ಮಲ್ಪೆಗೆ ಬರಲಿದೆ ಸ್ಕೂಬಾ ಡೈವಿಂಗ್‌


Team Udayavani, Mar 26, 2017, 12:32 PM IST

skooba-diving.jpg

ಉಡುಪಿ: ಕ್ರೀಡಾ ಇಲಾಖೆಯಿಂದ ಮುಡೇìಶ್ವರ ಮತ್ತು ಮಲ್ಪೆಗೆ ಸ್ಕೂಬಾ ಡೈವಿಂಗ್‌ಗೆ ತಲಾ 1 ಕೋ.ರೂ. ಬಿಡುಗಡೆ ಮಾಡುವುದಾಗಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಹಂತದಲ್ಲಿ ಕಾಪುವಿಗೆ 1 ಕೋ.ರೂ. ನೀಡುವ ಭರವಸೆ ನೀಡಿದರು. ಕಾಪು ಕಡಲಕಿನಾರೆಯಲ್ಲಿ ಸ್ಕೂಬಾ ಡೈವಿಂಗ್‌ ಸೆಂಟರ್‌ ನಡೆಸಲು ಅನುಮತಿ ನೀಡುವ ಕುರಿತು ಚರ್ಚಿಸಲಾಯಿತು. ಸ್ಕೈ ಡೈವಿಂಗ್‌ ನಡೆಸುವ ಬಗ್ಗೆಯೂ ಚರ್ಚೆ ನಡೆಯಿತು.

ಜಿಲ್ಲೆಯನ್ನು ಪ್ರವಾಸೋದ್ಯಮದಲ್ಲಿ ಮುಂಚೂಣಿಗೆ ತರಲು ಪೂರಕ ಹಾಗೂ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಿ. ತೆಗೆದುಕೊಂಡ ನಿರ್ಧಾರಗಳನ್ನು ಅನುಷ್ಠಾನಕ್ಕೆ ತನ್ನಿ. ಯೋಜನೆಗಳ ಅನುಷ್ಠಾನಕ್ಕೆ ಸಮಯಮಿತಿ ನಿಗದಿಪಡಿಸಿ ಎಂದು ಸಚಿವರು ಹೇಳಿದರು. ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಅರ್ಹ ಫ‌ಲಾನುಭವಿಗಳೆಲ್ಲರಿಗೂ ಟ್ಯಾಕ್ಸಿ ವಿತರಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಮೂರು ಹೌಸ್‌ ಬೋಟ್‌
ಈಗಾಗಲೇ ಜಿಲ್ಲೆಯಲ್ಲಿ ಮೂರು ಹೌಸ್‌ ಬೋಟ್‌ ಉದ್ಯಮಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಆರ್‌. ಅನಿತಾ ಮಾಹಿತಿ ನೀಡಿದರು.

ಬೀಚ್‌ ಸಂಪರ್ಕ ರಸ್ತೆ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಯಿತು. ಕೇಂದ್ರ ಸರಕಾರ ಜಿಲ್ಲೆಗೆ ನೀಡಿದ 9.13 ಕೋ.ರೂ. ವೆಚ್ಚದಲ್ಲಿ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಉಳಿದಿರುವ ಕಾಮಗಾರಿಗಳ ಬಗ್ಗೆ ಕ್ರಮ ವಹಿಸಲು ಸೂಚಿಸಲಾಯಿತು.

ಹೋಮ್‌ ಸ್ಟೇ ನೋಂದಣಿಯನ್ನು ಸಮಯಮಿತಿಯೊಳಗೆ ನಡೆಸಲು ಎಸ್ಪಿ ಅವರಿಗೆ ಹಾಗೂ ಎನ್‌ಒಸಿ ನೀಡುವ
ಗ್ರಾ.ಪಂ.ಗಳಿಗೆ ಸುತ್ತೋಲೆ ಮೂಲಕ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಹೇಳಿದರು. ಹೋಂ ಸ್ಟೇ ಮತ್ತು ಸಂಬಂಧಪಟ್ಟವರ ಜತೆ ಸೇರಿ ಕಾರ್ಯಾಗಾರವೊಂದನ್ನು ನಡೆಸಿ ಎಂದೂ ಸಚಿವರು ಹೇಳಿದರು.

ಬೀಚ್‌ಗಳನ್ನು ಅಭಿವೃದ್ಧಿ ಪಡಿಸಲು ಟೆಂಡರ್‌ ಪಡೆದ ಸಂಸ್ಥೆಗಳ ಪ್ರತಿನಿಧಿಗಳಾದ ಸುದೇಶ್‌, ಯತೀಶ್‌ ಬೈಕಂಪಾಡಿ, ಮನೋಹರ ಶೆಟ್ಟಿ, ಅಪ್ನಾ ಹಾಲಿಡೇಸ್‌ನ ನಾಗರಾಜ್‌ ಹೆಬ್ಟಾರ್‌ ಬೀಚ್‌ ಅಭಿವೃದ್ಧಿಗೆ ಹಲವು ಸಲಹೆಗಳನ್ನು ನೀಡಿದರು.

ಏನಿದು ಸ್ಕೂಬಾ ಡೈವಿಂಗ್‌?
ಸಮುದ್ರದ ಆಳಕ್ಕೆ ಈಜಿಕೊಂಡು ಹೋಗುವುದು ಸ್ಕೂಬಾ ಡೈವಿಂಗ್‌. ಸೆಲ್ಫ್ ಕಂಟೇನ್‌x ಅಂಡರ್‌ವಾಟರ್‌ ಡೈವಿಂಗ್‌ನ್ನು ಸಂಕುಚಿತಗೊಳಿಸಿ ಸ್ಕೂಬಾ ಎಂದು ಕರೆಯಲಾಗುವುದು. ಮೊದಲು ಹೋಗುವವರಿಗೆ 30-40 ಮೀ. ಆಳಕ್ಕೆ ಬಿಡುತ್ತಾರೆ. ಹೋಗುವಾಗ ಆಕ್ಸಿಜನ್‌ ಸಿಲಿಂಡರ್‌, ನೀರಿನೊಳಗೆ ಹೋದರೂ ನೀರು ಶರೀರಕ್ಕೆ ತಾಗದಂತೆ ಬೇಕಾದ ಜಾಕೆಟ್‌ ಮೊದಲಾದ ಸಲಕರಣೆಗಳನ್ನು ಅಳವಡಿಸಲಾಗುತ್ತದೆ. ಇದೊಂದು ಹವ್ಯಾಸ. ಇದನ್ನು ಪ್ರವಾಸೋದ್ಯಮಕ್ಕೂ ಅನ್ವಯಿಸಬಹುದಾಗಿದೆ. ಇದಕ್ಕೆ ಹೋಗುವ ಮುನ್ನ ತರಬೇತಿ ಕೊಡುತ್ತಾರೆ. ಪ್ರಸ್ತುತ ಮುಡೇìಶ್ವರದ ನೇತ್ರಾಣಿ ದ್ವೀಪದಲ್ಲಿ ಗೋವಾದವರು ನಡೆಸುವ ಸ್ಕೂಬಾ ಡೈವಿಂಗ್‌ ಕೇಂದ್ರವಿದೆ. ಈಗ ಸಚಿವರು ಪ್ರಸ್ತಾವಿಸಿರುವುದು ಸರಕಾರದ ವತಿಯಿಂದ ಆರಂಭವಾಗುವ ಸ್ಕೂಬಾ ಡೈವಿಂಗ್‌ ಕೇಂದ್ರ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.