ಉಡುಪಿ : ಶಾಲೆಗಳಿಗೆ ಮತ್ತೆ ಸ್ಯಾನಿಟರಿ ಪ್ಯಾಡ್‌ ಪೂರೈಕೆಗೆ ಆಗ್ರಹ


Team Udayavani, Nov 1, 2022, 8:57 AM IST

ಉಡುಪಿ : ಶಾಲೆಗಳಿಗೆ ಮತ್ತೆ ಸ್ಯಾನಿಟರಿ ಪ್ಯಾಡ್‌ ಪೂರೈಕೆಗೆ ಆಗ್ರಹ

ಉಡುಪಿ: ಶಾಲಾ ವಿದ್ಯಾರ್ಥಿನಿಯರಿಗೆ ಸರಕಾರ ಪೂರೈಸುತ್ತಿದ್ದ ಸ್ಯಾನಿಟರಿ ಪ್ಯಾಡ್‌ ಕೊರೊನಾ ಸಂದರ್ಭದಲ್ಲಿ ಸ್ಥಗಿತ ಗೊಂಡಿದ್ದು, ಪುನಃ ಪೂರೈಸುವಂತೆ ಆಗ್ರಹ ಕೇಳಿ ಬರುತ್ತಿದೆ.

ಆರೋಗ್ಯ ಇಲಾಖೆಯು “ಶುಚಿ’ ಯೋಜನೆಯಡಿ ಶಾಲೆಗಳಿಗೆ (ಸರಕಾರಿ ಹಾಗೂ ಅನುದಾನಿತ) ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ ಪೂರೈಸಲಾಗುತ್ತಿತ್ತು. ಕೊರೊನಾ ಸಂದರ್ಭ ಯೋಜನೆ ಸ್ಥಗಿತಗೊಂ ಡಿದ್ದು, ಈವರೆಗೂ ಆರಂಭಗೊಂಡಿಲ್ಲ. ಇದರಿಂದ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿನಿಯರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಮಾಸಿಕ ಋತುಸ್ರಾವದ ಸಂದರ್ಭ ಹೆಣ್ಣು ಮಕ್ಕಳು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಅನಾರೋಗ್ಯಕರ ವಸ್ತು ಬಳಸಬಾರದು ಮತ್ತು ಈ ಕಾರಣದಿಂದಲೇ ಶಾಲೆಗೆ ರಜಾ ಹಾಕಬಾರದು ಎಂಬ ಸದುದ್ದೇಶದಿಂದ “ಶುಚಿ’ ಯೋಜನೆ ಜಾರಿಗೆ ತರಲಾಗಿತ್ತು. 10ರಿಂದ 19 ವರ್ಷದ ವಿದ್ಯಾರ್ಥಿನಿಯರಿಗೆ ಮಾಸಿಕ 10 ಸ್ಯಾನಿಟರಿ ಪ್ಯಾಡ್‌ಗಳನ್ನು ತಲಾ 21.50 ರೂ.ಗಳಂತೆ ಖರೀದಿಸಿ ವಿತರಿಸಲು ನಿರ್ಧರಿಸಲಾಗಿತ್ತು. 47 ಕೋ.ರೂ. ಖರ್ಚು ಮಾಡಲು 2021ರಲ್ಲಿ ಸಂಪುಟದ ಅನುಮೋದನೆಯೂ ದೊರೆಕಿತ್ತು. ಆದರೆ ಅನುಷ್ಠಾನ ಮಾತ್ರ ಆಗಿಲ್ಲ.

ಕೇಂದ್ರ ಸರಕಾರವು ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್‌ ವಿತರಿಸುವ ಯೋಜನೆಯನ್ನು ರೂಪಿಸಿರುವು ದರಿಂದ ಅದರ ಅನುಕೂಲ ಕರ್ನಾಟಕಕ್ಕೂ ಆಗಬಹುದು ಎಂಬ ಕಾರಣಕ್ಕೆ ರಾಜ್ಯ ಸರಕಾರ ಇದನ್ನು ಜಾರಿ ಮಾಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ವಿದ್ಯಾರ್ಥಿನಿಯರ ಆಗ್ರಹ
ಸ್ಯಾನಿಟರಿ ಪ್ಯಾಡ್‌ಗಳ ಪೂರೈಕೆ ಪುನಃ ಆರಂಭಿಸಬೇಕು ಎನ್ನುವ ಆಗ್ರಹವನ್ನು ಶಾಲಾ, ಕಾಲೇಜು (ಪಿಯುಸಿ) ವಿದ್ಯಾರ್ಥಿನಿಯರು ಸರಕಾರದಿಂದ ನಡೆಯುವ ಮಕ್ಕಳ ಸಂಸತ್‌ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳನ್ನು ಆಗ್ರಹಿಸುತ್ತಿದ್ದಾರೆ. ಆದರೆ ಸರಕಾರದಿಂದ ಈ ಸಂಬಂಧ ನಿರ್ದಿಷ್ಟ ತೀರ್ಮಾನ ತೆಗೆದುಕೊಳ್ಳದೇ ಇರುವುದರಿಂದ ಅಧಿಕಾರಿಗಳು ಉತ್ತರಿಸಲಾಗದ ಸ್ಥಿತಿಯಲ್ಲಿದ್ದಾರೆ. ಸ್ಯಾನಿಟರಿ ಪ್ಯಾಡ್‌ ವಿದ್ಯಾರ್ಥಿನಿಯರಿಗೆ ಎಷ್ಟು ಆವಶ್ಯಕ ಎಂಬುದು ಸರಕಾರಕ್ಕೂ ತಿಳಿದಿದೆ. ಆದರೆ ಯೋಜನೆ ಅನುಷ್ಠಾನಕ್ಕೆ ಮುಂದಾಗದೇ ಇರುವುದಕ್ಕೆ ಸಾರ್ವ ಜನಿಕ ವಲಯದಲ್ಲೂ ಆಕ್ರೋಶ ಕೇಳಿಬರುತ್ತಿದೆ.

“ಶುಚಿ’ ಯೋಜನೆ ಯಡಿ ಶಾಲೆಗಳಿಗೆ ಪೂರೈಕೆ ಮಾಡುತ್ತಿದ್ದ ಸ್ಯಾನಿಟರಿ ಪ್ಯಾಡ್‌ಗಳನ್ನು ಕೊರೊನಾ ಸಂದರ್ಭದಲ್ಲಿ ಸ್ಥಗಿತ ಮಾಡಲಾಗಿತ್ತು. ಪುನಃ ಆರಂಭಿಸುವ ಬಗ್ಗೆ ಸರಕಾರದಿಂದ ಯಾವುದೇ ಸೂಚನೆ ಬಂದಿಲ್ಲ.
-ಡಾ| ನಾಗಭೂಷಣ ಉಡುಪ, ಡಿಎಚ್‌ಒ, ಉಡುಪಿ

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.