ಸಂಗಮ್‌ ರಸ್ತೆ ಸಂಚಾರ ಸ್ಥಗಿತ ; ಸಾರ್ವಜನಿಕರ ಆಕ್ರೋಶ


Team Udayavani, May 26, 2019, 6:10 AM IST

sangam-junction

ಕುಂದಾಪುರ: ಇಲ್ಲಿನ ಸಂಗಮ್‌ ಜಂಕ್ಷನ್‌ ಬಳಿ ಕುಂದಾಪುರ ನಗರದಿಂದ ಆನಗಳ್ಳಿಗೆ ಸಂಚರಿಸುವ ಮಾರ್ಗವನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರ ಸೂಚನೆಯಂತೆ ಸ್ಥಗಿತಗೊಳಿಸಲಾಗಿದ್ದು, ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಅವಘಢ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಸಿ ಡಾ| ಎಸ್‌. ಮಧುಕೇಶ್ವರ್‌ ಅವರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸಂಗಮ್‌ ಜಂಕ್ಷನ್‌ ಬಳಿ ಕುಂದಾಪುರದ ಅಂಚೆ ಕಚೇರಿ ಮಾರ್ಗದಿಂದ ಆನಗಳ್ಳಿಗೆ ಸಂಚರಿಸುವ ರಸ್ತೆಯನ್ನು ತಾತ್ಕಾಲಿಕವಾಗಿ ತಡೆಗೋಡೆಯಿಟ್ಟು ಶುಕ್ರವಾರ ಸಂಜೆಯಿಂದ ಸ್ಥಗಿತಗೊಳಿಸಲಾಗಿದೆ.

ಎಸಿಯವರ ಈ ನಿರ್ಧಾರದಿಂದ ಸಂಗಮ್‌, ಆನಗಳ್ಳಿ ಕಡೆಗೆ ಹಾಗೂ ಬೈಂದೂರು ಕಡೆಯಿಂದ ನೇರವಾಗಿ ನಗರಕ್ಕೆ ಬರುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈಗ ಹೆಮ್ಮಾಡಿ, ತಲ್ಲೂರು, ಆನಗಳ್ಳಿ ಕಡೆಯಿಂದ ಬರುವ ವಾಹನ ಸವಾರರು ಕುಂದಾಪುರ ನಗರಕ್ಕೆ ಬರಬೇಕಾದರೆ ಸಂತೆ ಮಾರುಕಟ್ಟೆ ಬಳಿ ಅಥವಾ ಶಾಸ್ತ್ರಿ ಸರ್ಕಲ್ ಮೂಲಕವಾಗಿ ಸುತ್ತು ಬಳಸಿ ಬರಬೇಕಿದೆ.

ತಡೆ ತೆರವಿಗೆ ಆಗ್ರಹ

ಸಂಗಮ್‌ ಜಂಕ್ಷನ್‌ ಬಳಿ ಅಳವಡಿಸಿರುವ ತಾತ್ಕಾಲಿಕ ತಡೆಗೋಡೆಯನ್ನು ತತ್‌ಕ್ಷಣ ತೆರವು ಮಾಡಬೇಕು, ಇಲ್ಲದಿದ್ದರೆ ಇಲ್ಲಿ ನಿತ್ಯ ಸಂಚರಿಸುವ ಸಾವಿರಾರು ವಾಹನ ಸವಾರರು ಪ್ರಯಾಸ ಪಡಬೇಕಾಗುತ್ತದೆ. ಅದಲ್ಲದೆ ಹೆದ್ದಾರಿಯಲ್ಲಿ ಆಗಾಗ ಟ್ರಾಫಿಕ್‌ ಜಾಂ ಕೂಡ ಆಗುತ್ತಿರುತ್ತದೆ. ಇದಲ್ಲದೆ ಆದರ್ಶ ಆಸ್ಪತ್ರೆಗೆ ಹೋಗಬೇಕಾದರೂ ಸುತ್ತುಬಳಸಿ ತೆರಳಬೇಕಾಗಿದೆ. ಶುಕ್ರವಾರ ಸಂಜೆ ವೇಳೆಗೆ ಇಲ್ಲಿ ಸೇರಿದ ಸಾರ್ವಜನಿಕರು ಕೂಡಲೇ ಇದನ್ನು ತೆರವು ಮಾಡಬೇಕು ಹಾಗೂ ಇಲ್ಲಿ ಅಗತ್ಯವಿರುವ ಅಂಡರ್‌ಪಾಸ್‌ ನಿರ್ಮಾಣಕ್ಕೆ ಕೂಡ ಎಸಿಯವರಿಗೆ ಆಗ್ರಹಿಸಿದ್ದಾರೆ.

ಪತ್ರಿಕೆ ಸರಣಿ ವರದಿ

ಸಂಗಮ್‌ ಜಂಕ್ಷನ್‌ನಲ್ಲಿರುವ ವಾಹನ ಸಂಚಾರದ ಗೊಂದಲಗಳ ಬಗ್ಗೆ ‘ಉದಯವಾಣಿ’ ಪತ್ರಿಕೆಯು ಕೆಲ ದಿನಗಳಿಂದ ನಿರಂತರವಾಗಿ ವರದಿ ಪ್ರಕಟಿಸಿ, ಸಂಬಂಧಪಟ್ಟವರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದೆ.

ಅಂಡರ್‌ಪಾಸ್‌ ನಿರ್ಮಿಸಲಿ

ಸಂಗಮ್‌ ಜಂಕ್ಷನ್‌ ಬಳಿಯ ಸಂಚಾರ ಗೊಂದಲಕ್ಕೆ ಅಂಡರ್‌ಪಾಸ್‌ ನಿರ್ಮಾಣವೇ ಪರಿಹಾರವಾಗಿದೆ. ಇಲ್ಲಿ ಸಂಚಾರಕ್ಕೆ ತಡೆಯೊಡ್ಡಿ ಏನೂ ಪ್ರಯೋಜನವಿಲ್ಲ. ಹೆದ್ದಾರಿ ಕಾಮಗಾರಿ ಮುಗಿಯುವವರೆಗೆ ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಿ. ಸಂಚಾರ ಸ್ಥಗಿತಗೊಳಿಸುವುದರಿಂದ ಸಾಕಷ್ಟು ತೊಂದರೆಯಾಗಲಿದೆ.
-ಶ್ರೀಧರ್‌ ಶೇರಿಗಾರ್‌, ಪುರಸಭೆ ಸದಸ್ಯ
ತಾತ್ಕಾಲಿಕ ಕ್ರಮವಷ್ಟೇ

ಈಗ ಸದ್ಯದ ಮಟ್ಟಿಗೆ ಅಪಘಾತ ಸಂಭವಿಸದಂತೆ ಈ ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸಲಾಗಿದೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದವರು ಇದಕ್ಕಿಂತ ಉತ್ತಮ ಸಲಹೆಯಿದ್ದರೆ ನೀಡಬಹುದು. ಅದರಂತೆ ಮುಂದುವರಿಯಲಾಗುವುದು. ಅಲ್ಲಿನ ಸೇತುವೆ ಸಂಚಾರಕ್ಕೆ ಮುಕ್ತವಾಗುವವರೆಗೆ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಆ ಬಳಿಕ ತೆರವುಗೊಳಿಸಲಾಗುವುದು.
– ಬಿ.ಪಿ. ದಿನೇಶ್‌ ಕುಮಾರ್‌, ಕುಂದಾಪುರ ಡಿವೈಎಸ್‌ಪಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.