ಮುಂದುವರಿದ ಕಲ್ಕೊರೆತ; ಶಾಸಕ ಸುಕುಮಾರ ಶೆಟ್ಟಿ ಭೇಟಿ
Team Udayavani, Aug 10, 2019, 4:53 PM IST
ಶಿರೂರು: ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದಂತೆ ಕಡಲ್ಕೊರೆತವೂ ಹೆಚ್ಚಾಗಿದೆ. ಪಡುವರಿ ಸಮೀಪದ ದೊಂಬೆ ,ಕಳರ್ಕಟ್ಟೆ ಸಾಯಿವಿಶ್ರಾಮ್ ರೆಸಾರ್ಟ್ ಬಳಿ ಕಡಲ್ಕೊರೆತ ಉಂಟಾಗಿದೆ. ಬೆಳಿಗ್ಗೆಯಿಂದ ದೊಡ್ಡ ತೆರೆಗಳು ಅಪ್ಪಳಿಸುತ್ತಿದೆ. ಕಡಲ ದಂಡೆಯ ಸಮೀಪದ ಮನೆಯವರು ಆತಂಕದಲ್ಲಿದ್ದಾರೆ.
ಸಮುದ್ರದ ದಂಡೆಗೆ ಕಟ್ಟಿದ ಶಿಲೆ ಕಲ್ಲಿನ ಆವರಣ ಸಮುದ್ರ ಪಾಲಾಗಿದೆ. ಈ ಭಾಗದಲ್ಲಿ ಪ್ರತಿವರ್ಷ ಕಡಲ್ಕೊರೆತ ಉಂಟಾಗುತ್ತಿದ್ದು ಸ್ವಲ್ಪ ಭಾಗದಲ್ಲಿ ತಡೆಗೋಡೆ ನಿರ್ಮಿಸಿದರೂ ಸಹ ಅಸಮರ್ಪಕ ಕಾಮಗಾರಿ ಪರಿಣಾಮ ಕಡಲ ಕಿನಾರೆಯವರಿಗೆ ಸಮಸ್ಯೆಯಾಗುತ್ತಿದೆ . ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ
ಶಾಸಕರ ಭೇಟಿ
ತ್ರಾಸಿ, ಸನ್ಯಾಸಿ ಬಲ್ಲೆ, ಕಂಚುಗೋಡು, ಗಂಗೊಳ್ಳಿ ಗ್ರಾಮಗಳ ಕಡಲ್ಕೊರೆತ ಪ್ರದೇಶಕ್ಕೆ ಬೈಂದೂರು ಶಾಸಕರಾದ ಬಿ ಎಂ ಸುಕುಮಾರ ಶೆಟ್ಟಿ ಬಂದರು ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿ ಪರಿಶೀಲನೆ ನಡೆಸಿದರು. ಜನರ ಆಸ್ತಿ ಪಾಸ್ತಿ, ಮೀನುಗಾರಿಕಾ ಸಂಪರ್ಕ ರಸ್ತೆ ಹಾನಿಗೊಳಗಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಅಂದಾಜು ಪಟ್ಟಿ ತಯಾರಿಸಿ ಕೂಡಲೇ ಕೆಲಸ ಪ್ರಾರಂಭಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ