ಸೆ.15; ಚಿಟ್ಪಾಡಿಯಲ್ಲಿ ದೇವಾಡಿಗ ಯುವ ಸಂಘಟನೆಯ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ
Team Udayavani, Sep 11, 2019, 11:25 AM IST
ಉಡುಪಿ:ದೇವಾಡಿಗರ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಹಾಗೂ ಶ್ರೀಏಕನಾಥೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಚಿಟ್ಪಾಡಿ ಉಡುಪಿ ಇದರ ಸಹಕಾರದೊಂದಿಗೆ ಸೆಪ್ಟೆಂಬರ್ 15ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಚಿಟ್ಪಾಡಿಯ ದೇವಾಡಿಗ ಸಭಾ ಭವನದಲ್ಲಿ ಬೆಳಗ್ಗೆ 11ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಹಾಗೂ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಉಡುಪಿ ದೇವಾಡಿಗರ ಸಂಘದ ಅಧ್ಯಕ್ಷ ಸೀತಾರಾಮ ಕೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಮಾಜ ಸೇವಕ ಗುರ್ಮೆ ಸುರೇಶ ಶೆಟ್ಟಿ, ಉಡುಪಿ, ದ.ಕ ಸಹಕಾರಿ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಮುಂಬೈ ದೇವಾಡಿಗ ಸಂಘದ ಅಧ್ಯಕ್ಷ ರವಿ.ಎಸ್.ದೇವಾಡಿಗ, ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಅಧ್ಯಕ್ಷ ಡಾ.ದೇವರಾಜ ಕೆ, ರಾಜ್ಯ ದೇವಾಡಿಗ ಸಂಘದ ಮಾಜಿ ಅಧ್ಯಕ್ಷ ವಾಮನ ಮರೋಳಿ, ಶ್ರೀಏಕನಾಥೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ರತ್ನಾಕರ ಜಿಎಸ್, ನ್ಯಾಯವಾದಿ ಪದ್ಮನಾಭ ಸೇರಿಗಾರ, ಬ್ರಹ್ಮಾವರ ದೇವಾಡಿಗ ಸಂಘದ ಅಧ್ಯಕ್ಷ ಶಂಭು ಸೇರಿಗಾರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ನಂತರ ಬಲೆ ತೆಲಿಪಾಲೆ ಖ್ಯಾತಿಯ ಚೈತನ್ಯ ಕಲಾವಿದರು ಬೈಲೂರು ತಂಡದಿಂದ ಪ್ರಸನ್ನ ಶೆಟ್ಟಿ ವಿರಚಿತ “ಪಿರ ಪೋಂಡುಗೆ” ಎಂಬ ಹಾಸ್ಯಮಯ ತುಳು ನಾಟಕ ಪ್ರದರ್ಶನವಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ