ಶಿರ್ಲಾಲು: ಶಾಸನ ಪತ್ತೆ


Team Udayavani, Nov 1, 2018, 10:18 AM IST

3110kpe1.jpg

ಕಾಪು: ಶಿರ್ಲಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಾಡಿಯಂಗಡಿ ಪ್ರದೇಶದಲ್ಲಿ 14ನೇ ಶತಮಾನದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ವಿದ್ಯಾರ್ಥಿಗಳಾದ ಶ್ರುತೇಶ್‌ ಆಚಾರ್ಯ ಮೂಡುಬೆಳ್ಳೆ ಹಾಗೂ ಸುಭಾಸ್‌ ನಾಯಕ್‌ ಬಂಟಕಲ್ಲು ಪತ್ತೆ ಮಾಡಿದ್ದಾರೆ.

ಈ ಕ್ಷೇತ್ರ ಕಾರ್ಯ ಅನ್ವೇಷಣೆಗೆ ಶಿರ್ಲಾಲು ಗ್ರಾ.ಪಂ. ಮಾಜಿ ಸದಸ್ಯ ವಿಠಲ ಆಚಾರ್ಯ ಹಾಗೂ ಹರೀಶ್‌ ಆಚಾರ್ಯ ಪಡಿಬೆಟ್ಟು-ಶಿರ್ಲಾಲು ಅವರು ಸಹಕಾರ ನೀಡಿದ್ದು ಶಾಸನ ಪಡಿಯಚ್ಚಿನ ಮೊದಲ ಪ್ರತಿಯನ್ನು ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರದಲ್ಲಿ ಸಂರಕ್ಷಣೆಗೆ ನೀಡಲಾಗಿದೆ.

ಈ ಶಾಸನವು ಅಪ್ಪು ಶೇರಿಗಾರ ಇವರ ಗದ್ದೆಯ ಬದುವಿನಲ್ಲಿ ಪತ್ತೆಯಾಗಿದೆ. ಶಾಸನವು 71 ಸೆಂ.ಮೀ ಉದ್ದ, 42 ಸೆಂ.ಮೀ ಅಗಲ ಹಾಗೂ 8 ಸೆಂ.ಮೀ. ದಪ್ಪವನ್ನು ಹೊಂದಿದೆ. 22 ಸಾಲುಗಳನ್ನು ಹೊಂದಿರುವ ಶಾಸನವು ಕನ್ನಡ ಲಿಪಿಯಲ್ಲಿದ್ದು, ಸಂಸ್ಕೃತ ಮತ್ತು ಕನ್ನಡ ಭಾಷೆಯನ್ನು ಒಳಗೊಂಡಿದೆ.

ಬಳಪದ ಕಲ್ಲಿನಿಂದ ಮಾಡಲ್ಪಟ್ಟಿರುವ ಈ ದಾನ ಶಾಸನವು ಮೇಲ್ಭಾಗದಲ್ಲಿ ಸೂರ್ಯ-ಚಂದ್ರ, ಖಡ್ಗ, ಕಾಲುದೀಪ, ಶಿವಲಿಂಗ ಮತ್ತು ನಂದಿಯ ಕೆತ್ತನೆಯನ್ನು ಹೊಂದಿದೆ. ಅನಂತರದಲ್ಲಿ ಶಾಸನದ ಪಾಠವನ್ನು ಕಾಣಬಹುದು. ಶಾಸನದಲ್ಲಿ ಶಕವರುಷ 1312, (ಕ್ರಿಸ್ತ ಶಕೆಗೆ ಪರಿವರ್ತಿಸಿದಾಗ 1390ಕ್ಕೆ ಸರಿ ಹೊಂದುತ್ತದೆ) ಅರಸ, ಸ್ಥಳನಾಮ ಹಾಗೂ ದಾನದ ಮಾಹಿತಿಯನ್ನು ಒಳಗೊಂಡಿದೆ.

ಶಕವರುಷ 1312ರ ಕಾರ್ತಿಕ ಶುದ್ದ 15 ಗುರುವಾರದಂದು ಅರಿರಾಯ ಗಂಡರ ದಾವಣಿ ವೀರ ಚೆನ್ನರಸ (ಚೆಂನರಸ) ಒಡೆಯರು ಹಾಗೂ ಭಾರದ್ವಾಜ ಗೋತ್ರದ ತಮ್ಮಣ್ಣ (ತಂಮ್ಮಂಣ) ಸಿನಬಾವರ ಮಗ ಪಾಂಡ್ಯಪ್ಪ ಅರಸರು ಸಿರುವಳಲ (ಶಿರ್ಲಾಲು) ಒಳಗೆ ಬಾರಕೂರ ಹೊರಗಣ ಸೋಮೇಶ್ವರ ದೇವರ ನಂದಾದೀವಿಗೆ 3 ಕಾಟಿ ಗದ್ಯಾಣವನ್ನು ದಾನ ನೀಡಿರುವ ವಿವರ ಶಾಸನದಲ್ಲಿ ಕಾಣಬಹುದು.

ವಿಜಯನಗರ ಅರಸರ ಪ್ರಾಬಲ್ಯ ಬಾರಕೂರು ಪ್ರದೇಶದಲ್ಲಿ ಹೆಚ್ಚು ಕಂಡು ಬಂದ ಹಾಗೆ ಈ ಸ್ಥಳಗಳಲ್ಲಿ ಇಲ್ಲಿನ ಸ್ಥಳೀಯ ಅರಸರ ಪ್ರಾಬಲ್ಯ ಹೆಚ್ಚಾಗಿತ್ತು ಎನ್ನುವುದು ಇತಿಹಾಸಕಾರ ಉಡುಪಿ ಪೂರ್ಣ ಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ| ಜಗದೀಶ್‌ ಶೆಟ್ಟಿ ಅವರ ಅಭಿಪ್ರಾಯವಾಗಿದೆ.

ಶಾಸನದಲ್ಲಿ ಉಲ್ಲೇಖೀತವಾಗಿರುವ ಸಿರುವಳಲು ಎಂಬ ಸ್ಥಳವು ಇಂದು ಶಿರ್ಲಾಲು ಆಗಿ ಪರಿವರ್ತನೆ ಆಗಿರಬಹುದೆಂದು ಶ್ರುತೇಶ್‌ ಆಚಾರ್ಯ ಮೂಡುಬೆಳ್ಳೆ ಹಾಗೂ ಸುಭಾಸ್‌ ನಾಯಕ್‌ ಬಂಟಕಲ್ಲು ಅವರು ಶಾಸನದ ಆಧಾರದ ಮೇಲೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.