ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಗೋಪಾಲ ಆಚಾರ್ಯ
Team Udayavani, Apr 12, 2018, 7:15 AM IST
ಹೆಬ್ರಿ: ಮಕ್ಕಳಿಗೆ ಉತ್ತಮ ಸಂಸ್ಕಾರಯುತ ಶಿಕ್ಷಣವನ್ನು ನೀಡಿದಾಗ ಉತ್ತಮ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಲು ಸಾಧ್ಯ. ಜೀವನ ಮೌಲ್ಯಗಳನ್ನು ಬಾಲ್ಯದಿಂದಲೇ ಪಡೆಯಲು ಇಂತಹ ಧಾರ್ಮಿಕ ಶಿಬಿರದ ಅವಶ್ಯಕತೆ ಇದೆ.ಇದನ್ನು ಪಡೆದುಕೊಂಡು ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯಕರ್ತವ್ಯಎಂದು ಹೆಬ್ರಿ ರಾಘವೇಂದ್ರ ಮಠದ ಧರ್ಮದರ್ಶಿ ವೇದಮೂರ್ತಿ ಗೋಪಾಲ ಆಚಾರ್ಯ ತಿಳಿಸಿದರು.
ಅವರು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮತ್ತು ರಾಘವೇಂದ್ರ ಮಠದ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ರಾಘವೇಂದ್ರ ಮಠದಲ್ಲಿ 11 ದಿನ ನಡೆಯುವ ಧಾರ್ಮಿಕ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಂಸ್ಕೃತಿ ಉಳಿಯಲು ಎಲ್ಲಾ ಮಠ, ದೇವಸ್ಥಾನಗಳು ಧಾರ್ಮಿಕ ಶಿಕ್ಷಣ ಕೇಂದ್ರವಾಗಬೇಕು. ದೆ„ನಂದಿನ ಆಚರಣೆಗಳಲ್ಲಿ ಸಂಧ್ಯಾವಂದನೆ, ದೇವರ ಪೂಜೆ ಇತ್ಯಾದಿಗಳನ್ನು ಅನುಷ್ಠಾನಗೊಳಿಸಿದಾಗ ಧಾರ್ಮಿಕ ಜಾಗೃತಿಯೊಂದಿಗೆ ಜೀವನ ಸಾರ್ಥಕಗೊಳ್ಳುವುದು ಎಂದು ಮಡಾಮಕ್ಕಿಯ ನಿವೃತ್ತ ಶಿಕ್ಷಕ ವಿದ್ವಾನ್ಅನಂತ ತಂತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬೆಂಗಳೂರು ವಿದ್ಯಾಪೀಠದ ಪ್ರಾಧ್ಯಾಪಕ ಹೃಷಿಕೇಷ ,ದಾಮೋದರ , ಗಿಲ್ಲಾಳಿ ವಿಷ್ಣುಮೂರ್ತಿ ಆಚಾರ್ಯ, ಶಿಕ್ಷಕ ಪ್ರಕಾಶ ಭಟ್, ಶ್ರೀನಿವಾಸ ಭಟ್, ಗೋವಿಂದ ಆಚಾರ್ಯ ಪೋಷಕರಾದ ಸೌಭಾಗ್ಯ , ಲಲಿತ, ವೀಣಾ, ಶಾಂತ ಮೊದಲಾದವರು ಉಪಸ್ಥಿತರಿದ್ದರು. ಸಮಿತಿ ಸದಸ್ಯ ಗಿಲ್ಲಾಳಿ ಪದ್ಮನಾಭ ಆಚಾರ್ಯ ಸ್ವಾಗತಿಸಿ, ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ಕಾರ್ಯಕ್ರಮ ನಿರೂಪಿಸಿ, ಕಬ್ಬಿನಾಲೆ ರಾಮಚಂದ್ರ ಭಟ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!