ಉಡುಪಿ: ಸಾರ್ವಕರ್ ಫ್ಲೆಕ್ಸ್: ಬಿಜೆಪಿ ಯುವ ಮೋರ್ಚದಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
Team Udayavani, Aug 17, 2022, 12:42 PM IST
ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಹಾಕಿರುವ ಸಾರ್ವಕರ್ ಫ್ಲೆಕ್ಸ್ಗೆ ಬಿಜೆಪಿ ಯುವ ಮೋರ್ಚ ಸದಸ್ಯರು ಪ್ರತ್ಯೇಕವಾಗಿ ಮಾಲಾರ್ಪಣೆ ಮಾಡಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಬುಧವಾರ ಮುಂಜಾನೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಾರ್ವಕರ್ ಫ್ಲೆಕ್ಸ್ಗೆ ಮಾಲಾರ್ಪಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚ ಸದಸ್ಯರು ಪ್ರತ್ಯೇಕವಾಗಿ ಸಾರ್ವಕರ್ ಫ್ಲೆಕ್ಸ್ಗೆ ಮಾಲಾರ್ಪಣೆ ಮಾಡಿ ಸಮೀಪದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಯುವ ಮೋರ್ಚ ಸದಸ್ಯರು ಕಾಂಗ್ರೆಸ್ ಕಚೇರಿ ಮುಂದೆ ಸಾರ್ವಕರ್ ಪರ ಘೋಷಣೆ ಕೂಗಿದರು. ಪರಿಸ್ಥಿತಿಯನ್ನು ಅರಿತ ಪೊಲೀಸರು, ಕೂಡಲೇ ಸ್ಥಳಕ್ಕೆ ಧಾವಿಸಿ, ಪ್ರತಿಭಟನಾ ನಿರತ ಸದಸ್ಯರನ್ನು ವಾಪಾಸ್ ಹೋಗುವಂತೆ ಮನವಿ ಮಾಡಿದರು. ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು.
ಸದ್ಯ ಬ್ರಹ್ಮಗಿರಿ ವೃತ್ತ ವಿವಾದದ ಕೇಂದ್ರ ಬಿಂದುವಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ