್ಲಿ ವಾಹನ ದಟ್ಟಣೆ ಹೆಚ್ಚಿರುತ್ತದೆ.
ಇಲ್ಲಿ ಹೆದ್ದಾರಿಯ ಎರಡೂ ಕಡೆಗಳಲ್ಲಿ ಸಂಚಾರವನ್ನು ಆರಂಭಿಸದೇ ಇರುವುದರಿಂದ ಈ ಗೊಂದಲಮಯ ಸ್ಥಿತಿ ನಿರ್ಮಾಣವಾಗಿದ್ದು, ಅದಲ್ಲದೆ ಡಿವೈಡರ್ ಮಧ್ಯೆ ಹೆಚ್ಚಿನ ಅಂತರ ಕೂಡ ಇಲ್ಲದಿರುವುದರಿಂದ ಈ ಸಮಸ್ಯೆ ಉಂಟಾಗಿದ್ದು, ಇಲ್ಲಿ ವಾಹನಗಳ ವೇಗ ನಿಯಂತ್ರಿಸಲು ಬ್ಯಾರಿಕೇಡ್ಗಳನ್ನು ಹಾಕಿದರೆ ಉತ್ತಮ ಎನ್ನುವ ಬೇಡಿಕೆ ಸಾರ್ವಜನಿಕರಿಂದ ಕೇಳಿ ಬಂದಿದೆ.
ಬ್ಯಾರಿಕೇಡ್ ಅಳವಡಿಕೆಗೆ ಕ್ರಮ
ಸಂಗಮ್ ಜಂಕ್ಷನ್ನಲ್ಲಿರುವ ಸಂಚಾರಿ ವ್ಯವಸ್ಥೆಯ ಅವ್ಯವಸ್ಥೆ ಬಗ್ಗೆ ಕೂಡಲೇ ಪರಿಶೀಲಿಸಿ, ಸೂಕ್ತ ಕ್ರಮಕೈಗೊಳ್ಳಲಾಗುವುದು. ವಾಹನಗಳ ವೇಗ ನಿಯಂತ್ರಿಸಲು ಸದ್ಯದಲ್ಲಿಯೇ ಬ್ಯಾರಿಕೇಡ್ಗಳನ್ನು ಅಳವಡಿಸುವ ಕುರಿತಂತೆ ಚಿಂತಿಸಲಾಗಿದೆ.
-ಬಿ.ಪಿ. ದಿನೇಶ್ ಕುಮಾರ್, ಕುಂದಾಪುರ ಡಿವೈಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ