ಅಳಿವೆಕೋಡಿ – ತಾರಾಪತಿ ಕಡಲಿನ ಅಬ್ಬರ: ಮೀನುಗಾರರ ಶೇಡ್, ತೀರದ ಕಲ್ಲುಗಳು ಸಮುದ್ರ ಪಾಲು
Team Udayavani, Jul 19, 2020, 8:13 PM IST
ಉಪ್ಪುಂದ: ಪಡುವರಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಅಳಿವೆಕೋಡಿ – ತಾರಾಪತಿ ಪ್ರದೇಶದ ಸಮುದ್ರ ತೀರದ ಕಲ್ಲಗಳು ಕಡಲಿನ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿವೆ.
ಶನಿವಾರ ರಾತ್ರಿ ಸುರಿದ ಮಳೆ ಹಾಗೂ ಕಡಲಿನ ಅರ್ಭಟಕ್ಕೆ ಅಳಿವೆಕೋಡಿ – ತಾರಾಪತಿಯದೊಂದಿ ಮನೆಯ ಸಮೀಪದ ಸಮುದ್ರ ದಡದಲ್ಲಿ ರಕ್ಷಣೆಗೆ ಹಾಕಲಾಗಿದ್ದ ಕಲ್ಲುಗಳು ಸಮುದ್ರ ಪಾಲಾಗಿದೆ.
ಸುಮಾರು 50ಮೀ.ವರೆಗೆ ತಡೆಗೋಡೆಗೆ ಹಾಕಿರುವ ಕಲ್ಲುಗಳು ಕೊಚ್ಚಿಹೋಗಿದ್ದು, ಮೀನುಗಾರರ ಒಂದು ಶೆಡ್ ಕಡಲಿನ ಪಾಲಾಗಿದೆ.
ಈ ಭಾಗದಲ್ಲಿ ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಹೆಚ್ಚಾಗುತ್ತಿದ್ದು ಹೀಗೆ ಮುಂದುವರಿದರೆ 100ಕ್ಕೂ ಹೆಚ್ಚು ಮೀನುಗಾರರ ಮನೆಗಳು ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಗ್ರಾಮ ಪಂಚಾಯಿತ್ ಸದಸ್ಯ ಸುರೇಶ ಬೆಸ್ಕೂರ್ ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಕರಾವಳಿಯಲ್ಲಿ ಕಳೆದ ಎರಡು ಮೂರು ನಿರಂತರ ಭಾರೀ ಮಳೆಯಾಗಿರುವುದರಿಂದ ಕಡಲಿನಲ್ಲಿ ಭಾರೀ ಗಾತ್ರದ ಅಲೆಗಳು ಉಂಟಾಗಿರುವುದರಿಂದ ಕಡಲು ಬಿರುಸುಗೊಂಡು ಇನ್ನಷ್ಟು ಕಡಲ ಕೊರೆತ ಸಾಧ್ಯತೆ ಇದೆ ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.
ಕಡಲ್ಕೊರೆತ ಸ್ಥಾನಕ್ಕೆ ಯಾವ ಅಧಿಕಾರಿಗಳು ಭೇಟಿ ನೀಡದಿರುವುದಕ್ಕೆ ಮೀನುಗಾರರು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳಕ್ಕೆ ಪಂಚಾಯತ್ ಸದಸ್ಯ ವೀರಭದ್ರ್ ಖಾರ್ವಿ, ಮಾಜಿ ಸದಸ್ಯ ನಾಗೇಶ್ ಖಾರ್ವಿ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ