ಸಾಸ್ತಾನ ಬಸ್ ನಿಲ್ದಾಣ ಮಳೆಗಾಲದಲ್ಲಿ ಸದಾ ಜಲಾವೃತ
Team Udayavani, Jul 8, 2018, 4:12 PM IST
ಕೋಟ: ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಜೋರಾಗಿ ಮಳೆ ಬಂದರೆ ಸಾಸ್ತಾನ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲಾವೃತಗೊಳ್ಳುತ್ತದೆ. ಹೀಗಾಗಿ ಮಳೆಗಾಲದ ಬಹುತೇಕ ದಿನ ಇಲ್ಲಿ ಪ್ರಯಾಣಿಕರು ರಸ್ತೆಯಲ್ಲಿ ನಿಂತು ಬಸ್ ಕಾಯುವ ಸ್ಥಿತಿ ಎದುರಾಗಿದೆ. ಇದರಿಂದ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸ್ಥಳೀಯರಿಗೆ ಸಮಸ್ಯೆಯಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಸಂದರ್ಭ ಚರಂಡಿ, ಸರ್ವಿಸ್ ರಸ್ತೆ ಸರಿಯಾಗಿ ಮಾಡದಿರುವುದರಿಂದ ಮತ್ತು ಪರಿಹಾರ ಪಡೆದವರು ಕಟ್ಟಡ ತೆರವುಗೊಳಿಸ ದಿರುವುದರಿಂದ ನೀರು ಹರಿಯಲು ವ್ಯವಸ್ಥೆ ಇಲ್ಲದೆ ಈ ಸಮಸ್ಯೆ ಎದುರಾಗಿದೆ.
ಜನಪ್ರತಿನಿಧಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕಾಮಗಾರಿಯ ಗುತ್ತಿಗೆ ಪಡೆದ ನವಯುಗ ಕಂಪೆನಿಯವರು ಈ ಕುರಿತು ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ