ಸಾಸ್ತಾನ: ಸ್ಥಳೀಯರಿಗೆ ಮತ್ತೆ ಟೋಲ್ ಬಿಸಿ
Team Udayavani, Mar 23, 2019, 12:30 AM IST
ಕೋಟ: ಸಾಸ್ತಾನ ಟೋಲ್ಪ್ಲಾಜಾದಲ್ಲಿ ಕೋಟ ಜಿ.ಪಂ. ವ್ಯಾಪ್ತಿಯ ಎಲ್ಲ ಸ್ಥಳೀಯರಿಗೆ ಈ ತನಕ ಶುಲ್ಕ ರಿಯಾಯಿತಿ ನೀಡಲಾಗುತ್ತಿದ್ದು, ಈಗ ಈ ಜಿ.ಪಂ. ವ್ಯಾಪ್ತಿಯ ವಡ್ಡರ್ಸೆ ಗ್ರಾ.ಪಂ. ಭಾಗದವರಿಗೆ ಶುಕ್ರವಾರದಿಂದ ಟೋಲ್ ವಸೂಲಿ ಆರಂಭಿಸಲಾಗಿದೆ.
ಕೇವಲ ಮಾಬುಕಳದಿಂದ ಕರಿಕಲ್ಲುಕಟ್ಟೆ ತನಕ ಮಾತ್ರ ವಿನಾಯಿತಿ ನೀಡಲಾಗು ವುದು, ಉಪ್ಲಾಡಿ ಸೇತುವೆಯ ಅನಂತರದ ವಡ್ಡರ್ಸೆ ಗ್ರಾ.ಪಂ. ಭಾಗದ ವರು ಶುಲ್ಕ ನೀಡಬೇಕು ಎಂದು ಟೋಲ್ ಸಿಬಂದಿ ಹೇಳುತ್ತಿದ್ದಾರೆ. ವಾಹನ ಸವಾರರು ಈ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
ನೀತಿ ಸಂಹಿತೆ ಬಂದಾಗ ಬದಲಾಗುವ ವರಸೆ
ನವಯುಗದವರು ಕಳೆದ ಬಾರಿ ರಾಜ್ಯ ಚುನಾವಣೆಯ ಸಂದರ್ಭ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಸ್ಥಳೀಯರಿಂದ ಶುಲ್ಕ ವಸೂಲಿಗೆ ಮುಂದಾಗಿದ್ದರು ಮತ್ತು ವಿರೋಧ ವ್ಯಕ್ತವಾದಾಗ ಕೈಬಿಟ್ಟಿದ್ದರು. ಪ್ರಸ್ತುತ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಮತ್ತೆ ಟೋಲ್ ವಸೂಲಿಗೆ ಪ್ರಯತ್ನಿಸಲಾಗುತ್ತಿದೆ. ಚುನಾವಣೆಯ ಸಂದರ್ಭ ಸ್ಥಳೀಯರಿಗೆ ಹೋರಾಟ ಮಾಡಲು ಅವಕಾಶವಿಲ್ಲ, ಜನಪ್ರತಿನಿಧಿಗಳು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಈ ರೀತಿ ಮಾಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ