ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಕ್ರಮವಿಲ್ಲ


Team Udayavani, Jan 19, 2019, 12:30 AM IST

sasthana-kodi-kanyana.jpg

ಕೋಟ: ಏನಾದರೂ ಘಟಿಸದ ಹೊರತು ಕೆಲವೊಮ್ಮೆ ನಾವು ಎಚ್ಚೆತ್ತುಕೊಳ್ಳುವುದೇ ಇಲ್ಲ. ಇದಕ್ಕೊಂದು ಉದಾಹರಣೆ ಐರೋಡಿ ಗ್ರಾ.ಪಂ. ವ್ಯಾಪ್ತಿಯ ಸಾಸ್ತಾನ-ಕೋಡಿ ಕನ್ಯಾಣ ರಸ್ತೆಯಲ್ಲಿ ಅಪಾಯಕಾರಿಯಾಗಿ ಬಾಯ್ದೆರೆದ ಕೆರೆಯೊಂದಿದ್ದು,  ವಾಹನ ಸವಾರರು ಸ್ವಲ್ಪ ಎಡವಿದರೂ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಆದರೆ ಇಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ. 
 
ಅಂಕುಡೊಂಕು ರಸ್ತೆ 
ಕೋಡಿಕನ್ಯಾಣ ಮೀನುಗಾರಿಕೆ ಜಟ್ಟಿಗೆ ಸಂಪರ್ಕ ಬೆಸೆಯುವ ಪ್ರಮುಖ ರಸ್ತೆಗೆ ತಾಗಿಕೊಂಡು ಅಂಕುಡೊಂಕಾದ ತಿರುವಿನಲ್ಲಿÉ  ಅರ್ಧ ಎಕ್ರೆ ವಿಸ್ತೀರ್ಣದ ಈ ಅಪಾಯಕಾರಿ ಕೆರೆ ಇದೆ. ಇದರ  ಮೇಲ್ಭಾಗ ಸಂಪೂರ್ಣ ತೆರೆದ ಸ್ಥಿತಿಯಲ್ಲಿದ್ದು ವಾಹನ ಸವಾರರು ಕೊಂಚ ಎಡವಿದರೂ ಕೆರೆಗೆ ಬೀಳಬಹುದು. ಈ ಮೀನುಗಾರಿಕೆ ರಸ್ತೆ  ಸಾಸ್ತಾನದ ಮೂಲಕ ಕೋಡಿಕನ್ಯಾಣ, ಪಾರಂಪಳ್ಳಿ ಪಡುಕರೆಯನ್ನು ಸಂಪರ್ಕಿಸುವುದರಿಂದ ಪ್ರತಿದಿನ ಸಾವಿರಾರು ಮಂದಿ ಇಲ್ಲಿ  ಸಂಚರಿಸುತ್ತಾರೆ. 

ಮೂರು ಬಾರಿ ಸಣ್ಣ ಅವಘಡ
ಪೊದೆಗಳು ಆವರಿಸಿರುವುದರಿಂದ ಇಲ್ಲಿ ಕೆರೆಯನ್ನು ಗುರುತಿಸಲಾಗದ ಸ್ಥಿತಿ ಇದೆ.ಹೀಗಾಗಿ ಈ ಹಿಂದೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನ ಸವಾರರು ಮೂರು ಬಾರಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಕೂದಲೆಳೆ ಅಂತರದಿಂದ ಪಾರಾದ ಉದಾಹರಣೆಗಳಿವೆ.
  
ತಡೆಗೋಡೆ ಮನವಿ ಕೇಳ್ಳೋರಿಲ್ಲ!
ತಡೆಗೋಡೆ ನಿರ್ಮಿಸುವಂತೆ  ಈ ಹಿಂದೆ  ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಮುಂದೆ ದುರಂತ ಎದುರಾಗುವ ಮುನ್ನ  ತಡೆಬೇಲಿ ನಿರ್ಮಿಸಬೇಕು ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ. 

ದುರಂತ ನಡೆಯುವ ಮುನ್ನ ಎಚ್ಚೆತ್ತುಕೊಳ್ಳಿ 
ದೊಡ್ಡ ಮಟ್ಟದ ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕು. ಸ್ಥಳೀಯರು ಹಲವು ಬಾರಿ ಮನವಿ  ಮಾಡಿದ್ದೇವೆ. ಸಂಬಂಧಪಟ್ಟವರು ತಡೆಗೋಡೆ ನಿರ್ಮಿಸುವ ಕುರಿತು ಕ್ರಮಕೈಗೊಳ್ಳಬೇಕಾದ ಅಗತ್ಯವಿದೆ. 
– ಆಣ್ಣಪ್ಪ ಕುಂದರ್‌ ಕೋಡಿ,
ಸ್ಥಳೀಯ ನಿವಾಸಿ

ಗ್ರಾ.ಪಂ.ಅನುದಾನದಲ್ಲಿ ಸಾಧ್ಯವಿಲ್ಲ
ಕೆರೆಗೆ ತಡೆಬೇಲಿ ನಿರ್ಮಿಸುವಂತೆ ಹಲವಾರು ಬಾರಿ ಮನವಿ ಬಂದಿದೆ. ಆದರೆ  ಗ್ರಾ.ಪಂ. ಅನುದಾನದಲ್ಲಿ ಈ ಕಾಮಗಾರಿ ಸಾಧ್ಯವಿಲ್ಲ. ಹೀಗಾಗಿ ಜಿ.ಪಂ., ತಾ.ಪಂ ಅಥವಾ ಶಾಸಕರು, ಸಂಸದರ ನಿಧಿಯಿಂದ ಕಾಮಗಾರಿ ನಡೆಯಬೇಕು. ಹಿಂದೆ ಗ್ರಾಮಸಭೆಯಲ್ಲೂ ಈ ವಿಚಾರ ಪ್ರಸ್ತಾವವಾಗಿದೆ ಮತ್ತು ನಾನು ಕೂಡ  ಜನಪ್ರತಿನಿಧಿಗಳ ಬಳಿ ಬೇಡಿಕೆ ಸಲ್ಲಿಸಿದ್ದೇನೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈ ರಸ್ತೆ ಕೋಡಿ ಗ್ರಾ.ಪಂ. ಹಾಗೂ ಸಾಲಿಗ್ರಾಮ ಪ.ಪಂ.ಗೆ ತಾಗಿಕೊಂಡಿದ್ದು ಅಲ್ಲಿನ ನಿವಾಸಿಗಳು   ಮನವಿ ಮಾಡಬೇಕಿದೆ. ನಮ್ಮ ಗ್ರಾ.ಪಂ. ವತಿಯಿಂದ  ಮತ್ತೂಮ್ಮೆ ಎಲ್ಲರಿಗೂ ಮನವಿ ಮಾಡುತ್ತೇವೆ.
– ಮೊಸೇಸ್‌ ರೋಡಿಗ್ರಸ್‌, ಅಧ್ಯಕ್ಷರು ಗ್ರಾ.ಪಂ. ಐರೋಡಿ

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.