ನಾಳೆ ಶಾಲಾರಂಭ: ಬಿಸಿಯೂಟ ನೌಕರರಿಗಿಲ್ಲ ಈ ತಿಂಗಳ ವೇತನ!

ಸರಕಾರಿ ಆದೇಶದಿಂದ ಗೊಂದಲದಲ್ಲಿ 1.18 ಲಕ್ಷ ಅಕ್ಷರದಾಸೋಹ ಸಿಬಂದಿ

Team Udayavani, May 15, 2022, 6:45 AM IST

ನಾಳೆ ಶಾಲಾರಂಭ: ಬಿಸಿಯೂಟ ನೌಕರರಿಗಿಲ್ಲ ಈ ತಿಂಗಳ ವೇತನ!

ಕುಂದಾಪುರ: ರಾಜ್ಯಾದ್ಯಂತ ಮೇ 16ರಿಂದ ಶಾಲೆಗಳು ಆರಂಭಗೊಳ್ಳಲಿವೆ. ಮೊದಲ ದಿನದಿಂದಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಇರಲಿದೆ. ಆದರೆ ಸರಕಾರದ ಆದೇಶದ ಪ್ರಕಾರ ಬಿಸಿಯೂಟ ನೌಕರರಿಗೆ ಮಾತ್ರ ಈ ತಿಂಗಳಿನ ವೇತನ ಸಿಗುವುದಿಲ್ಲ.

ಸರಕಾರವು ಬಿಸಿಯೂಟ ತಯಾರಕರು ಮತ್ತು ಸಹಾಯಕ ಸಿಬಂದಿಗೆ ವರ್ಷದ 10 ತಿಂಗಳು ಮಾತ್ರ ಗೌರವಧನ ನೀಡುತ್ತಿದ್ದು, ಎಪ್ರಿಲ್‌-ಮೇಯಲ್ಲಿ ಕೊಡುವುದಿಲ್ಲ. ಈ ಬಾರಿ ಮೇ 16ರಿಂದ ಶಾಲೆಗಳು ಆರಂಭಗೊಳ್ಳುತ್ತಿವೆ. ಬಿಸಿಯೂಟ ಆರಂಭಕ್ಕೆ ಬೇಕಾದ ಎಲ್ಲ ಅಗತ್ಯ ಸಾಮಗ್ರಿಗಳನ್ನು ಈಗಾಗಲೇ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ. ಆದರೆ ಕೆಲಸಕ್ಕೆ ತೆರಳಿದರೆ ಸಂಬಳ ಸಿಗುವುದೇ ಎನ್ನುವ ಗೊಂದಲ ರಾಜ್ಯದ 1.18 ಲಕ್ಷ ಮಂದಿ ಬಿಸಿಯೂಟ ಸಿಬಂದಿಯದ್ದು.

ಆದೇಶವೇನು?
ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಸರಕಾರಿ ಶಾಲೆಗಳಲ್ಲಿ ಪ್ರತೀ ವರ್ಷ ಮಾ. 31ರ ಅಂತ್ಯಕ್ಕೆ ಅಡುಗೆ ಸಿಬಂದಿಯನ್ನು ಬಿಡುಗಡೆ ಮಾಡಿ, ಮತ್ತೆ ಅದೇ ಸಿಬಂದಿಯನ್ನು ಮುಂದಿನ ಶೈಕ್ಷಣಿಕ ವರ್ಷದ ಜೂ. 1ರಂದು ನೇಮಕ ಮಾಡಿಕೊಳ್ಳಬೇಕು. ಮೇ 16ರಿಂದ ಕೆಲಸ ನಿರ್ವಹಿಸಿದರೆ ಈ 16 ದಿನಗಳ ವೇತನವನ್ನು ಇಲಾಖೆ ನೀಡಬಹುದೇ ಎನ್ನುವ ಪ್ರಶ್ನೆ ಸಿಬಂದಿಯದು.

1.18 ಲಕ್ಷ ಸಿಬಂದಿ
ರಾಜ್ಯದಲ್ಲಿ 47,250 ಮಂದಿ ಅಡುಗೆ ತಯಾರಕರಿದ್ದು, 71,336 ಮಂದಿ ಸಹಾಯಕರು ಸೇರಿ ಒಟ್ಟು 1,18,586 ಮಂದಿ ಅಕ್ಷರ ದಾಸೋಹ ಸಿಬಂದಿಯಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 1,866 ಮತ್ತು ದ.ಕ.ದಲ್ಲಿ 3,213 ಮಂದಿ ಇದ್ದಾರೆ. ಹೊಸ ಆದೇಶದಂತೆ ಈ ಶೈಕ್ಷಣಿಕ ಸಾಲಿನಿಂದ ಅಡುಗೆ ತಯಾರಕರಿಗೆ ಮಾಸಿಕ 3,700 ರೂ. ಮತ್ತು ಸಹಾಯಕರಿಗೆ ಮಾಸಿಕ 3,600 ರೂ. ಗೌರವ ಧನವನ್ನು ನೀಡಲಾಗುತ್ತಿದೆ.

ಈ ಬಾರಿ ಮೇ ತಿಂಗಳಲ್ಲೇ ಶಾಲಾರಂಭ ಆಗುತ್ತಿರುವುದರಿಂದ ಈ ಗೊಂದಲ ಉಂಟಾಗಿದೆ. ಅಧಿಕಾರಿಗಳು ಮೇ 16ರಿಂದಲೇ ಬರುವಂತೆ ತಿಳಿಸಿದ್ದಾರೆ. ಆದರೆ ಈ 16 ದಿನಗಳ ವೇತನ ಸಿಗಲಿದೆಯೇ ಎನ್ನುವ ಬಗ್ಗೆ ಗೊಂದಲವಿದೆ. ಎಪ್ರಿಲ್‌ನಲ್ಲಿ ವೇತನ ಇರದಿದ್ದರೂ 10 ದಿನ ಕೆಲಸ ಮಾಡಿದ್ದೇವೆ. ಈಗ ಮತ್ತೆ 16 ದಿನ ಹೀಗಾದರೆ ಕಷ್ಟ. ಸರಕಾರ ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಿ.
– ಸಿಂಗಾರಿ ಪೂಜಾರ್ತಿ, ಅಧ್ಯಕ್ಷೆ,
ಕುಂದಾಪುರ ಅಡುಗೆ ಸಿಬಂದಿ ಸಂಘ

ಸರಕಾರ 10 ತಿಂಗಳು ಬಿಸಿಯೂಟ ಸಿಬಂದಿಗೆ ವೇತನ ನೀಡುತ್ತಿದ್ದು, ಇದರಲ್ಲಿಯೇ ದಸರಾ ರಜೆ, ಇನ್ನಿತರ ರಜೆ ಸೇರಿ ಒಂದು ತಿಂಗಳು ಹೆಚ್ಚುವರಿಯಾಗಿ ಕೊಡುತ್ತಿದೆ. ಈ ಬಾರಿ ಎಪ್ರಿಲ್‌ನಲ್ಲಿ 10 ದಿನ ಮತ್ತು ಮೇಯಲ್ಲಿ 16 ದಿನ ಕಾರ್ಯನಿರ್ವಹಿಸಿದ್ದನ್ನು ಕೂಡ ಲೆಕ್ಕಹಾಕಿ, ಒಂದು ತಿಂಗಳಿಗಿಂತ ಹೆಚ್ಚಿನ ದಿನ ಆಗಿದ್ದರೆ, ವೇತನ ಕೊಡಲಾಗುವುದು. ಈ ಬಗ್ಗೆ ಸಚಿವರ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಗಿದೆ. ಅದಲ್ಲದೆ ಅಕ್ಷರದಾಸೋಹ ಸಿಬಂದಿಗೆ ಇನ್ನಷ್ಟು ಸೌಲಭ್ಯ ನೀಡುವ ಪ್ರಸ್ತಾವವೂ ಸರಕಾರದ ಹಂತದಲ್ಲಿ ಆಗುತ್ತಿದೆ.
– ಮಂಜುನಾಥ ಎಸ್‌.ಸಿ., ಹಿರಿಯ ಸಹಾಯಕ ನಿರ್ದೇಶಕರು, ಮಧ್ಯಾಹ್ನದ ಊಟದ ಯೋಜನೆ, ಬೆಂಗಳೂರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.