ಸೀ ವಾಕ್‌ ಆಗಲಿವೆ ಇನ್ನೆರಡು ಬ್ರೇಕ್‌ ವಾಟರ್‌


Team Udayavani, Nov 13, 2018, 9:26 AM IST

sea-walk.jpg

ಗಂಗೊಳ್ಳಿ: ಕಡಲ್ಕೊರೆತ ತಡೆಗೆ ಗಂಗೊಳ್ಳಿ ಹಾಗೂ ಕೋಡಿಯಲ್ಲಿ ನಿರ್ಮಿಸಿರುವ ಬ್ರೇಕ್‌ ವಾಟರನ್ನು ಮಲ್ಪೆ ಮಾದರಿಯಲ್ಲಿ ಸೀ ವಾಕ್‌ ಆಗಿ ಪರಿವರ್ತಿಸುವ ಮೂಲಕ ಪ್ರವಾಸೋದ್ಯಮ ಉತ್ತೇಜಿಸಲು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಬಂದರು ಮತ್ತು ಮೀನುಗಾರಿಕೆ ಇಲಾಖೆಗಳು ಇದಕ್ಕೆ ಸಹಕಾರ ನೀಡಲಿವೆ. ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಈಗಾಗಲೇ ಇಲಾಖೆ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಹಾಗೂ ಕೋಡಿಯಲ್ಲಿ ನಿರ್ಮಾಣವೂ ಇದರ ಒಂದು ಭಾಗ. ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರವೆನ್ನುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ 102 ಕೋ.ರೂ. ವೆಚ್ಚದಲ್ಲಿ ಕೋಡಿಯಲ್ಲಿ 900 ಮೀ. ಹಾಗೂ ಗಂಗೊಳ್ಳಿಯಲ್ಲಿ 700 ಮೀ. ಉದ್ದದ ಬ್ರೇಕ್‌ ವಾಟರ್‌ ಯೋಜನೆ 2015ರಲ್ಲಿ ಮಂಜೂರಾಗಿತ್ತು. ಟೆಟ್ರಾಫೈಡ್‌ ಮೂಲಕ ತಡೆಗೋಡೆಗಳನ್ನು ನಿರ್ಮಿಸಲಾಗಿದ್ದು, ಕಾಮಗಾರಿ ಪ್ರಸ್ತುತ ಪೂರ್ಣಗೊಂಡಿದೆ. ಇವೆರಡನ್ನು ಸೀ ವಾಕ್‌ ಆಗಿ ಪರಿವರ್ತಿಸುವ ವಿಚಾರ ಇತ್ತೀಚೆಗೆ ಜಿಲ್ಲಾಧಿಕಾರಿ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾವವಾಗಿತ್ತು.

ಯೋಜನೆಯೇನು?
ಮಲ್ಪೆಯಲ್ಲಿ ಈಗಾಗಲೇ ಸೀವಾಕ್‌ ನಿರ್ಮಿಸಲಾಗಿದ್ದು, ಅದೇ ಮಾದರಿಯಲ್ಲಿ ಕೋಡಿ ಹಾಗೂ ಗಂಗೊಳ್ಳಿಯ ಬ್ರೇಕ್‌ ವಾಟರ್‌ಗಳಿಗೆ ಸೈಡ್‌ವಾಲ್‌ ನಿರ್ಮಿಸಿ, ಪ್ರವಾಸಿಗರಿಗೆ ನಡೆದಾಡಲು, ಕಡಲ ತೆರೆಗಳ ಉಬ್ಬರ – ಇಳಿತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರವಾಸೀ ವಾಹನ ನಿಲುಗಡೆಗೆ ಸಮೀಪದಲ್ಲೇ ವ್ಯವಸ್ಥೆ, ಹೈ ಮಾಸ್ಟ್‌ ದೀಪ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ಸಹಿತ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವುದು ಯೋಜನೆಯಲ್ಲಿ ಸೇರಿವೆ.

ಮಂಗಳೂರಿನ  ಬೆಂಗ್ರೆಯಲ್ಲೂ ಸೀ ವಾಕ್‌
ಮಂಗಳೂರಿನ ಬೆಂಗ್ರೆಯಲ್ಲಿಯೂ ಕಡಲ್ಕೊರೆತ ತಡೆಗೋಡೆಯನ್ನು ಸೀ ವಾಕ್‌ ಆಗಿ ಮಾರ್ಪಡಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಒಂದೆಡೆ ಫಲ್ಗುಣಿ ನದಿ, ಮತ್ತೂಂದೆಡೆ ಅರಬಿ ಸಮುದ್ರವಿರುವ ಬೆಂಗ್ರೆಯಲ್ಲಿ ಮಲ್ಪೆ ಮಾದರಿಯಲ್ಲಿ ಸೀವಾಕ್‌ ಅಭಿವೃದ್ಧಿಪಡಿಸುವ ಸಲುವಾಗಿ ರಾಜ್ಯ ಪ್ರವಾಸೋದ್ಯಮ ಇಲಾಖೆಗೆ ಸದ್ಯವೇ ಪ್ರಸ್ತಾವನೆ ಕಳುಹಿಸಲಾಗುವುದು. ಇಲ್ಲಿಂದ ಮಂಗಳೂರು ನಗರಕ್ಕೆ 15 ಕಿ.ಮೀ. ದೂರವಿದ್ದು, ಇಲ್ಲಿ ಸೀ ವಾಕ್‌ ಆದರೆ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಬಹುದು.
ಉದಯ್‌ ಕುಮಾರ್‌ ಶೆಟ್ಟಿ, ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ದ.ಕ. 

ಯೋಜನೆ ರೂಪಿಸಲಾಗುತ್ತಿದೆ
ಮಲ್ಪೆ ಮಾದರಿಯಲ್ಲಿ ಕೋಡಿ ಹಾಗೂ ಗಂಗೊಳ್ಳಿಯಲ್ಲಿಯೂ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಸಹಕಾರದಲ್ಲಿ ಸೀ ವಾಕ್‌ ಯೋಜನೆಯನ್ನು ರೂಪಿಸಲಾಗುತ್ತಿದೆ. ಕುಂದಾಪುರದ ಕಡಲ ತೀರವನ್ನು ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. 
 ಅನಿತಾ, ಬಿ.ಆರ್‌. ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಉಡುಪಿ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.